ಲಾಕ್ಡೌನ್ ಆದೇಶ ಪಾಲಿಸಿ ಸಹಕರಿಸಲು ಮನವಿ
Team Udayavani, Apr 7, 2020, 5:19 PM IST
ಕುಮಟಾ: ಪಟ್ಟಣದ ಕೊಳಗೇರಿ ಪ್ರದೇಶಗಳಾದ ಹೊಸಹೆರವಟ್ಟಾದ ಮುಕ್ರಿಕೇರಿ, ಬಗ್ಗೊàಣದ ಇಪ್ಪಡಿ,
ಹೆರವಟ್ಟಾದ ಮುಕ್ರಿ ಕಾಲೋನಿಯ ಪ್ರತಿ ಕುಟುಂಬಕ್ಕೆ ಸರ್ಕಾರದ ನಿರ್ದೇಶನದಂತೆ ಅರ್ಧ ಲೀಟರ್ ಹಾಲಿನಂತೆ ಒಟ್ಟೂ 100 ಲೀಟರ್ ಹಾಲನ್ನು ಉಚಿತವಾಗಿ ಶಾಸಕ ದಿನಕರ ಶೆಟ್ಟಿ ಸೋಮವಾರ ವಿತರಿಸಿದರು.
ನಂತರ ಮಾತನಾಡಿದ ಅವರು, ಪ್ರತಿಯೊಬ್ಬರೂ ಸರತಿ ಸಾಲಿನಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಹಾಲನ್ನು ಪಡೆಯಬೇಕು. ಕೊರೊನಾ ವೈರಸ್ ತಡೆಗಟ್ಟಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಸಾಕಷ್ಟು ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಬಡ ವರ್ಗದ ಅರ್ಹ ಫಲಾನುಭವಿಗಳಿಗೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿ ಕಷ್ಟಕ್ಕೆ ನೆರವಾಗುತ್ತಿದೆ. ಜನಸಾಮಾನ್ಯರೂ ಲಾಕ್ ಡೌನ್ ಆದೇಶ ಪಾಲಿಸಿ ಕೋವಿಡ್ 19 ತಡೆಗಟ್ಟಲು ಸಂಪೂರ್ಣ ಸಹಕಾರ ನೀಡಬೇಕು ಎಂದರು.
ಈ ಪ್ರದೇಶಗಳ ನಿವಾಸಿಗಳಿಗೆ ಟೋಕನ್ ಮೂಲಕ ಹಾಲು ವಿತರಿಸಬೇಕು. ಇದರಿಂದ ಸಾಮಾಜಿಕ ಅಂತರ ಸಾಧ್ಯವಾಗುತ್ತದೆ. ಪುರಸಭೆ ಈಗಾಗಲೇ 1,500 ಲೀಟರ್ ಹಾಲಿಗೆ ಬೇಡಿಕೆ ಸಲ್ಲಿಸಿದ್ದು, ಇನ್ನೂ ಹೆಚ್ಚಿನ ಹಾಲನ್ನು ಪೂರೈಸಲು ಸರ್ಕಾರದ ಮೇಲೆ ಒತ್ತಡ ತರುತ್ತೇನೆ ಎಂದರು. ಪುರಸಭೆ ಮುಖ್ಯಾಧಿಕಾರಿ ಸುರೇಶ ಎಂ.ಕೆ. ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ