ಕುಮಟಾ : ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ
Team Udayavani, May 20, 2022, 7:59 PM IST
ಕುಮಟಾ : ತಾಲೂಕಿನಾದ್ಯಂತ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದೆರಡು ದಿನಗಳಿಂದ ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದ ನದಿ, ಹಳ್ಳ , ಕೊಳ್ಳ, ಗದ್ದೆಗಳು ಮಳೆ ನೀರಿನಿಂದ ತುಂಬಿಕೊಂಡಿದೆ.
ಬುಧವಾರ ಸಂಜೆ ಆರಂಭಗೊಂಡ ಮಳೆಯು ಶುಕ್ರವಾರದವರೆಗೂ ಮುಂದುವರೆದಿದೆ. ಬುಧವಾರ ಮಧ್ಯಾಹ್ನ ಮತ್ತು ಸಂಜೆ ವೇಳೆ ತುಂತುರು ಮಳೆ ಸುರಿದಿತ್ತು. ತಡರಾತ್ರಿ ಬಿರುಸಾಗಿ ಮಳೆಯಾಗಿತ್ತು. ಗುರುವಾರ ನಸುಕಿನ ಜಾವ ಆರಂಭಗೊಂಡ ತುಂತುರು ಮಳೆ ಮುಂದುವರೆಯುತ್ತಲೇ ಇದೆ. ದಟ್ಟ ಕಾರ್ಮೋಡ ಕವಿದು, ತಂಗಾಳಿ ಬೀಸುತ್ತಿದ್ದು , ಬಿಸಿಲು ಕಾಣದೇ ವಾತಾವರಣ ಸಂಪೂರ್ಣ ತಂಪಾಗಿದೆ. ಮೂಲೆ ಸೇರಿದ್ದ ಛತ್ರಿಗಳು, ಸ್ವೆಟರ್ ಮತ್ತು ಜರ್ಕಿನ್ ಜಡಿ ಮಳೆ ಮತ್ತು ತೀವ್ರ ಚಳಿಯಿಂದಾಗಿ ಹೊರಬಂದಿವೆ.
ಮಳೆಯ ಅಬ್ಬರ ಅಷ್ಟಾಗಿ ಇರದಿದ್ದರೂ ಚಿಟಿ ಚಿಟಿ ಮಳೆಯಿಂದಾಗಿ ರಸ್ತೆಗಳಲ್ಲಿ ಜನರ ಸಂಚಾರ ಕಡಿಮೆ ಇದೆ. ರಸ್ತೆಗಳಲ್ಲಿ ವಾಹನ ಸಂಚಾರ ಮತ್ತು ಜನರ ಓಡಾಟ ವಿರಳವಾಗಿದೆ. ಮಳೆಯ ಕಾರಣದಿಂದ ವ್ಯಾಪಾರಿಗಳ ಮುಖದಲ್ಲಿಯೂ ಕಳೆಗಟ್ಟಿದೆ.ಮಾರುಕಟ್ಟೆ ಮತ್ತು ವಾಣಿಜ್ಯ ಸ್ಥಳಗಳಲ್ಲಿ ಬಹುಪಾಲು ಅಂಗಡಿಗಳು ಇಡೀ ದಿನ ಬಿಕೋ ಎನ್ನುವಂತಿದ್ದವು. ಹೊಲಗಳಲ್ಲಿ ನೀರು ನಿಂತಿದ್ದು, ರಸ್ತೆಗುಂಡಿಗಳಲ್ಲೂ ಮಳೆ ನೀರು ತುಂಬಿ ವಾಹನ ಸವಾರರು ಪರದಾಡಿದರು. ರಸ್ತೆಯಲ್ಲಿ ವಾಹನಗಳು ನಿಧಾನಗತಿಯಲ್ಲಿ ಸಂಚರಿಸಿದ್ದರಿಂದ, ದಟ್ಟಣೆಯೂ ಕಂಡುಬಂತು.
ಇದನ್ನೂ ಓದಿ : ಗುಜರಾತ್, ಹಿಮಾಚಲದಲ್ಲೂ ಕಾಂಗ್ರೆಸ್ ಸೋಲು ಖಚಿತ: ಪ್ರಶಾಂತ್ ಕಿಶೋರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಲ್ಯವಿವಾಹ ತಡೆಗೆ ರಾಜ್ಯಾದ್ಯಂತ ಸ್ಫೂರ್ತಿ: ಹೆಚ್ಚುತ್ತಿರುವ ಪಿಡುಗು ನಿಯಂತ್ರಣಕ್ಕೆ ಈ ಕ್ರಮ
ರಸಪ್ರಶ್ನೆ ಸ್ಪರ್ಧೆ: 10 ಲ.ರೂ. ಬಂಪರ್ ಬಹುಮಾನ!
ಪದವಿ ಕಾಲೇಜು ಶುಲ್ಕ ನಿಗದಿ ಮಾಡಿದ ಕಾಲೇಜು ಶಿಕ್ಷಣ ಇಲಾಖೆ
ಅಗ್ನಿಪಥ ಯೋಜನೆ ಜಾರಿ ವಿರೋಧಿಸಿ ರಾಜಭವನ ಮುತ್ತಿಗೆಗೆ ಯುವ ಕಾಂಗ್ರೆಸ್ ಯತ್ನ
ಪೊಲೀಸ್ ಕಾನ್ಸ್ಟೇಬಲ್ : ಕನಿಷ್ಠ ಸೇವೆ 6ರಿಂದ 5 ವರ್ಷಕ್ಕೆ ಇಳಿಕೆ: ಡಿಸಿಪಿ ನಿಶಾ ಜೇಮ್ಸ್
MUST WATCH
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ನೀವು ಬಿಜೆಪಿಗೆ ಸೇರಿ, ನಾವು ಶಿವಸೇನೆಯನ್ನು ಮತ್ತೆ ಕಟ್ಟುತ್ತೇವೆ : ರಾವತ್
13,940 ಮೊಳೆಗಳಲ್ಲಿ ಕಲಾಕೃತಿ : India Book of Records ಗೆ ದಾಖಲಾದ ಕಾಪುವಿನ ಶಶಾಂಕ್
ಮನುಷ್ಯನ ಮನಸ್ಸು ಒಂದೇ ರೀತಿ ಇರುವುದಿಲ್ಲ.. ಯಾಕೆ ?
ಹೊಸ ಸೇರ್ಪಡೆ
26/11 ಮುಂಬೈ ದಾಳಿಯ ಪ್ರಾಜೆಕ್ಟ್ ಮ್ಯಾನೇಜರ್ ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ಥಾನ
‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರವಿಮರ್ಶೆ: ಸಿನಿ ಕನಸಿನ ಹುಡುಗರ ಜಾಲಿರೈಡ್
ಹೋಗುವವರು ಹೋಗಿ.. ನಾನು ಹೊಸ ಶಿವಸೇನೆ ರಚಿಸುತ್ತೇನೆ: ಉದ್ಧವ್ ಠಾಕ್ರೆ
ಕುಡುಪು ದೇಗುಲಕ್ಕೆ ಬಾಳೆಹಣ್ಣು ಪೂರೈಕೆ ವಿಚಾರದಲ್ಲಿ ವಿವಾದ
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್