ಮೂಲ ಸೌಕರ್ಯವಿಲ್ಲದ ಕುಮಟಾ ಹೊಸ ಬಸ್‌ ನಿಲ್ದಾಣ


Team Udayavani, May 3, 2019, 4:01 PM IST

uttar-kannada-2-tdy..

ಕುಮಟಾ: ದಿನನಿತ್ಯ ಸಾವಿರಾರು ಪ್ರಯಾಣಿಕರು ಬಂದು ಹೋಗುವ ಪಟ್ಟಣದ ಹೊಸ ಬಸ್‌ ನಿಲ್ದಾಣ ಸುಸಜ್ಜಿತವಾಗಿದ್ದರೂ, ಕೆಲ ಮೂಲ ಸೌಕರ್ಯ ಹಾಗೂ ಸ್ವಚ್ಛತೆಯಿಂದ ದೂರ ಉಳಿದಿದೆ.

ಕುಮಟಾ ಬಸ್‌ ನಿಲ್ದಾಣ ಸದಾ ಪ್ರಯಾಣಿಕರಿಂದ ಗಿಜಿಗುಡುತ್ತಿರುತ್ತದೆ. ಜಿಲ್ಲೆ ಹಾಗೂ ರಾಜ್ಯದ ಎಲ್ಲ ಭಾಗಗಳಿಗೆ ಸಾರಿಗೆ ಸಂಚಾರಕ್ಕೆ ಕುಮಟಾ ಕೇಂದ್ರ ಸ್ಥಾನವಾಗುವುದರಿಂದ ಹಾಗೂ ರೈಲು ನಿಲ್ದಾಣವೂ ಸನಿಹವೇ ಇರುವುದರಿಂದ ದೂರ ಸಂಚಾರದ ಪ್ರಯಾಣಿಕರ ಓಡಾಟ ಬಹಳ ಇರುತ್ತದೆ. ಕೆಲ ವರ್ಷದ ಹಿಂದೆ ತರಾತುರಿಯಲ್ಲಿ ಹೊಸ ಬಸ್‌ ನಿಲ್ದಾಣ ಕಾಮಗಾರಿ ಮುಗಿಸಿ ಉದ್ಘಾಟನೆ ಮಾಡಿದ ಸಂದರ್ಭದಲ್ಲಿ ನಿಲ್ದಾಣದಲ್ಲಿ ಹಾಕಲಾದ ಅಸಮರ್ಪಕ ಆಸನ ವ್ಯವಸ್ಥೆ ಬಗೆಗೆ ಜನರಿಂದ ಸಾಕಷ್ಟು ಅಸಮಾಧಾನ ವ್ಯಕ್ತವಾಗಿತ್ತು. ಅಷ್ಟೊಂದು ದೊಡ್ಡ ನಿಲ್ದಾಣದೊಳಗೆ ಕೇವಲ ಎರಡು ಸಾಲುಗಳಲ್ಲಿ ಕಿರಿದಾದ ಮತ್ತು 4-5 ಮಂದಿ ಕುಳಿತುಕೊಳ್ಳಬಹುದಾದ ಕಲ್ಲಿನ ಹಲಗೆಗಳನ್ನು ಬೇಂಚಿನ ಮಾದರಿಯಲ್ಲಿ ಹಾಕಲಾಗಿದೆ. ನಿಲ್ದಾಣದಲ್ಲಿ ಒಟ್ಟೂ 16 ಬೇಂಚುಗಳನ್ನು ಹಾಕಲಾಗಿದ್ದು 70-80 ಮಂದಿ ಮಾತ್ರ ಕೂರಬಹುದಾಗಿದೆ. ಮುಖ್ಯವಾಗಿ ಇಂಥ ಬೇಂಚುಗಳಲ್ಲಿ ಪುರುಷರು ಹಾಗೂ ಮಹಿಳೆಯರು ಒಟ್ಟಿಗೆ ಕುಳಿತುಕೊಳ್ಳುವುದಕ್ಕೆ ಮುಜುಗರ ಪಡುವಷ್ಟು ಕಿರಿದಾಗಿದೆ.

ಪ್ರಯಾಣಿಕರಿಗೆ ಅಗತ್ಯವಿರುವ ಶೌಚಾಲಯ ಹಾಗೂ ಶುದ್ಧ ಕುಡಿಯುವ ನೀರಿನ ಸಮಸ್ಯೆ ಇತ್ತೀಚಿಗೆ ಹೆಚ್ಚಾಗಿ ಕಾಡತೊಡಗಿದೆ. ಇರುವ ಕುಡಿಯುವ ನೀರಿನ ಘಟಕವೂ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ನಿಲ್ದಾಣದ ಸುತ್ತಲೂ ಕಸ ಹಾಗೂ ಪ್ಲಾಸ್ಟಿಕ್‌ಗಳು ತುಂಬಿ ಗಬ್ಬು ನಾರುತ್ತಿದೆ. ಶೌಚಾಲಯದ ನಿರ್ವಹಣೆ ಸರಿಯಾಗಿಲ್ಲದೇ ಕೆಲ ಶೌಚಾಲಯಗಳ ಬಾಗಿಲನ್ನು ಮುಚ್ಚಲಾಗಿದೆ. ಇನ್ನು ತೆರೆದ ಶೌಚಾಲಯವೂ ಸ್ವಚ್ಛತೆಯಿಲ್ಲದೆ, ಮೂತ್ರದ ವಾಸನೆ ಮೂಗಿಗೆ ರಾಚುವಂತಾಗಿದೆ. ಸಂಬಂಧಪಟ್ಟವರು ಯಾರೂ ಇಂಥ ದಿನನಿತ್ಯದ ಸಮಸ್ಯೆ ಬಗ್ಗೆ ಗಮನಕೊಟ್ಟಿಲ್ಲದಿರುವುದು ಎದ್ದು ಕಾಣುತ್ತಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಅಂಚಿನಲ್ಲೇ ಹೊಸ ಬಸ್‌ ನಿಲ್ದಾಣ ಇರುವುದರಿಂದ ಹಾಗೂ ಬಸ್‌ಗಳ ಆಗಮನ ನಿರ್ಗಮನದ ದ್ವಾರ ಅವೈಜ್ಞಾನಿಕವಾಗಿರುವುದರಿಂದ ಹೆದ್ದಾರಿಯಲ್ಲಿ ಟ್ರಾಫಿಕ್‌ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಬಸ್‌ ನಿಲ್ದಾಣ ಹೆದ್ದಾರಿ ಪಕ್ಕದಲ್ಲಿ ಬಂದ ನಂತರ ಇಲ್ಲಿ ಬಹಳ ಸಮಸ್ಯೆಯುಂಟಾಗಿದೆ. ದಿನದ ಎಲ್ಲಾ ಸಮಯದಲ್ಲೂ ಇಲ್ಲಿ ಟ್ರಾಫಿಕ್‌ ಕಿರಿಕಿರಿಯಾಗುತ್ತಿದ್ದು ತುರ್ತಾಗಿ ಇದಕ್ಕೊಂದು ಪರಿಹಾರ ಕಂಡುಕೊಳ್ಳಬೇಕಿದೆ. ಬಸ್‌ ಚಾಲಕರಿಗೂ ಇದು ಸೂಕ್ಷ್ಮ ಸ್ಥಳವೇ ಆಗಿದೆ. ಸ್ವಲ್ಪ ಗಮನ ತಪ್ಪಿದರೂ ಅಪಘಾತವಾಗುತ್ತದೆ. ಅನಾಹುತವಾಗುವ ಮುನ್ನ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳುವದು ಸಾರ್ವಜನಿಕರ ಹಿತದೃಷ್ಟಿಯಿಂದ ಒಳಿತು. – ರವೀಂದ್ರ ಭಟ್ಟ ಸೂರಿ. ಅಧ್ಯಕ್ಷರು, ಸರಕಾರಿ ನೌಕರರ ಸಂಘ. ಕುಮಟಾ
•ಕೆ. ದಿನೇಶ ಗಾಂವ್ಕರ

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shirur landslide; Green signal for National highway traffic in three or four days?

Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?

Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ

Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ

1-ccc-aa

Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್‌ ಬೇಸರ

1–eewr-aa-aa

Shiruru hill collapse; ಮಣ್ಣು ತೆಗೆಯುವ ಕಾರ್ಯಾಚರಣೆ ವೇಳೆ ಸಿಕ್ಕ ಹೋಟೆಲ್ ಅವಶೇಷಗಳು

1–eewr-aa

Shiruru hill collapse; ನದಿಯ ನಾಲ್ಕು ಕಡೆ ಅವಶೇಷಗಳು ಬೆಳಕಿಗೆ:ಇಂದ್ರಬಾಲನ್‌ ನಂಬಿಯಾರ್

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.