![1-kanwar-msid](https://www.udayavani.com/wp-content/uploads/2024/07/1-kanwar-msid-415x233.jpg)
ಮೂಲ ಸೌಕರ್ಯವಿಲ್ಲದ ಕುಮಟಾ ಹೊಸ ಬಸ್ ನಿಲ್ದಾಣ
Team Udayavani, May 3, 2019, 4:01 PM IST
![uttar-kannada-2-tdy..](https://www.udayavani.com/wp-content/uploads/2019/05/uttar-kannada-2-tdy..-620x454.jpg)
ಕುಮಟಾ: ದಿನನಿತ್ಯ ಸಾವಿರಾರು ಪ್ರಯಾಣಿಕರು ಬಂದು ಹೋಗುವ ಪಟ್ಟಣದ ಹೊಸ ಬಸ್ ನಿಲ್ದಾಣ ಸುಸಜ್ಜಿತವಾಗಿದ್ದರೂ, ಕೆಲ ಮೂಲ ಸೌಕರ್ಯ ಹಾಗೂ ಸ್ವಚ್ಛತೆಯಿಂದ ದೂರ ಉಳಿದಿದೆ.
ಕುಮಟಾ ಬಸ್ ನಿಲ್ದಾಣ ಸದಾ ಪ್ರಯಾಣಿಕರಿಂದ ಗಿಜಿಗುಡುತ್ತಿರುತ್ತದೆ. ಜಿಲ್ಲೆ ಹಾಗೂ ರಾಜ್ಯದ ಎಲ್ಲ ಭಾಗಗಳಿಗೆ ಸಾರಿಗೆ ಸಂಚಾರಕ್ಕೆ ಕುಮಟಾ ಕೇಂದ್ರ ಸ್ಥಾನವಾಗುವುದರಿಂದ ಹಾಗೂ ರೈಲು ನಿಲ್ದಾಣವೂ ಸನಿಹವೇ ಇರುವುದರಿಂದ ದೂರ ಸಂಚಾರದ ಪ್ರಯಾಣಿಕರ ಓಡಾಟ ಬಹಳ ಇರುತ್ತದೆ. ಕೆಲ ವರ್ಷದ ಹಿಂದೆ ತರಾತುರಿಯಲ್ಲಿ ಹೊಸ ಬಸ್ ನಿಲ್ದಾಣ ಕಾಮಗಾರಿ ಮುಗಿಸಿ ಉದ್ಘಾಟನೆ ಮಾಡಿದ ಸಂದರ್ಭದಲ್ಲಿ ನಿಲ್ದಾಣದಲ್ಲಿ ಹಾಕಲಾದ ಅಸಮರ್ಪಕ ಆಸನ ವ್ಯವಸ್ಥೆ ಬಗೆಗೆ ಜನರಿಂದ ಸಾಕಷ್ಟು ಅಸಮಾಧಾನ ವ್ಯಕ್ತವಾಗಿತ್ತು. ಅಷ್ಟೊಂದು ದೊಡ್ಡ ನಿಲ್ದಾಣದೊಳಗೆ ಕೇವಲ ಎರಡು ಸಾಲುಗಳಲ್ಲಿ ಕಿರಿದಾದ ಮತ್ತು 4-5 ಮಂದಿ ಕುಳಿತುಕೊಳ್ಳಬಹುದಾದ ಕಲ್ಲಿನ ಹಲಗೆಗಳನ್ನು ಬೇಂಚಿನ ಮಾದರಿಯಲ್ಲಿ ಹಾಕಲಾಗಿದೆ. ನಿಲ್ದಾಣದಲ್ಲಿ ಒಟ್ಟೂ 16 ಬೇಂಚುಗಳನ್ನು ಹಾಕಲಾಗಿದ್ದು 70-80 ಮಂದಿ ಮಾತ್ರ ಕೂರಬಹುದಾಗಿದೆ. ಮುಖ್ಯವಾಗಿ ಇಂಥ ಬೇಂಚುಗಳಲ್ಲಿ ಪುರುಷರು ಹಾಗೂ ಮಹಿಳೆಯರು ಒಟ್ಟಿಗೆ ಕುಳಿತುಕೊಳ್ಳುವುದಕ್ಕೆ ಮುಜುಗರ ಪಡುವಷ್ಟು ಕಿರಿದಾಗಿದೆ.
ಪ್ರಯಾಣಿಕರಿಗೆ ಅಗತ್ಯವಿರುವ ಶೌಚಾಲಯ ಹಾಗೂ ಶುದ್ಧ ಕುಡಿಯುವ ನೀರಿನ ಸಮಸ್ಯೆ ಇತ್ತೀಚಿಗೆ ಹೆಚ್ಚಾಗಿ ಕಾಡತೊಡಗಿದೆ. ಇರುವ ಕುಡಿಯುವ ನೀರಿನ ಘಟಕವೂ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ನಿಲ್ದಾಣದ ಸುತ್ತಲೂ ಕಸ ಹಾಗೂ ಪ್ಲಾಸ್ಟಿಕ್ಗಳು ತುಂಬಿ ಗಬ್ಬು ನಾರುತ್ತಿದೆ. ಶೌಚಾಲಯದ ನಿರ್ವಹಣೆ ಸರಿಯಾಗಿಲ್ಲದೇ ಕೆಲ ಶೌಚಾಲಯಗಳ ಬಾಗಿಲನ್ನು ಮುಚ್ಚಲಾಗಿದೆ. ಇನ್ನು ತೆರೆದ ಶೌಚಾಲಯವೂ ಸ್ವಚ್ಛತೆಯಿಲ್ಲದೆ, ಮೂತ್ರದ ವಾಸನೆ ಮೂಗಿಗೆ ರಾಚುವಂತಾಗಿದೆ. ಸಂಬಂಧಪಟ್ಟವರು ಯಾರೂ ಇಂಥ ದಿನನಿತ್ಯದ ಸಮಸ್ಯೆ ಬಗ್ಗೆ ಗಮನಕೊಟ್ಟಿಲ್ಲದಿರುವುದು ಎದ್ದು ಕಾಣುತ್ತಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಅಂಚಿನಲ್ಲೇ ಹೊಸ ಬಸ್ ನಿಲ್ದಾಣ ಇರುವುದರಿಂದ ಹಾಗೂ ಬಸ್ಗಳ ಆಗಮನ ನಿರ್ಗಮನದ ದ್ವಾರ ಅವೈಜ್ಞಾನಿಕವಾಗಿರುವುದರಿಂದ ಹೆದ್ದಾರಿಯಲ್ಲಿ ಟ್ರಾಫಿಕ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಟಾಪ್ ನ್ಯೂಸ್
![1-kanwar-msid](https://www.udayavani.com/wp-content/uploads/2024/07/1-kanwar-msid-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shirur landslide; Green signal for National highway traffic in three or four days?](https://www.udayavani.com/wp-content/uploads/2024/07/1-27-150x83.jpg)
Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?
![Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ](https://www.udayavani.com/wp-content/uploads/2024/07/shiruu-150x83.jpg)
Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ
![1-ccc-aa](https://www.udayavani.com/wp-content/uploads/2024/07/1-ccc-aa-150x94.jpg)
Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್ ಬೇಸರ
![1–eewr-aa-aa](https://www.udayavani.com/wp-content/uploads/2024/07/1-eewr-aa-aa-150x91.jpg)
Shiruru hill collapse; ಮಣ್ಣು ತೆಗೆಯುವ ಕಾರ್ಯಾಚರಣೆ ವೇಳೆ ಸಿಕ್ಕ ಹೋಟೆಲ್ ಅವಶೇಷಗಳು
![1–eewr-aa](https://www.udayavani.com/wp-content/uploads/2024/07/1-eewr-aa-150x89.jpg)
Shiruru hill collapse; ನದಿಯ ನಾಲ್ಕು ಕಡೆ ಅವಶೇಷಗಳು ಬೆಳಕಿಗೆ:ಇಂದ್ರಬಾಲನ್ ನಂಬಿಯಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.