![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ವೈದ್ಯರಿಲ್ಲದೆ ರೋಗಿಗಳ ಪರದಾಟ
Team Udayavani, Dec 31, 2019, 2:50 PM IST
![uk-tdy-1](https://www.udayavani.com/wp-content/uploads/2019/12/uk-tdy-1-24-620x432.jpg)
ಯಲ್ಲಾಪುರ: ಮಾವಿನಮನೆ ವ್ಯಾಪ್ತಿಯ ಮಲವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಹಾಗೂ ಸಿಬ್ಬಂದಿ ಕೊರತೆ ತುಂಬುವಂತೆ ಆಗ್ರಹಿಸಿ ಮಾವಿನಮನೆ ಗ್ರಾ.ಪಂ ಆಶ್ರಯದಲ್ಲಿ ಸಾರ್ವಜನಿಕರು ಹಕ್ಕೋತ್ತಾಯದ ಪ್ರತಿಭಟನೆ ನೆಡೆಸಿ ತಾಲೂಕಾ ವೈದ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸಲ್ಲಿಸಿದ ಮನವಿಯಲ್ಲಿ, ತಾಲೂಕಾ ಕೇಂದ್ರದಿಂದ ಸುಮಾರು 35 ರಿಂದ 40 ಕಿಮೀ ದೂರದಲ್ಲಿರುವ ಮಲವಳ್ಳಿ ಆರೋಗ್ಯ ಕೇಂದ್ರದಲ್ಲಿ ಕಳೆದ 3-4 ತಿಂಗಳಿಂದ ವೈದ್ಯಾಧಿಕಾರಿಗಳಿಲ್ಲ. ಸುಸಜ್ಜಿತ ಆಸ್ಪತ್ರೆ ಇದ್ದಾಗ್ಯೂ ಯಾವುದೇ ಸಿಬ್ಬಂದಿ ಇರುವುದಿಲ್ಲ. ಸ್ಥಳಿಯ ಗ್ರಾಪಂ ವ್ಯಾಪ್ತಿಯಲ್ಲಿ ಯಾವುದೇ ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಸೇವಾ-ಸೌಲಭ್ಯಗಳು ಇರುವುದಿಲ್ಲ. ತುರ್ತು ಚಿಕಿತ್ಸೆ ಸಲುವಾಗಿ ಇಲ್ಲಿ ವೈದ್ಯರ ಕಾಯಂ ಉಪಸ್ಥಿತಿ ಅವಶ್ಯವಾಗಿದೆ. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು, ಫಾರ್ಮಾಸಿಸ್ಟ್, ದ್ವಿತೀಯ ದರ್ಜೆ ಸಹಾಯಕರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಗಳು ಖಾಲಿ ಇವೆ. ಸ್ಟಾಪ್ ನರ್ಸ್ ಮತ್ತು ಲ್ಯಾಬ್ ಟಿಕ್ನಿಷಿಯನ್ ಹುದ್ದೆಗಳ ಮಂಜೂರಾತಿ ತೀರಾ ಅವಶ್ಯಕವಾಗಿದೆ ಎಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿದ ತಾಲೂಕು ಆರೋಗ್ಯಾಧಿಕಾರಿ ಡಾ| ನರೇಂದ್ರ ಪವಾರ, ಸಾರ್ವಜನಿಕರ ಬೇಡಿಕೆಯನ್ನು ಪರಿಗಣಿಸಿ ತಕ್ಷಣದಿಂದ ಬೇರೆಡೆಯಿಂದ ಓರ್ವ ವೈದ್ಯರು ಹಾಗೂ ಎಎನ್ಎಂ ನಿಯೋಜಿಸಲಾಗುವುದು. ಒಂದೆರಡು ದಿವಸಗಳಲ್ಲಿ ನಂದೊಳ್ಳಿ ಹಾಗೂ ಮಲವಳ್ಳಿಗೆ ಕಾಯಂ ವೈದ್ಯರ ನೇಮಕ ಮಾಡಲಾಗುವುದೆಂದು ತಿಳಿಸಿದರು.
ತಾ.ಪಂ ಸದಸ್ಯ ಸುಬ್ಬಣ್ಣ ಬೋಳ್ಮನೆ, ಗ್ರಾಪಂ ಅಧ್ಯಕ್ಷ ನಾರಾಯಣ ಕುಣಬಿ, ಸದಸ್ಯರಾದ ಸುಬ್ಬಣ್ಣ ಕುಂಟೆಗಾಳಿ, ದೀಪಕ ಭಟ್ಟ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಎನ್. ಗಾಂವ್ಕಾರ, ಪ್ರಮುಖರಾದ ರಾಘವೇಂದ್ರ ಲಿಂಗಣ್ಣ ಭಟ್ಟ, ಮಂಜಣ್ಣ ಮೊಠಾರಿ, ಸದಾನಂದ ಭಟ್ಟ, ರಸ್ಮಾ ಕುಣಬಿ, ರವಿ ಹುಳಸೆ, ಶಂಕರನಾರಾಯಣ ಗಾಂವ್ಕಾರ, ಎನ್.ಕೆ. ಭಟ್ಟ ಮೆಣಸುಪಾಲ, ಮಾಚಣ್ಣ ಬಾರೆ, ಎಸ್.ಎಂ. ಭಟ್ಟ, ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shirur landslide; Green signal for National highway traffic in three or four days?](https://www.udayavani.com/wp-content/uploads/2024/07/1-27-150x83.jpg)
Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?
![Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ](https://www.udayavani.com/wp-content/uploads/2024/07/shiruu-150x83.jpg)
Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ
![1-ccc-aa](https://www.udayavani.com/wp-content/uploads/2024/07/1-ccc-aa-150x94.jpg)
Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್ ಬೇಸರ
![1–eewr-aa-aa](https://www.udayavani.com/wp-content/uploads/2024/07/1-eewr-aa-aa-150x91.jpg)
Shiruru hill collapse; ಮಣ್ಣು ತೆಗೆಯುವ ಕಾರ್ಯಾಚರಣೆ ವೇಳೆ ಸಿಕ್ಕ ಹೋಟೆಲ್ ಅವಶೇಷಗಳು
![1–eewr-aa](https://www.udayavani.com/wp-content/uploads/2024/07/1-eewr-aa-150x89.jpg)
Shiruru hill collapse; ನದಿಯ ನಾಲ್ಕು ಕಡೆ ಅವಶೇಷಗಳು ಬೆಳಕಿಗೆ:ಇಂದ್ರಬಾಲನ್ ನಂಬಿಯಾರ್
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.