ಭತ್ತದ ನಾಟಿಗೆ ನೀರಿನ ಕೊರತೆ


Team Udayavani, Jul 25, 2020, 9:06 AM IST

ಭತ್ತದ ನಾಟಿಗೆ ನೀರಿನ ಕೊರತೆ

ಕುಮಟಾ: ತಾಲೂಕಿನಾದ್ಯಂತ ಕಳೆದ ಒಂದು ವಾರದಿಂದ ಮಳೆ ಸುರಿಯದ ಪರಿಣಾಮ ಭತ್ತದ ನಾಟಿ ಕಾರ್ಯಕ್ಕೆ ತೊಡಕಾಗಿದ್ದು, ನಾಟಿ ಮಾಡಿದ ಗದ್ದೆಗಳೂ ನೀರಿಲ್ಲದೇ ಕೆಂಪು ಬಣ್ಣಕ್ಕೆ ಪರಿವರ್ತನೆಯಾಗತೊಡಗಿದೆ. ಇದರಿಂದ ರೈತಾಪಿ ಸಮುದಾಯದಲ್ಲಿ ಆತಂಕ ಮನೆ ಮಾಡಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ.

ತಾಲೂಕಿನ ಕೂಜಳ್ಳಿ, ಕುಮಟಾ, ಗೋಕರ್ಣ ಹಾಗೂ ಮಿರ್ಜಾನ ಸೇರಿ ಒಟ್ಟೂ ನಾಲ್ಕು ಹೋಬಳಿಗಳ 2,860 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತಿದೆ. ಅಘನಾಶಿನಿ, ಬಾಡ, ಕಾಗಾಲ, ಗುಡೇಅಂಗಡಿ, ಹೊಲನಗದ್ದೆ, ತೆಪ್ಪ, ಮದ್ಗುಣಿ, ಕೊಡಕಣಿ ಇನ್ನಿತರ ಭಾಗಗಳಲ್ಲಿ ಹೆಚ್ಚಾಗಿ ಜಯಾ ತಳಿ, ಗೋಕರ್ಣ ಭಾಗದಲ್ಲಿ ಪಿ.ಎ.ಸಿ 837 ಜಾತಿಯ ಹೈಬ್ರಿಡ್‌ ತಳಿ ಹಾಗೂ ಕೂಜಳ್ಳಿ ಹೊಬಳಿಯ ಧಾರೇಶ್ವರ, ಹೊಳೆಗದ್ದೆ ಭಾಗದಲ್ಲಿ ಎಮ್‌.ಓ-4 ಜಾತಿಯ ಕೆಂಪು ಅಕ್ಕಿಯ ಭತ್ತವನ್ನು ಬೆಳೆಯಲಾಗುತ್ತಿದೆ. ಕೊರೊನಾ ನಡುವೆಯೇ ಬದುಕು ಸಾಗಿಸುವ ಅನಿವಾರ್ಯತೆಯಲ್ಲಿ ಉಸಿರು ಬಿಗಿ ಹಿಡಿದು ಕೃಷಿ ಚಟುವಟಿಕೆಯತ್ತ ಮುಖ ಮಾಡಿದ ರೈತರು ಈಗಾಗಲೇ ಕೃಷಿ ಕೇಂದ್ರಗಳಿಂದ ಬಿತ್ತನೆಯ ಬೀಜ ಪಡೆದು ಶೇ. 80 ರಷ್ಟು ನಾಟಿ ಕಾರ್ಯ ಮುಗಿಸಿದ್ದಾರೆ. ಇನ್ನು ಒಂದು ವಾರದಿಂದ ಮಳೆ ಇಲ್ಲದ ಕಾರಣ ಗದ್ದೆಗಳಲ್ಲಿನ ನೀರು ಬತ್ತಿ, ಘಟ್ಟದ ತಪ್ಪಲು ಪ್ರದೇಶಗಳಲ್ಲಿ ನಾಟಿ ಕಾರ್ಯಕ್ಕೆ ತೀವ್ರ ತೊಡಕಾಗಿದೆ. ಈಗಾಗಲೇ ನಾಟಿ ಮುಗಿದ ಪ್ರದೇಶಗಳಲ್ಲೂ ನೀರಿಲ್ಲದೇ, ಭತ್ತದ ಬೆಳೆಗೆ ವಿವಿಧ ರೀತಿಯ ಬಾಧೆ ಎದುರಾಗುವಂತಾಗಿದ್ದು, ಇದರಿಂದ ಅನ್ನದಾತನಲ್ಲಿ ಆತಂಕ ಮನೆ ಮಾಡಿದೆ.

ಕೆಂಪು ಬಣ್ಣಕ್ಕೆ ತಿರುಗಿದ ಭತ್ತದ ಸಸಿ: ಈಗಾಗಲೇ ನಾಟಿ ಮುಗಿದ ಪ್ರದೇಶಗಳಲ್ಲಿನ ಗದ್ದೆಗಳಲ್ಲಿ ನೀರಿಲ್ಲದೇ, ಪೊಟ್ಯಾಷ್‌ ಪ್ರಮಾಣ ಕೊರತೆಯಾಗಿ, ಕಬ್ಬಿಣದ ಅಂಶ ಅಧಿಕವಾಗತೊಡಗಿದೆ. ಇದರಿಂದ ಭತ್ತದ ಸಸಿಗಳು (ಕಾಯಲ್‌) ಕೆಂಪು ಬಣ್ಣಕ್ಕೆ ಪರಿವರ್ತನೆಯಾಗಿ, ಬೆಂಕಿ ರೋಗದಂತೆ ಗೋಚರವಾಗತೊಡಗಿದೆ. ಈ ರೋಗದಿಂದ ಭತ್ತದ ಸಸಿಗಳು ಸಮೃದ್ಧವಾಗಿ ಬೆಳೆಯದೇ ಫಸಲೂ ಕಡಿಮೆಯಾಗಲಿದೆ ಎಂಬ ಆತಂಕ ಸಾಲ ಮಾಡಿ ಕೃಷಿಯತ್ತ ಒಲವು ತೋರಿದ ರೈತಾಪಿ ಸಮುದಾಯಕ್ಕೆ ಕಾಡತೊಡಗಿದೆ.

ಕರಾವಳಿ ಭಾಗಗಳ ನಾಟಿ ಮಾಡಿದ ಗದ್ದೆಗಳಲ್ಲಿ ನೀರಿಲ್ಲದೇ ಕಬ್ಬಿಣದ ಪ್ರಮಾಣ ಅಧಿಕಗೊಳ್ಳುತ್ತಿದೆ. ಇದರಿಂದ ಪೊಟ್ಯಾಷ್‌ ಪ್ರಮಾಣದ ಕೊರತೆಯಿಂದ ಭತ್ತದ ಏಳಿಗೆಗೆ ಕುಂಠಿತವಾಗಲಿದೆ. ಕಬ್ಬಿಣದ ಪ್ರಮಾಣ ಅಧಿಕಗೊಂಡ ಪ್ರದೇಶಗಳಲ್ಲಿ ಸುಣ್ಣದ ತಿಳಿನೀರು ಸಿಂಪಡಣೆ ಮಾಡಿ, ಪೊಟ್ಯಾಷ್‌ ಪ್ರಮಾಣವನ್ನು ಅ ಧಿ‌ಗೊಳಿಸಬೇಕು. ಇದರಿಂದ ಕೆಂಪು ಬಣ್ಣಕ್ಕೆ ತಿರುಗಿದ ಭತ್ತದ ಸಸಿಗಳು ಸಮೃದ್ಧವಾಗಿ ಬೆಳೆಯುತ್ತದೆ ಎನ್ನುತ್ತಾರೆ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಂಕರ ಹೆಗಡೆ.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.