ದೊಡ್ಡ ಕೆರೆಗಳ ಅಭಿವೃದ್ಧಿ ಕಾರ್ಯ ಪ್ರಾರಂಭ


Team Udayavani, Mar 16, 2020, 5:21 PM IST

uk-tdy-2

ಶಿರಸಿ: ಮನುವಿಕಾಸ ಸಂಸ್ಥೆ ಮತ್ತು ಎಚ್‌ ಡಿಬಿ ಫೈನಾನ್ಸಿಯಲ್‌ ಸರ್ವಿಸಸ್‌ ಲಿಮಿಟೆಡ್‌ ಸಹಕಾರದಿಂದ ಅಂಡಗಿಯಲ್ಲಿ ರೈತರ ಸಹಭಾಗಿತ್ವದಲ್ಲಿ ಕೆಲಸಿಕಟ್ಟಿ ಕೆರೆ ಅಭಿವೃದ್ಧಿ ಕಾಮಗಾರಿ ಪ್ರಾರಂಭವಾಯಿತು.

ಕೆರೆ ಕೆಲಸದ ಭೂಮಿಪೂಜೆ ನೆರವೇರಿಸಿದ ಮನುವಿಕಾಸ ಸಂಸ್ಥೆ ನಿರ್ದೇಶಕ ಗಣಪತಿ ಭಟ್ಟ, ಶಿರಸಿ ತಾಲೂಕಿನಲ್ಲಿ ಕಳೆದ ವರ್ಷ 23 ದೊಡ್ಡ ಕೆರೆಗಳ ಹೂಳು ತೆಗೆದು ಅಭಿವೃದ್ಧಿ ಪಡಿಸಲಾಗಿದೆ. ಈ ವರ್ಷ ಈಗಾಗಲೇ ತಾಲೂಕಿನ ಭಾಶಿ ಪಂಚಾಯತ ವ್ಯಾಪ್ತಿಯ ಕಲಕೊಪ್ಪ ಮತ್ತು ಯಡಗೊಪ್ಪ ಗ್ರಾಮಗಳಲ್ಲಿ ಎರಡು ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಮನುವಿಕಾಸ ಸಂಸ್ಥೆ ಈ ವರ್ಷ ತಾಲೂಕಿನ ಎಲ್ಲ ದೊಡ್ಡ ಕೆರೆಗಳನ್ನು ಅಭಿವೃದ್ಧಿಪಡಿಸಲು ಯೋಜಿಸಿದೆ ಎಂದರು.

ತಾಲೂಕಿನ ಪೂರ್ವಭಾಗದಲ್ಲಿ ಒಂದು ಕಡೆ ಅಂತರ್ಜಲ ಮಟ್ಟ ಕಡಿಮೆ ಆಗುತ್ತಿದ್ದು ಇನ್ನೊಂದು ಕಡೆ ಕೆರೆಗಳಲ್ಲಿ ಹೂಳು ತುಂಬಿ ನೀರಿನ ಸಂಗ್ರಹ ಕಡಿಮೆ ಆಗುತ್ತಿದೆ. ಮನುವಿಕಾಸ ಸಂಸ್ಥೆ ಇದನ್ನು ಗಮನಿಸಿ ಕಳೆದೆರಡು ವರ್ಷಗಳಿಂದ ಕೆರೆಗಳ ಹೂಳನ್ನು ರೈತರ ಸಹಭಾಗಿತ್ವದಲ್ಲಿ ಎತ್ತಿ ಹೊಲಗಳಿಗೆ ಸಾಗಿಸಲಾಗುತ್ತಿದೆ. ಅನೇಕ ಕೆರೆಗಳಿಗೆ ಸರಕಾರ ಏತ ನೀರಾವರಿ ಮೂಲಕ ತುಂಬಿಸುವ ಯೋಜನೆ ಹಮ್ಮಿಕೊಂಡಿದೆ. ಈ ವರ್ಷ ತಾಲೂಕಿನ ನಾಲ್ಕು ಎಕರೆಗಿಂತ ವಿಸ್ತಾರವುಳ್ಳ ಎಲ್ಲ ಕೆರೆಗಳನ್ನು ರೈತರು ಸಹಭಾಗಿತ್ವ ನೀಡಿದಲ್ಲಿ ಮತ್ತು ಸಂಬಂಧಪಟ್ಟ ಇಲಾಖೆಗಳು ಅನುಮತಿ ನೀಡಿದಲ್ಲಿ ಹೂಳೆತ್ತಿ ಅಭಿವೃದ್ಧಿಪಡಿಸಲು ಸಿದ್ಧವಿದೆ. ಈಗಾಗಲೇ ಬಿಳೂರು, ಗೊಣಗಟ್ಟ, ಸಂತೊಳ್ಳಿ, ಬ್ಯಾಗದ್ದೆ, ಭಾಶಿ ಮತ್ತು ಕಂತ್ರಾಜಿ ಕೆರೆಗಳ ಹೂಳೆತ್ತಲು ರೈತರು ಸಹಭಾಗಿತ್ವ ನೀಡಲು ಮುಂದೆ ಬಂದಿದ್ದಾರೆ ಎಂದರು.

ಗ್ರಾಪಂ ಸದಸ್ಯ ಮಂಜುನಾಥ ನಾಯ್ಕ, ನಮ್ಮ ಊರಿನಲ್ಲಿ ಮನುವಿಕಾಸ ಸಂಸ್ಥೆ ಕಳೆದ ವರ್ಷ ಎರಡು ಕೆರೆಗಳನ್ನು ಅಭಿವೃದ್ಧಿಪಡಿಸಿದ್ದು ರೈತರು ಹೂಳನ್ನು ತಮ್ಮ ಹೊಲಗಳಿಗೆ ಹಾಕಿದ್ದರಿಂದ ಉತ್ತಮ ಫಸಲು ಪಡೆದಿದ್ದಾರೆ. ನೀರಿನ ಸಂಗ್ರಹದ ಪ್ರಮಾಣ ಕೂಡ ಕೆರೆಗಳಲ್ಲಿ ಹೆಚ್ಚಿದ್ದು ಕೊಳವೆ ಬಾವಿಗಳಲ್ಲೂ ನೀರಿನ ಪ್ರಮಾಣ ಹೆಚ್ಚಾಗಿದೆ ಎಂದರು.

ಸ್ಥಳೀಯ ಉದ್ಯಮಿಗಳೂ ಮತ್ತು ಸಾಮಾಜಿಕ ಕಾರ್ಯಕರ್ತ ಚಂದ್ರು ನಾಯ್ಕ, ಕಳೆದೆರಡು ವರ್ಷಗಳಿಂದ ಮನುವಿಕಾಸ ಬನವಾಸಿ ಹೋಬಳಿಯಲ್ಲಿ ಅನೇಕ ಕೆರೆಗಳ ಹೂಳೆತ್ತಿದ್ದು ರೈತರಿಗೆ ಸಾಕಷ್ಟು ಅನುಕೂಲವಾಗಿದೆ. ನಮ್ಮ ಊರಿನಲ್ಲಿ ಎರಡು ಕೆರೆಗಳನ್ನು ಹೂಳೆತ್ತಿದ್ದ ಮನುವಿಕಾಸ ಸಂಸ್ಥೆಗೆ ಈ ವರ್ಷವೂ ಒಂದು ಕೆರೆಯನ್ನು ಹೂಳೆತ್ತಲು ಮನವಿ ಮಾಡಿದಾಗ ಒಪ್ಪಿ ಕೆಲಸ ಪ್ರಾರಂಭಿಸಿರುವುದು ಸಂತಸ ತಂದಿದೆ ಎಂದರು.

ಮನುವಿಕಾಸ ಸಂಸ್ಥೆ ಶಿರಸಿ ತಾಕೂಕಿನಲ್ಲಷ್ಟೇ ಅಲ್ಲದೇ ಪಕ್ಕದ ಸೊರಬ, ಹಾನಗಲ್‌, ಮುಂಡಗೋಡ ಹಾಗೂ ಕಲಘಟಗಿಗಳಲ್ಲೂ ಕೆರೆ ಅಭಿವೃದ್ಧಿಯಲ್ಲಿ ತೊಡಗಿರುವುದು ಶ್ಲಾಘನೀಯ ಎಂದರು.

ಮನುವಿಕಾಸ ಸಂಸ್ಥೆ ಸಂಯೋಜಕ ಅಶ್ವತ್ಥ ನಾಯ್ಕ ಸ್ವಾಗತಿಸಿದರು. ಸುಭ್ರಮಣ್ಯ ಹೆಗಡೆ ವಂದಿಸಿದರು.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.