ಹುಲೇಕಲ್ ನಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ‘ಭಾಷೆ ಭಾವಯಾನ’ವಾಗಿಸಿದ ಪ್ರಸಂಗ!
ಕರ್ಣ ಹಾಗೂ ಕೃಷ್ಣನ ಪಾತ್ರದ ಮೂಲಕ ಭಾಷೆಯ ಭಾವಯಾನ
Team Udayavani, Aug 5, 2022, 5:42 PM IST
ಶಿರಸಿ: ಕರ್ಣಬೇಧನ ಪ್ರಸಂಗದ ಮೂಲಕ ವಿದ್ಯಾರ್ಥಿಗಳಿಗೆ ಭಾಷೆಯ ಹಾಗೂ ಭಾಷೆಯ ಭಾವಯಾನದ ಕುರಿತು ತಿಳುವಳಿಕೆ ಮೂಡಿಸುವ ಅಪರೂಪದ ”ಭಾಷಾ- ಭಾವಯಾನ” ವಿಶಿಷ್ಟ ಕಾರ್ಯಕ್ರಮ ಶುಕ್ರವಾರ ಹುಲೇಕಲ್ ಶ್ರೀದೇವಿ ಶಿಕ್ಷಣ ಸಂಸ್ಥೆಯಲ್ಲಿ ನಡೆಯಿತು.
ಈ ವಿಶಿಷ್ಟ ಯಕ್ಷಗಾನದ ಹಿನ್ನಲೆಯ ಕಾರ್ಯಕ್ರಮ ವಿದ್ಯಾರ್ಥಿಗಳಲ್ಲಿ ಕಲಾ ಮಾಧ್ಯಮದ ಕಲಿಕೆಯ ಭಾಗವಾಗಿ ಮೂಡಿಬಂತು.ವಿದ್ಯಾವಾಚಸ್ಪತಿ ವಿ.ಉಮಾಕಾಂತ ಭಟ್ಟ ಕೆರೇಕೈ ಕರ್ಣ ಹಾಗೂ ಕೃಷ್ಣನ ಪಾತ್ರದ ಮೂಲಕ ಭಾಷೆಯ ಭಾವಯಾನದ ಅನಾವರಣ ಮಾಡಿಕೊಟ್ಟರು.ಕರ್ಣಬೇಧನ ಪ್ರಸಂಗದ ಪದ್ಯಗಳ ಮೂಲಕ ಕಥೆ ಕಟ್ಟಿಕೊಡುವಲ್ಲಿ ಭಾಗವತ ಗಜಾನನ ತುಳಗೇರಿ, ಮದ್ದಲೆಯಲ್ಲಿ ಶ್ರೀಪಾದ ಮೂಡಗಾರ ನೆರವಾದರು.
ಹೃದಯ ದೌರ್ಬಲ್ಯವಿದ್ದರೆ ಶ್ರೀಮಂತಿಕೆ ಇದ್ದೂ ಪ್ರಯೋಜನವಿಲ್ಲ
ಸಾಂಸ್ಕ್ರತಿಕ ಹಾಗೂ ಕ್ರೀಡಾ ಚಟುವಟಿಕೆಗೆ ಚಾಲನೆ ನೀಡಿ ಮಾತನಾಡಿದ ಉಮಾಕಾಂತ ಭಟ್ಟ ಕೆರೇಕೈ, ಎಷ್ಟು ದೊಡ್ಡ ದೇಶವಾದರೂ, ಎಷ್ಟು ದೊಡ್ಡ ಶ್ರೀಮಂತನಾದರೂ ಹೃಯದ ದೌರ್ಬಲ್ಯ ಇದ್ದರೆ ಏನೂ ಮಾಡಲು ಸಾಧ್ಯವಿಲ್ಲ ಎಂದರು.
ಈ ವೇಳೆ ಮಾತನಾಡಿದ ಕೆರೇಕೈ ಭಾಷೆ ಕಲಿಯಬೇಕು. ಭಾಷೆಯ ಗಳಿಕೆ ಮಾಡಬೇಕು. ಭಾಷೆ ಗಳಿಯುವಂತೆ ಪಾಕ ಕೊಡಬೇಕು. ಭಾಷೆ ಕವಿತ್ವವಾಗಿಸುವ ಮನಸ್ಸು ಬೆಳಸಿಕೊಳ್ಳಬೇಕು. ಕಲಿತ ಭಾಷೆ ಕವಿತ್ವ ವಾಗಿಸಲು ನೆರವಾಗುತ್ತದೆ. ಚಿಕ್ಕ ವಯಸ್ಸಿನಲ್ಲಿ ಭಾಷೆಯ ಬಗ್ಗೆ ಎಚ್ಚರಿಕೆ ಬಂದರೆ ಅಧಿಕ ಭಾಷೆ ಕಲಿಯಬಹುದು. ಭಾಷೆ ಬೆಳವಣಿಗೆಗೆ ಭಾಷೆಗಳ ಭಾವಯಾನ ಆಗಬೇಕು ಎಂದರು.
ಭಾರತದಲ್ಲಿ ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರ ಕೂಡ ಹೃದಯವಂತರನ್ನಾಗಿಸುವಲ್ಲಿ ಪ್ರೇರೇಪಿಸುತ್ತದೆ. ಭಾಷೆ, ಕಲಿಕೆ, ದೇಶದ ಸಂಸ್ಕೃತಿ ಮೂಲಕ ಹೃದಯ ಶ್ರೀಮಂತಿಕೆಗೊಳಿಸಿಕೊಳ್ಳಬೇಕು ಎಂದರು. ಅಮೇರಿಕಾ ಎಷ್ಟೇ ದೊಡ್ಡದಾದರೂ ಹೃದಯವಂತಿಕೆ ಇಟ್ಟು ಕೊಳ್ಳದೇ ಹೋದರೆ ಪ್ರಯೋಜನ ಇರದು ಎಂದ ಅವರು,ಕಲಿಸುವದು ನೆನಪಿಡಬೇಕಾದ ಶಿಕ್ಷಣದಲ್ಲಿ ಇದ್ದೇವೆ. ಆದರೆ ನೆನಪಿಡಬೇಕಾದ್ದು ಕಲಿಸುವಂತಾಗಬೇಕು.ಬೆಳೆಯುವವನಿಗೆ ನೀನು ಬೆಳೆಯಲು ಹೇಳಲು ಜನ ಬೇಕು.ಕಳೆದುಕೊಳ್ಳುತ್ತಿದ್ದೆವೆ ಎಂದು ಹೇಳುವದೂ ಹಿರಿಯರು ಬೇಕು. ಹಿರಿಯರನ್ನು ಗೌರವಿಸುವದನ್ನು ಕಲಿಯಬೇಕು ಎಂದೂ ಹೇಳಿದರು. ಕಳೆದು ಹೋದ ಕಾಲ ಮತ್ತೆ ಸಿಗುವದಿಲ್ಲ. ಶಿಕ್ಷಣ ಎಂದರೆ ಕೇವಲ ಶಾಲೆಯಲ್ಲಿ ಮಾತ್ರವಲ್ಲ. ಜೀವ ನದ ಪ್ರತಿ ಕ್ಷಣವೂ ಶಿಕ್ಷಣವೇ. ಶಿಕ್ಷಣ ಸಂಪದವಾಗಬೇಕು ಎಂದರು.
ಓದು ಆಟ ಆಗಬಾರದು.ಮುಂದಿನ ಓದು ಓದುವಾಗ ಹಿಂದಿನದ್ದು ಮರೆಯಬಾರದು. ಮನಸ್ಸನ್ನು ಹಾಗೂ ಮೈಯ್ಯನ್ನು ಹಗುರ ಮಾಡುವ ಕೆಲಸ ಮಾಡಬೇಕು ಎಂದರು.
ಪತ್ರಕರ್ತ ರಾಘವೇಂದ್ರ ಬೆಟ್ಟಕೊಪ್ಪ, ಕಲೆ, ಸಂಸ್ಕೃತಿ, ಸಾಹಿತ್ಯ ನಮ್ಮನ್ನು ಬೆಳೆಸುತ್ತದೆ. ಚಿಕ್ಕಂದಿನಿಂದಲೇ ಅದನ್ನು ಬೆಳೆಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆಯನ್ನು ಕಾರ್ಯಾಧ್ಯಕ್ಷ ಎಂ.ಎನ್. ಹೆಗಡೆಸಂಪೆಕಟ್ಟು ವಹಿಸಿದ್ದರು.
ಈ ವೇಳೆ ಕಾರ್ಯಾಧ್ಯಕ್ಷ ಎಂ.ಎನ್. ಹೆಗಡೆ ಸಂಪೆಕಟ್ಟು,, ಉಪಾಧ್ಯಕ್ಷ ಎಂ.ಎಸ್.ಹೆಗಡೆ ಇಟಗುಳಿ, ಕಾರ್ಯದರ್ಶಿ ಹೊಸ್ತೋಟ ಶಾಂತಾರಾಮ ಹೆಗಡೆ, ನಿರ್ದೇಶಕರಾದ ವಿ.ವಿ.ಹೆಗಡೆ ಅತ್ತಿಸರ, ಎಂ.ವಿ.ಹೆಗಡೆ ಅಮಚಿಮನೆ, ಇತರರು ಇದ್ದರು.
ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಪ್ರಾಚಾರ್ಯ ಡಿ.ಆರ್.ಹೆಗಡೆ ಸ್ವಾಗತಿಸಿದರು.ಉಪನ್ಯಾಸಕ ಅಣ್ಣಪ್ಪ ನಾಯ್ಕ ನಿರ್ವಹಿಸಿದರು. ಪ್ರೌಢ ಶಾಲಾ ಮುಖ್ಯಾಧ್ಯಾಪಕ ಜಿ.ಎ.ಬಂಟ ವಂದಿಸಿದರು. ಇದೇ ವೇಳೆ ವಿದ್ಯಾವಾಚಸ್ಪತಿ ಸ್ವೀಕರಿಸಿದ ಕೆರೇಕೈ ಅವರನ್ನು ಗೌರವಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?