ಕ್ರೀಡಾಪಟುಗಳ ಸೌಲಭ್ಯಕ್ಕಾಗಿ ಕಾನೂನು ಹೋರಾಟ
Team Udayavani, Sep 20, 2018, 5:04 PM IST
ಶಿರಸಿ: ಶಿಕ್ಷಣ ಇಲಾಖೆಯಡಿಯಲ್ಲಿ ಜರುಗುತ್ತಿರುವ ಕ್ರೀಡಾಕೂಟದಲ್ಲಿನ ನ್ಯೂನತೆ ಸರಿದೂಗಿಸಲು ಹಾಗೂ ಕ್ರೀಡಾಪಟುಗಳು ಮೂಲ ಸೌಲಭ್ಯಗಳಿಂದ ವಂಚಿತರಾಗದಂತೆ ಮಾಡಲು ಸ್ಪಂದನ ಸ್ಪೋರ್ಟ್ಸ್ ಅಕಾಡೆಮಿಯು ಕಾನೂನಾತ್ಮಕ ಹೋರಾಟ ಪ್ರಾರಂಭಿಸಿದೆ. ಈ ಕುರಿತು ಈಗಾಗಲೇ ಶಿಕ್ಷಣ ಇಲಾಖೆಗೆ ಕ್ರೀಡಾಕೂಟದಲ್ಲಿನ ಅವ್ಯವಸ್ಥೆ, ಅಸಮರ್ಪಕ ಕ್ರೀಡಾಂಗಣ, ಅವೈಜ್ಞಾನಿಕ ಹಾಗೂ ಕಳಪೆ ಕ್ರೀಡಾ ಸಾಮಗ್ರಿ, ಕ್ರೀಡಾ ನೀತಿ ನಿಯಮಕ್ಕೆ ವ್ಯತಿರಿಕ್ತವಾಗಿ ಶೈಕ್ಷಣಿಕ ಕ್ರೀಡಾಕೂಟಗಳು ಜರುಗಿಸುವುದನ್ನು ಸರಿದೂಗಿಸಲು ನೋಟಿಸ್ ನೀಡಲು ಆರಂಭಿಸಿದೆ. ಅಸಮರ್ಪಕ ಕ್ರೀಡಾಕೂಟದ ವ್ಯವಸ್ಥೆಯಿಂದ ಪ್ರತಿಭಾವಂತ ಕ್ರೀಡಾಪಟುಗಳ ಪ್ರತಿಭೆ ಗುರುತಿಸುವಲ್ಲಿ ಸಾಧ್ಯವಾಗುತ್ತಿಲ್ಲ. ಇದನ್ನು ಸರಿಪಡಿಸುವ ದಿಸೆಯಲ್ಲಿ ಸಂಘಟನೆ ಕಾರ್ಯಪ್ರವೃತ್ತವಾಗಿವೆ. ಸಂಘಟನೆ ನೀಡಿದ ಆಕ್ಷೇಪಣಾರ್ಹ ನೋಟಿಸಿಗೆ ಶಿಕ್ಷಣ ಇಲಾಖೆ ಮತ್ತು ಯುವ ಜನ ಸೇವಾ ಇಲಾಖೆ ಕಾರ್ಯಪ್ರವೃತ್ತರಾಗದಿದ್ದಲ್ಲಿ ನ್ಯಾಯಾಲಯದಲ್ಲಿ ಮುಂದಿನ ಹಂತವಾಗಿ ಪರಿಹಾರ ಕೇಳುವುದಕ್ಕೆ ಕೂಡ ನಿರ್ಧರಿಸಲಾಗಿದೆ.
ಕ್ರೀಡಾಪಟುಗಳ ಪರ ಹೋರಾಟ: ಅಸಮರ್ಪಕ ಕ್ರೀಡಾಕೂಟದಿಂದ ವಿದ್ಯಾರ್ಥಿ ಕ್ರೀಡಾಪಟುಗಳ ವ್ಯಕ್ತಿ ವಿಕಸನದ ಹಕ್ಕಿಗೆ ಧಕ್ಕೆ ಉಂಟಾಗುತ್ತಿರುವುದನ್ನು ಮನಗಂಡು ಈ ನಡೆ ಇಟ್ಟಿದ್ದಾಗಿ ನ್ಯಾಯವಾದಿ ಎ. ರವೀಂದ್ರನಾಯ್ಕ ತಿಳಿಸಿದ್ದಾರೆ. ಯೋಗ್ಯ ಕ್ರೀಡಾಪಟುಗಳಿಗೆ ಅನ್ಯಾಯವಾಗುವ ಹಾಗೂ ಕ್ರೀಡಾಕೂಟದಲ್ಲಿ ಅರ್ಹತೆ ಪಡೆದಿರುವ ಪಾಲಕರ ಅಪೇಕ್ಷೆಯಂತೆ ಮುಂದಿನ ದಿನಗಳಲ್ಲಿ ಕ್ರೀಡಾ ನೀತಿ ಮತ್ತು ನಿಯಮ ಅನುಸಾರವಾಗಿ ಕನಿಷ್ಠ ಸೌಲಭ್ಯದಿಂದ ವಂಚಿತವಾಗದಂತೆ ಮೂಲ ಸೌಕರ್ಯದಿಂದ ಕ್ರೀಡಾಕೂಟ ಜರುಗಿಸುವ ಉದ್ದೇಶವಿದೆ. ಈಗಾಗಲೇ ಸಂಬಂಧಿಸಿದ ಇಲಾಖೆಗೆ ಕಾನೂನಾತ್ಮಕ ನೋಟಿಸ್ ನೀಡಿದ್ದು, ಇಲಾಖೆ ನ್ಯೂನತೆ ಸರಿದೂಗಿಸದೇ ಇದ್ದಲ್ಲಿ ನ್ಯಾಯಾಲಯದ ಮೊರೆ ಹೋಗಲು ತೀಮಾರ್ನಿಸಲಾಗಿದೆ ಎಂದು ಸ್ಪಂದನ ಸ್ಪೋರ್ಟ್ಸ್ ಅಕಾಡೆಮಿ ಅಧ್ಯಕ್ಷ ನಾಯ್ಕ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ