Karwar; ಕಾಡಂಚಿನ ಗ್ರಾಮದಲ್ಲಿ ಚಿರತೆ ದಾಳಿ: ಕರು ಬಲಿ
Team Udayavani, Jan 13, 2024, 1:25 PM IST
ಕಾರವಾರ: ಕಾರವಾರ ತಾಲೂಕಿನ ಕಾಡಂಚಿನ ಸಿದ್ಧರ ಗ್ರಾಮದಲ್ಲಿ ಎಮ್ಮೆ ಕರುವಿನ ಮೇಲೆ ಚಿರತೆ ದಾಳಿ ಮಾಡಿ ತಿಂದು ಹಾಕಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ.
ರೈತ ಮನೋಹರ ಗಾಂವ್ಕರ್ ತಮ್ಮ ಮನೆಯ ಹಿಂದೆ ದನದ ಕೊಟ್ಟಿಗಯಲ್ಲಿ ಎಮ್ಮೆ ಕರು ಕಟ್ಟಿದ್ದರು. ಕಾಡಿಗೆ ಹೊಂದಿಕೊಂಡಿರುವ ತೋಟಕ್ಕೆ ಆಹಾರ ಅರಸಿ ಬಂದ ಚಿರತೆ ಎಮ್ಮೆ ಕರುವನ್ನು ತಿಂದು ಹಾಕಿರುವುದು ಶನಿವಾರ ಬೆಳಿಗ್ಗೆ ಮನೋಹರ ಅವರ ಗಮನಕ್ಕೆ ಬಂದಿದೆ.
ಹುಲಿ ದಾಳಿ ಎಂದು ಭಾವಿಸಿದ ಗ್ರಾಮದ ಜನರು ಕಾರವಾರ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರಿಗೆ ಹುಲಿ ದಾಳಿ ಬಗ್ಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಕರುವಿನ ಮೇಲೆ ಚಿರತೆ ದಾಳಿ ಮಾಡಿದೆ ಎಂದು ಖಚಿತ ಪಡಿಸಿದರು. ಚಿರತೆ ಹೆಜ್ಜೆಗಳನ್ನು ಅರಣ್ಯ ಸಿಬ್ಬಂದಿ ಗುರುತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ