ನಾಯಿ ಬೇಟೆಗೆ ಬಂದು ಬೋನಿಗೆ ಬಿದ್ದ ಚಿರತೆ
Team Udayavani, Sep 16, 2021, 6:58 PM IST
ಕುಮಟಾ: ಆಹಾರ ಅರಸಿ ಬಂದಿದ್ದ ಚಿರತೆಯೊಂದು ಬೋನಿನಲ್ಲಿ ಇದ್ದ ನಾಯಿ ಹಿಡಿಯಲು ಹೋಗಿ ಬಂಧಿಯಾದ ಘಟನೆ ತಾಲೂಕಿನ ಕಿಮಾನಿಯಲ್ಲಿ ಗುರುವಾರ ನಡೆದಿದೆ.
ರಾತ್ರಿ ನಾಯಿ ಬೇಟೆಗೆ ಬಂದಿದ್ದ ಚಿರತೆ ಬೋನಿನೊಳಗೆ ಹೋಗಿದ್ದನ್ನು ಗಮನಿಸಿದ ಮನೆಯ ಮಾಲೀಕರು ತಕ್ಷಣ ಅದನ್ನು ಲಾಕ್ ಮಾಡಿದ್ದಾರೆ. ಈ ವೇಳೆಗಾಗಲೇ ಬೋನಿನಲ್ಲಿದ್ದ ನಾಯಿ ತಪ್ಪಿಸಿಕೊಂಡಿತ್ತು. ತಕ್ಷಣ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಚಿರತೆಯನ್ನು ಹಿಡಿದು ಸುರಕ್ಷತೆ ಸ್ಥಳಕ್ಕೆ ಸ್ಥಳಾಂತರಿಸಿದರು.
ಈ ವೇಳೆ ಎಸಿಎಫ್ ಗುರುದಾಸ ಶೇಟ್, ಆರ್ಎಫ್ಒ ನರೇಶ್ ಹಾಗೂ ವನ್ಯಜೀವಿ ಸಂರಕ್ಷಕರಾದ ಅಶೋಕ್ ನಾಯ್ಕ ತದಡಿ, ಪವನ ನಾಯ್ಕ ಕುಮಟಾ, ಮಹೇಶ ನಾಯ್ಕ ಅಂಕೋಲಾ ಇವರು ಚಿರತೆ ಸೆರೆಹಿಡಿಯುವಲ್ಲಿ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ