ಹೆಣದ ಮೆಲಿನ ರಾಜಕಾರಣ ಬಿಜೆಪಿ ಬಿಡಲಿ : ಭೀಮಣ್ಣ ನಾಯ್ಕ ಕಿಡಿ

ಸಿಬಿಐ ವರದಿ ಬಂದಿದೆ. ಕಾಗೇರಿ ಅವರ ಉತ್ತರ ಏನು?

Team Udayavani, Oct 5, 2022, 2:44 PM IST

1-sdfdfsdf

ಶಿರಸಿ: ಹೆಣದ ಮೆಲಿನ ರಾಜಕಾರಣ ಮಾಡುವದನ್ನು ಬಿಜೆಪಿ ಮೊದಲು ಬಿಡಲಿ. ಜನರಲ್ಲಿ ಪ್ರಚೋದನೆ, ಕಿಚ್ಚು ಹಚ್ಚುವ ಕೆಲಸ‌ ಮಾಡಿದ ಜಿಲ್ಲೆಯ ಶಾಸಕರು ರಾಜೀ‌ನಾಮೆ‌ ನೀಡಲಿ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷಭೀಮಣ್ಣ ನಾಯ್ಕ ಹೇಳಿದರು.

ಬುಧವಾರ ನಗರದಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಅಂದು‌ ಹೊನ್ನಾವರದ ಪರೇಶ ಮೇಸ್ತ ಸಾವಿನ ಹೆಸರು ಬಳಸಿ ಅಂದಿನ ಚುನಾವಣೆ ಗೆದ್ದ ಬಿಜೆಪಿ ಶಾಸಕರಿಗೆ ನೈತಿಕತೆ ಇಲ್ಲ. ಶಿರಸಿ ಗಲಭೆಯಲ್ಲಿ ಇಂದಿನ ವಿಧಾನ ಸಭಾ ಅಧ್ಯಕ್ಷರು ವಿಶ್ವೇಶ್ವರ ಹೆಗಡೆ ಕಾಗೇರಿ ಅವರೂ ಪಾಲ್ಗೊಂಡಿದ್ದು, ಸಿಬಿಐ ವರದಿ ಬಂದ ಬಳಿಕ ಪ್ರತಿಕ್ರಿಯೆ ಕೊಟ್ಟು ರಾಜೀನಾಮೆ‌ ನೀಡಬೇಕಿದೆ ಎಂದರು.

ಇದನ್ನೂ ಓದಿ : ಸೇನೆಯ ಚೀತಾ ಹೆಲಿಕಾಪ್ಟರ್ ಪತನ ; ಲೆಫ್ಟಿನೆಂಟ್ ಕರ್ನಲ್ ಹುತಾತ್ಮ

ಪರೇಶ ಮೇಸ್ತ ಸಾವಿನ ಬಳಿಕ ಅಂದು ಶಿರಸಿಯಲ್ಲಿ ನಡೆದ ಪ್ರಚೋದನಕಾರಿ ಸಭೆಯಲ್ಲಿ‌ ಕಾಗೇರಿ ಅವರೂ ಇದ್ದರು. ಹಲವರಿಗೆ ಕೇಸು ಬಿದ್ದವು.ಹಾನಿಯೂ ಆದವು. ಈಗ ಸಹಜ ಸಾವು ಎಂದು ಸಿಬಿಐ ವರದಿ ಬಂದಿದೆ. ಕಾಗೇರಿ ಅವರ ಉತ್ತರ ಏನು ಎಂದು ಪ್ರಶ್ನಿಸಿದ್ದಾರೆ.

ಅಧಿಕಾರಕ್ಕೆ ಒಬ್ಬ ಯುವಕನ ಸಾವನ್ನು ಬಳಸಿಕೊಂಡಿದ್ದು ಸರಿಯಲ್ಲ. ಅಂದು ಈ‌ ಪ್ರಕರಣ ಬಳಸಿಕೊಂಡು ಆಯ್ಕೆ ಆದ ಜಿಲ್ಲೆಯ ಬಿಜೆಪಿ ಶಾಸಕರು ರಾಜೀನಾಮೆ ಕೊಟ್ಟು ಮರಳಿ‌ ಜನಾದೇಶ ಪಡೆಯಬೇಕಿದೆ. ಜೈ ಎಂದು ಪ್ರತಿಭಟನೆಯಲ್ಲಿ‌ ಪಾಲ್ಗೊಂಡ ಯುವಕರ‌ ಮೇಲೆ ಪ್ರಕರಣ ದಾಖಲಾಗಿದ್ದು, ಎಲ್ಲರ ‌ಮೇಲೂ ಪ್ರಕರಣ ವಾಪಸ್ ಆಗಿಲ್ಲ. ಉಳಿದವರನ್ನು ತಕ್ಷಣ ಬಿಡುಗಡೆಗೊಳಿಸಬೇಕು. ಅಂದು ಹಾನಿಯಾದ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನೇತೃತ್ವ ವಹಿಸಿದವರು ಜವಬ್ದಾರರಾಗಬೇಕು ಎಂದರು.

ರಾಜ್ಯದಲ್ಲಿ ಸರಕಾರವೇ ಇಲ್ಲ. ಗುತ್ತಿಗೆದಾರರಿಗೆ ಹಣದ ಬಟವಡೆ ಇಲ್ಲ. ಶೇ.40ರ ಕಮಿಷನ್ ಸಹಕಾರ ಎಂದೇ ಹೆಸರು ಬಿದ್ದಿದೆ ಎಂದೂ ವಾಗ್ದಾಳಿ ನಡೆಸಿದ ಅವರು ಪರೇಶ‌ ಮೇಸ್ತ ಸಾವಿನ ಪ್ರಕರಣದ ಸಿಬಿಐ ವರದಿ ಕೋರ್ಟ್ ಗೆ ನೀಡಿದ ಬಳಿಕ ಜಿಲ್ಲೆಯಲ್ಲೂ ಗೊಂದಲ ಸೃಷ್ಟಿ ಆಗಿದೆ‌ ಎಂದರು.

ರಾಜಕೀಯ ಸ್ವಾರ್ಥಕ್ಕೆ ಕೋಮು‌ ಗಲಭೆ ಸಂದರ್ಭ ಸೃಷ್ಟಿಸಿದ್ದು ಅಕ್ಷಮ್ಯ. ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಾಗ್ರಹದ ಮೇರೆಗೆ ಪ್ರಕರಣ ಸಿಬಿಐಗೆ ವಹಿಸಿದ್ದಾರೆ. ಈಗಿ‌ನ ಬಿಜೆಪಿ ಸರಕಾರದ ಸಿಬಿಐ ವರದಿ ನೀಡಿದೆ ಎಂದ ಅವರು, ಜಿಲ್ಲೆಯಲ್ಲಿನ ಭಯದ ವಾತಾವರಣ ಕಳೆಯಬೇಕಿದೆ. ಇದಕ್ಕಾಗಿ ಹೊನ್ನಾವರದಲ್ಲಿ ಅ.7 ರಂದು 11 ಗಂಟೆಗೆ ನಡೆಯುವ ಜಾಗೃತಿ ಅಭಿಯಾನದಲ್ಲಿ ರಾಜ್ಯ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದರು.

ಈ ವೇಳೆ‌ ಎಸ್.ಕೆ.ಭಾಗವತ, ದೀಪಕ ದೊಡ್ಡೂರು, ಜಗದೀಶ ಗೌಡ, ಬಸವರಾಜ್ ದೊಡ್ಮನಿ ಇತರರು ಇದ್ದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.