ಪ್ಲಾಸ್ಟಿಕ್ ಮುಕ್ತ ಭಾರತಕ್ಕೆ ಸಂಕಲ್ಪ ಮಾಡೋಣ: ಹುಕ್ಕೇರಿ ಶ್ರೀ

Sirsi ಪವಿತ್ರ ವೃಕ್ಷಾರೋಪಣ

Team Udayavani, Jun 5, 2023, 4:13 PM IST

1-adsasad

ಶಿರಸಿ: ಭವಿಷ್ಯದ ಭಾರತಕ್ಕಾಗಿ, ಮಕ್ಕಳಿಗಾಗಿ ಪರಿಸರ ಸಂರಕ್ಷಣೆ ಎಲ್ಲರ ಮುಂದಿನ ಸವಾಲು ಹಾಗೂ ಆದ್ಯತೆ. ಈ ಕಾರಣಕ್ಕೋಸ್ಕರ ಪ್ಲಾಸ್ಟಿಕ್ ಮುಕ್ತ ಭಾರತ ನಿರ್ಮಾಣ ಮಾಡಲು ಎಲ್ಲರೂ ಒಂದಾಗಿ, ಒಟ್ಟಾಗಿ ಸಂಕಲ್ಪ ಮಾಡಬೇಕಾಗಿದೆ ಎಂದು ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ‍್ಯ ಸ್ವಾಮೀಜಿ ಹಕ್ಕೊತ್ತಾಯ ಮಾಡಿದರು.

ಸೋಮವಾರ ಅವರು ನಗರದ ಹೊರ ವಲಯದ ವೇದ ಆರೋಗ್ಯ ಕೇಂದ್ರದಲ್ಲಿ ಪವಿತ್ರ ವೃಕ್ಷಾರೋಪಣ ನಡೆಸಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರೂ ಸ್ವಚ್ಛ ಭಾರತ, ಕಸ ಮುಕ್ತ ಭಾರತದ ಕನಸು ಕಂಡಿದ್ದಾರೆ. ಹುಕ್ಕೇರಿ ಮಠದಿಂದಲೂ ಪ್ಲಾಸ್ಟಿಕ್ ಚೀಲ ಮುಕ್ತ ಮಾಡುವಲ್ಲಿ ನಮ್ಮದೇ ಕೊಡುಗೆ ಕೊಡಬೇಕು ಎಂದು 2.80 ಲಕ್ಷ ಬಟ್ಟೆ ಚೀಲಗಳನ್ನು ಹೊಲಿಸಿ ವಿತರಣೆ ಮಾಡಿದ್ದೆವು ಎಂದರು.

ಮಠ ಮಾನ್ಯಗಳು ಕೇವಲ ಪೂಜೆ ಪುನಸ್ಕಾರ ಮಾಡುವದಲ್ಲ. ಭವಿಷ್ಯದ ಮಕ್ಕಳಿಗಾಗಿ ಹಾಗೂ ನಮಗಾಗಿ ಪರಿಸರದ ಸಂರಕ್ಷಣೆ ಮಾಡಬೇಕಿದೆ. ಇಲ್ಲೇ ಸಮೀಪದ ಸ್ವರ್ಣವಲ್ಲೀ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳು ಪರಿಸರದ ಸಂರಕ್ಷಣೆಯ ಹೋರಾಟದ ಜೊತೆಗೆ ಕೃಷಿ ಜಯಂತಿ ಕೂಡ ನಡೆಸುತ್ತಾರೆ. ಪರಿಸರದ ಉಳಿವು, ಉಳಿಸುವದು ಎಲ್ಲರೆ ಹೊಣೆ ಎಂದರು.

ಒಂದು ವೃಕ್ಷವು ಸ್ವಚ್ಛ ಮನದಿಂದ ಎಷ್ಟೆಲ್ಲ ನೆರವಾಗುತ್ತದೆ. ಆದರೆ, ನಾವು ವೇದಿಕೆಗಳಲ್ಲಿ ಪರಿಸರದ ಸಂರಕ್ಷಣೆಯ ಮಾತುಗಳನ್ನು ಮಾತ್ರ ಆಡುತ್ತೇವೆ. ಕೇವಲ ಮಾತನಾಡದೇ ಪರಿಸರದ ಉಳಿವಿಗೆ ಸರ್ವರೂ ಕಂಕಣ ಬದ್ಧರಾಗಬೇಕು. ಇಲ್ಲವಾದರೆ ಭವಿಷ್ಯಕ್ಕೆ ದೊಡ್ಡ ಕಂಟಕ ಆಗಲಿದೆ ಎಂದೂ ಆತಂಕಿಸಿದರು.

ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ,1974 ರಿಂದ ಪರಿಸರದ ದಿನ ಆಚರಣೆ ಮಾಡುತ್ತಿದ್ದೇವೆ. ಈ ಬಾರಿಯ ಘೋಷ ವಾಕ್ಯ ಪ್ಲಾಸ್ಟಿಕ್ ಮಾಲಿನ್ಯ ತಡೆಯಬೇಕು. ಎಲ್ಲರಿಗೂ ವಯಕ್ತಿಕ, ಸಾಮಾಜಿಕ, ಕೌಟುಂಬಿಕ, ಸಂಘಟಿತ ಜೀವನದಲ್ಲಿ ಪರಿಸರದ ಮಹತ್ವ ಅರಿವಿದೆ. ಆದರೆ, ಈ ಅರಿವನ್ನು ವಯಕ್ತಿಕ ಜೀವನದಲ್ಲಿ ಅನುಷ್ಠಾನಕ್ಕೆ ತರಬೇಕು.ಈ ಪರಿಸರ ಎಂದರೆ ನಾವು ಹಿಂದಿನ ಪೀಳಿಗೆಯಿಂದ ಪಡೆದ ಬಳುವಳಿಯಲ್ಲ. ಬದಲಿಗೆ ಮುಂದಿನ ಪೀಳಿಗೆಗೆ ನಾವು ತೆಗೆದಕೊಂಡ ಸಾಲ ಎಂದು ಸಂರಕ್ಷಿಸಬೇಕು ಎಂದರು.

ಭವಿಷ್ಯದ ಜನಾಂಗದ ಭವಿಷ್ಯ ಅಂಧಕಾರಕ್ಕೆ ಹೋಗದಂತೆ ಪರಿಸರ ಸಂರಕ್ಷಿಸಬೇಕು. ಯಾರೂ ಉದಾಸೀನ ಮಾಡದೇ ಪರಿಸರ ಸಂರಕ್ಷಣೆ ಮಾಡಬೇಕು ಎಂದೂ ಹೇಳಿದರು. ಈ ವೇಳೆ ಡಾ. ವೆಂಕಟ್ರಮಣ ಹೆಗಡೆ, ಸಂಗೀತಾ ಹೆಗಡೆ, ನಾರಾಯಣ ಹೆಗಡೆ ಇತರರು ಇದ್ದರು.

ಪ್ರಕೃತಿ ಸಂರಕ್ಷಣೆ ಎಲ್ಲರ ಜವಬ್ದಾರಿ. ನಿಸರ್ಗದ ಉಳಿದರೆ ಮಾತ್ರ ಎಲ್ಲ ಜೀವಿಗಳ ಉಳಿವು. ಈ ಸತ್ಯ ಅರಿತರೆ ಮಾತ್ರ ಪರಿಸರ ಉಳಿಸುವ ಜವಬ್ದಾರಿ ಹೃದಯದಿಂದ ಆರಂಭವಾಗುತ್ತದೆ.
ಡಾ. ವೆಂಕಟ್ರಮಣ ಹೆಗಡೆ, ಪ್ರಸಿದ್ಧ ವೈದ್ಯರು

ಟಾಪ್ ನ್ಯೂಸ್

1-fs-sad

Ujjain ; ಅತ್ಯಾಚಾರಕ್ಕೊಳಗಾಗಿ ಬೀದಿಯಲ್ಲಿ ಅರೆನಗ್ನ ಸ್ಥಿತಿಯಲ್ಲಿ ನಡೆದ 12ರ ಬಾಲೆ !!

BYJU’s Lay Off:  ಆತಂಕದಲ್ಲಿ ಬೈಜೂಸ್‌ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

BYJU’s Lay Off:  ಆತಂಕದಲ್ಲಿ ಬೈಜೂಸ್‌ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

1-saadsad

India-Canada ಸಂಬಂಧ ಹದಗೆಡಿಸಲು ನಿಜ್ಜರ್‌ ಪ್ರಕರಣದಲ್ಲಿ ಪಾಕಿಸ್ಥಾನದ ISI ಸಂಚು

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

1-sdsad

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ರಾಜ್ಯದಲ್ಲಿರುವುದು ಕನ್ನಡಿಗರ ಸರ್ಕಾರನಾ ? ತಮಿಳುನಾಡು ಸರ್ಕಾರನಾ ?: ರಮೇಶ ಬೇಕ್ರಿ

Sirsi: ರಾಜ್ಯದಲ್ಲಿರುವುದು ಕನ್ನಡಿಗರ ಸರ್ಕಾರನಾ ? ತಮಿಳುನಾಡು ಸರ್ಕಾರನಾ ?: ರಮೇಶ ಬೇಕ್ರಿ

karwar

Karwar; ಶೀಘ್ರದಲ್ಲೇ ಕಾರವಾರ ಬಳಿ‌ ಹೆದ್ದಾರಿ ಟನಲ್ ಪುನರಾರಂಭ ಸಾಧ್ಯತೆ

Karwar; ಕಾಂಗ್ರೆಸ್ ಬಡವರ ಮತ್ತು ರೈತರ ಪರ ನಿಲುವು ಹೊಂದಿದೆ: ಸಚಿವ ಮಂಕಾಳು ವೈದ್ಯ

Karwar; ಕಾಂಗ್ರೆಸ್ ಬಡವರ ಮತ್ತು ರೈತರ ಪರ ನಿಲುವು ಹೊಂದಿದೆ: ಸಚಿವ ಮಂಕಾಳು ವೈದ್ಯ

10-sirsi

Yakshagana: ಸಾಲಿಗ್ರಾಮ ಮೇಳಕ್ಕೆ ಅತಿಥಿ ಭಾಗವತ: ಹಿಲ್ಲೂರು ಸ್ಪಷ್ಟನೆ

1-dasdsad

Bhatkal: ಸಚಿವ ಮಂಕಾಳ ವೈದ್ಯ ಅವರ ಕಾರ್ಯಾಲಯ ಆರಂಭ; ಜನಜಂಗುಳಿ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

1-fs-sad

Ujjain ; ಅತ್ಯಾಚಾರಕ್ಕೊಳಗಾಗಿ ಬೀದಿಯಲ್ಲಿ ಅರೆನಗ್ನ ಸ್ಥಿತಿಯಲ್ಲಿ ನಡೆದ 12ರ ಬಾಲೆ !!

BYJU’s Lay Off:  ಆತಂಕದಲ್ಲಿ ಬೈಜೂಸ್‌ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

BYJU’s Lay Off:  ಆತಂಕದಲ್ಲಿ ಬೈಜೂಸ್‌ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

1-saadsad

India-Canada ಸಂಬಂಧ ಹದಗೆಡಿಸಲು ನಿಜ್ಜರ್‌ ಪ್ರಕರಣದಲ್ಲಿ ಪಾಕಿಸ್ಥಾನದ ISI ಸಂಚು

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

1-sdsad

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.