ಬದುಕಲು ಅವಕಾಶ ಕೊಡಿ

•ಅಂಗಲಾಚಿದ ಹೆದ್ದಾರಿಯಂಚಿನ ನಿವಾಸಿಗರು•ಶೀಘ್ರ ಸೂರು ಒದಗಿಸಲು ಒತ್ತಾಯ

Team Udayavani, Jun 12, 2019, 11:58 AM IST

uk-tdy-2..

ಅಂಕೋಲಾ: ಅಜ್ಜಿಕಟ್ಟಾದಲ್ಲಿ ಚತುಷ್ಪಥ ಹೆದ್ದಾರಿ ಕಾಮಗಾರಿಯಿಂದ ಅಪಾಯದ ಅಂಚಿಗೆ ನಿಂತಿರುವ ಮನೆಗಳು.

ಅಂಕೋಲಾ: ಮಳೆ ಬಂದು ಕೆರೆ ಹಳ್ಳ ಬಾವಿಗಳನ್ನು ತುಂಬಿಸಿ ನೀರಿನ ದಾಹ ನಿಗಿಸು ಎಂದು ಜನರು ಮಳೆಗೆ ಪ್ರಾರ್ಥಿಸಿದರೆ ಇತ್ತ ಮಳೆಯೆ ಬಾರದೇ ಇರಲಿ ಎಂದು ಕೆಲವು ಕುಟುಂಬ ಪ್ರಾರ್ಥಿಸುತ್ತ ತಮ್ಮ ಜೀವವನ್ನು ಅಂಗೈಯಲ್ಲಿ ಹಿಡಿದುಕೊಂಡು ಜೀವನ ನಡೆಸುತ್ತಿದ್ದ ಮನ ಕಲುಕುವ ಘಟನೆಗೆ ಚತುಷ್ಪಥ ಹೆದ್ದಾರಿ ಕಾಮಗಾರಿ ಗುತ್ತಿಗೆ ಪಡೆದ ಐಆರ್‌ಬಿ ಕಂಪನಿ ಎಡೆಮಾಡಿಕೊಟ್ಟಿದೆ.

ಚತುಷ್ಪಥ ಹೆದ್ದಾರಿ ಕಾಮಗಾರಿ ಆರಂಭವಾದ ದಿನದಿಂದಲೇ ಐಆರ್‌ಬಿ ಕಂಪನಿಯ ಅದ್ವಾನಗಳ ಸರಮಾಲೆಯೆ ಹೊತ್ತು ಬಂದಿದೆ. ತಮ್ಮ ಅವೈಜ್ಞಾನಿಕ ಕಾಮಗಾರಿಗಳಿಂದ ಒಂದಿಲ್ಲೊಂದು ಅವಘಡ ಸೃಷ್ಠಿಸುತ್ತಿದೆ. ಹಾಗೆಯೇ ಪಟ್ಟಣದ ಅಜ್ಜಿಕಟ್ಟಾದ ರಾಷ್ಟ್ರೀಯ ಹೆದ್ದಾರಿ 66ರ ಅಂಚಿನ ಹೆದ್ದಾರಿ ಅಗಲಿಕರಣ ಸಂದರ್ಭದಲ್ಲಿ ಎದುರಾದ ಗುಡ್ಡವನ್ನು ಕಟಿಂಗ್‌ ಮಾಡಲು ಆರಂಭಿಸಿದರು. ಈ ಗುಡ್ಡದಲ್ಲಿ ಕಳೆದ 40-50 ವರ್ಷಗಳಿಂದ ನಾಲ್ಕೈದು ಕುಟುಂಬಗಳು ಅತಿಕ್ರಮಣ ಮಾಡಿಕೊಂಡು ತಮ್ಮ ಜೀವನ ಕಟ್ಟಿಕೊಂಡಿದ್ದಾರೆ. ಅಲ್ಲಿರುವವರ ಕುಟುಂಬಕ್ಕೆ ಯಾವುದೇ ಬದಲಿ ವ್ಯವಸ್ಥೆ ನೀಡದೆ ಗುಡ್ಡ ಕತ್ತಿರಿಸಿರುವುದರಿಂದ ಇರುವ ಮನೆಯು ಸಹ ಅಪಾಯದ ಅಂಚಿಗೆ ಬಂದು ನಿಂತಿದೆ.

ಈ ಪ್ರದೇಶದಲ್ಲಿ ಜೋರಾಗಿ ಮಳೆ ಬಿದ್ದರೆ ಸಾಕು ಗುಡ್ಡ ಕುಸಿವ ಆತಂಕವಿದೆ. ಕಾರವಾರ ಮಾಜಾಳಿಯಿಂದ ಕುಂದಾಪುರ ತನಕ ಕೈಗೊಂಡ‌ ಚತುಷ್ಪಥ ಹೆದ್ದಾರಿ ಕಾಮಗಾರಿಯಿಂದ ಇವರು ನೆಲೆ ಕಳೆದುಕೊಂಡು, ಗುಡ್ಡದಂಚಿನಲ್ಲಿ ತಲೆ ಮೇಲೆ ತೂಗುಗತ್ತಿ ಇಟ್ಟುಕೊಂಡು ವಾಸಿಸುತ್ತಿದ್ದಾರೆ.

ಪ್ರಾಣಕ್ಕೆ ಬೆಲೆ ಇಲ್ಲ: ಕಳೆದ ವರ್ಷ ಕುಮಟಾದ ತಂಡ್ರಕುಳಿಯಲ್ಲಿ ನಡೆದ ಭೂಕುಸಿತ ಪರಿಣಾಮ ಆದ ಅವಘಡ ಇನ್ನೂ ಜನರ ಕಣ್ಣ ಮುಂದಿದೆ. ಇಂತಹ ಸಂದರ್ಭದಲ್ಲಿ ರಾಹೆ ಪ್ರಾಧಿಕಾರ ಮಾತ್ರ ಇವರಿಗೆ ಯಾವುದೇ ಪುನರ್ವಸತಿ ಕಲ್ಪಿಸದೇ, ಚೆಲ್ಲಾಟವಾಡುತ್ತಿದೆ.

ಮನೆಯೆ ಇಲ್ಲ: ಅತಿ ಬಡ ಕುಟುಂಬದವರಾದ ಇವರು ವಾಸಿಸಲು ಸರಿಯಾದ ಸೂರಿಲ್ಲದೆ ಪರದಾಡುವ ಪರಿಸ್ಥಿತಿ ಉದ್ಭವವಾಗಿದೆ. ಯಾವಾಗ ಏನು ಅನಾಹುತವಾಗುತ್ತದೆಯೋ ಎಂಬ ಆತಂಕದಲ್ಲಿ ಇಲ್ಲಿಯ ಕುಟುಂಬಗಳಿವೆ. ಅತಿಕ್ರಮಣ ಜಾಗವಾಗಿರುವುದರಿಂದ ಹೆದ್ದಾರಿ ಪ್ರಾಧಿಕಾರ ಸ್ವಾಧೀನಪಡಿಸಿಕೊಂಡ ಜಾಗೆಗೆ ಯಾವುದೇ ಪರಿಹಾರ ನೀಡಿಲ್ಲ. ಮನೆಯ ಅಂಚಿನವರೆಗೆ ಗುಡ್ಡ ಕೊರೆಯಲಾಗಿದೆ. ಜೋರಾದ ಮಳೆಯ ರಭಸಕ್ಕೆ ಗುಡ್ಡ ಕುಸಿದು ಅವಘಡ ಸಂಭವಿಸುವ ಪೂರ್ವದಲ್ಲಿ ಇಲ್ಲಿನ ಬಡ ಕುಟುಂಬಗಳಿಗೆ ಜಿಲ್ಲಾಡಳಿತ ಸೂರಿನ ವ್ಯವಸ್ಥೆ ಕಲ್ಪಿಸಬೇಕಾಗಿದೆ.

•ಅರುಣ ಶೆಟ್ಟಿ

ಟಾಪ್ ನ್ಯೂಸ್

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.