![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Team Udayavani, Apr 19, 2024, 6:11 PM IST
![ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ](https://www.udayavani.com/wp-content/uploads/2024/04/Swaj-620x361.jpg)
■ ಉದಯವಾಣಿ ಸಮಾಚಾರ
ಶಿರಸಿ: ಧರ್ಮದ ದಾರಿಯಲ್ಲಿ ನಡೆದು ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಧರ್ಮದಲ್ಲಿ ನಡೆಯಲು ಗುರುವಿನ ಉಪದೇಶ ಪಡೆದು ಮುನ್ನಡೆಯಬೇಕು ಎಂದು ದಕ್ಷಿಣಾಮ್ನಾಯ ಶ್ರೀ ಶೃಂಗೇರಿ ಶಾರದಾ ಪೀಠದ ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ನುಡಿದರು.
ಗುರುವಾರ ಶ್ರೀ ಸ್ವರ್ಣವಲ್ಲೀ ಮಹಾಸಂಸ್ಥಾನಕ್ಕೆ ಭೇಟಿ ನೀಡಿದ್ದ ಅವರು ಆಶೀರ್ವಚನ ನೀಡಿದರು. ಜೀವನ-ಬದುಕು ನಡೆಸುವುದು ಎಂದರೆ ಪ್ರಾಣಿಗಳೂ ಜೀವನ ಮಾಡುತ್ತವೆ. ಆದರೆ ಮನುಷ್ಯ ಅದಕ್ಕಿಂತ ಬೇರೆಯಾಗಿದ್ದಾನೆ. ಮನುಷ್ಯ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಆಗ ಈ ಜನ್ಮಸಾರ್ಥಕ ಆಗುತ್ತದೆ. ಧರ್ಮಾಚರಣೆಯಿಂದ ಇದು ಸಾಧ್ಯ. ಪರಂಪರೆಯ ಗುರುಗಳಿಂದ ಜನರಿಗೆ ಮಾರ್ಗದರ್ಶನ ಮಾಡುವ ಕಾರ್ಯ ನಡೆದಿದೆ ಎಂದರು.
ಧರ್ಮ ಮಾರ್ಗ ಬೋಧಿಸಿ, ನಿಷ್ಠೆ ತೋರಿದವರು ಶಂಕರಾಚಾರ್ಯರು. ಧರ್ಮವನ್ನು ದೃಢವಾಗಿ ಸ್ಥಾಪಿಸಿದ್ದಾರೆ. ಆಕ್ರಮಣ ಆದರೂ, ಆಗುತ್ತಿದ್ದರೂ ಧರ್ಮ ನಿಂತಿದೆ. ಶ್ರೀ ಶಂಕರರು ದೃಢವಾಗಿ ಧರ್ಮ ಸ್ಥಾಪನೆ ಮಾಡಿದ್ದು ಅದಕ್ಕೆ ಕಾರಣ. ರಾಗ, ದ್ವೇಷ ಇಲ್ಲದವರು ಸನ್ಯಾಸಿಗಳು. ಶಿಷ್ಯರಿಗೆ ವೈರಾಗ್ಯದಿಂದ ಮಾರ್ಗದರ್ಶನ ಮಾಡುತ್ತಾರೆ. ಧಾರ್ಮಿಕ ಉನ್ನತಿಗೆ, ಧರ್ಮಾಚರಣೆಗೆ ಗುರುವಿನ ಮಾರ್ಗದರ್ಶನ ಬೇಕು ಎಂದರು.
ಸಾನ್ನಿಧ್ಯ ವಹಿಸಿದ್ದ ಸ್ವರ್ಣವಲ್ಲೀ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಶಬ್ಧ ಎಂಬ ಬೆಳಕು ಬೆಳಗದೇ ಇದ್ದರೆ ಮೂರು ಲೋಕಗಳು ಕತ್ತಲಾಗುತ್ತಿದ್ದವು. ಶಂಕರಾಚಾರ್ಯರು ಎಂಬ ಅವತಾರಿಗಳು ಬಾರದೇ ಇದ್ದರೆ ಲೋಕ ಅಂಧಕಾರದಲ್ಲಿ ಇರುತ್ತಿತ್ತು. ಅವರಿಂದ ಜ್ಞಾನ ಎಂಬ ಬೆಳಕು ಬಂತು. ವೇದೋಕ್ತ ಜ್ಞಾನ ಕಾಂಡಕ್ಕೆ ಶಂಕರರಿಂದ ಬೆಳಕು ಬಂದಿದೆ. ಭಗವದ್ಗೀತೆ ಗಮನಕ್ಕೆ ಬರಲು ಅವರ ಭಾಷ್ಯವೇ ಕಾರಣ. ಜ್ಞಾನದ ಬೆಳಕು ಇಷ್ಟೊಂದು ಬರಲು ಶಂಕರರೇ ಕಾರಣ ಎಂದರು.
ಮಠಗಳಲ್ಲಿ ಜ್ಞಾನದ ಪರಂಪರೆ ಇಂದಿಗೂ ಮುನ್ನಡೆಯುತ್ತಿದೆ. ಶೃಂಗೇರಿಯಲ್ಲಿ ಪರಂಪರೆ ಮುಂದುವರಿದಿದೆ. ಆನಂದದ
ಅನುಭವ ಜೀವನದಲ್ಲಿ ಮುಖ್ಯ. ಧರ್ಮದ ಅನುಭವ ಹೇಳುವಾಗಲೂ ಅದನ್ನೇ ಹೇಳುವರು. ಅಂತರಾತ್ಮಕ್ಕೆ ತೃಪ್ತಿ ಆದರೆ
ಆನಂದದ ಅನುಭವ ಬರುತ್ತದೆ. ಆನಂದದ ಅನುಭವ ಆಗಬೇಕಾದರೆ ಸಂತುಷ್ಟಿಯಿಂದ ಆತ್ಮ ಸಾಕ್ಷಿಯಾಗಬೇಕು. ಅದೇ ಧರ್ಮ.
ಶೃಂಗೇರಿ ಜಗದ್ಗುರುಗಳು ಶ್ರೀ ಮಠಕ್ಕೆ ಆಗಮಿಸಿದ್ದು ಆನಂದ ಉಂಟಾಗಿದೆ ಎಂದರಲ್ಲದೇ ಮಠದಲ್ಲಿ ನಡೆದ ಶಿಷ್ಯ ಸ್ವೀಕಾರದ ಅನುಭವ ಹಂಚಿಕೊಂಡರು. ಶ್ರೀ ಆನಂದಬೋಧೇಂದ್ರ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಶ್ರೀ ಸ್ವರ್ಣವಲ್ಲೀ ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ಮನಳ್ಳಿ ಪಾದಪೂಜೆ ನೆರವೇರಿಸಿದರು.
ಕಾರ್ಯದರ್ಶಿ ಗಣಪತಿ ಹೆಗಡೆ ಗೊಡವೆಮನೆ ಹಾಗೂ ಆಡಳಿತ ಮಂಡಳಿ ಸದಸ್ಯರು ಇದ್ದರು. ರಾಜರಾಜೇಶ್ವರಿ ಸಂಸ್ಕೃತ
ಮಹಾ ವಿದ್ಯಾಲಯದ ವಿದ್ಯಾರ್ಥಿಗಳು ವೇದ ಘೋಷ ಮಾಡಿದರು. ವಸಂತವೇದ ಶಿಭಿರಾರ್ಥಿಗಳು, ಭಕ್ತರು-ಶಿಷ್ಯರು
ಭಾಗವಹಿಸಿದ್ದರು. ಕಿರುಕುಂಭತ್ತಿ ಮಹಾಬಲೇಶ್ವರ ಭಟ್ಟ ನಿರ್ವಹಿಸಿದರು. ಮಾತೆಯರು ಪೂರ್ಣಕುಂಭ ಸ್ವಾಗತ ನೀಡಿದರು.
ಗುರುವಿನ ಮಾರ್ಗವನ್ನು ಶ್ರದ್ಧೆಯಿಂದ ಪಾಲಿಸಬೇಕು. ಗುರುವಿನ ಎದುರು ಶಿಷ್ಯರು ಶಿಷ್ಯರಾಗಿಯೇ ಇರಬೇಕು.
* ವಿಧುಶೇಖರ ಶ್ರೀ
ಟಾಪ್ ನ್ಯೂಸ್
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shirur landslide; Green signal for National highway traffic in three or four days?](https://www.udayavani.com/wp-content/uploads/2024/07/1-27-150x83.jpg)
Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?
![Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ](https://www.udayavani.com/wp-content/uploads/2024/07/shiruu-150x83.jpg)
Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ
![1-ccc-aa](https://www.udayavani.com/wp-content/uploads/2024/07/1-ccc-aa-150x94.jpg)
Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್ ಬೇಸರ
![1–eewr-aa-aa](https://www.udayavani.com/wp-content/uploads/2024/07/1-eewr-aa-aa-150x91.jpg)
Shiruru hill collapse; ಮಣ್ಣು ತೆಗೆಯುವ ಕಾರ್ಯಾಚರಣೆ ವೇಳೆ ಸಿಕ್ಕ ಹೋಟೆಲ್ ಅವಶೇಷಗಳು
![1–eewr-aa](https://www.udayavani.com/wp-content/uploads/2024/07/1-eewr-aa-150x89.jpg)
Shiruru hill collapse; ನದಿಯ ನಾಲ್ಕು ಕಡೆ ಅವಶೇಷಗಳು ಬೆಳಕಿಗೆ:ಇಂದ್ರಬಾಲನ್ ನಂಬಿಯಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.