ಬಂದರು ಕಾಮಗಾರಿಗೆ ಸ್ಥಳೀಯರ ಅಡ್ಡಿ


Team Udayavani, Feb 14, 2020, 6:26 PM IST

uk-tdy-1

ಸಾಂಧರ್ಬಿಕ ಚಿತ್ರ

ಹೊನ್ನಾವರ: ಹೊನ್ನಾವರ ಪೋರ್ಟ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿ ಕಾರ್ಯಚಟುವಟಿಕೆಗೆ ಬೇಕಾದ ಬೃಹತ ಗಾತ್ರದ ಸಲಕರಣೆಗಳನ್ನು ಕೊಂಡೊಯ್ಯುತ್ತಿದ್ದ ವೇಳೆ ಸ್ಥಳೀಯರು ವಾಹನವನ್ನು ಅಡ್ಡಗಟ್ಟಿ ಕಂಪನಿಯ ಕಾರ್ಯ ಚಟುವಟಿಕೆಯನು ಕೂಡಲೇ ಸ್ಥಗಿತಗೊಳಿಸಬೇಕುಎಂದು ಆಗ್ರಹಿಸಿದ ಘಟನೆ ಕಾಸರಕೋಡದ ಟೊಂಕಾದಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ.

ಮೀನುಗಾರಿಕಾ ಸಂಘಟನೆಗಳ ಮುಖಂಡರು, ಊರ ನಾಗರಿಕರು ಈ ವೇಳೆ ಪಾಲ್ಗೊಂಡು ಕಂಪನಿಗೆ ನೀಡಿದ ಗುತ್ತಿಗೆಯನ್ನು ರದ್ದುಗೊಳಿಸಿ ಅವರ ಎಲ್ಲಾ ಕಾರ್ಯಚಟುವಟಿಕೆಗಳು ನಿಲ್ಲಿಸಬೇಕು ಎಂದು ಕಂಪನಿಯ ವಿರುದ್ಧ  ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

ಯಾವುದೇ ಕಾರಣಕ್ಕೂ ಕಂಪನಿಯ ವಾಹನ ಊರಿಗೆ ಪ್ರವೇಶ ಮಾಡಬಾರದು ಎಂದು ಬಿಗಿಪಟ್ಟು ಹಿಡಿದರು. ಕೆಲಕಾಲ ಕಾಸರಕೋಡದಲ್ಲಿನ ಬಂದರಿಗೆ ತಲುಪುವ ರಸ್ತೆಯಲ್ಲಿ ಜನಸಮೂಹವೇ ಸೇರಿ ಗದ್ದಲದ ವಾತಾವರಣ ನಿರ್ಮಾಣವಾಯಿತು. ಜನಪ್ರತಿನಿಧಿಗಳು, ಅಧಿಕಾರಿಗಳು ಮೀನುಗಾರರ ಅಹವಾಲನ್ನು ಕೇಳಿಕೊಂಡು ಸೂಕ್ತ ಪರಿಹಾರವನ್ನು ಒದಗಿಸಲಿದ್ದೇವೆ. ಮಾತ್ರವಲ್ಲ ಅಲ್ಲಿಯವರೆಗೆ ಕೆಲಸ ನಿಲ್ಲಿಸುತ್ತೇವೆ ಎಂದು ಭರವಸೆಕೊಟ್ಟಿದ್ದರು. ಆದರೆ ಇದು ಕೇವಲ ನಮ್ಮ ಮೂಗಿಗೆ ತುಪ್ಪ ಸವರುವ ವಿಚಾರ ಎಂದು ಅಸಮಾಧಾನ ಹೊರಹಾಕಿದರು.

ಜನಾಕ್ರೋಶ ಹೆಚ್ಚಾದ ಹಿನ್ನಲೆ ಪೊಲೀಸ್‌ ಅಧಿಕಾರಿಗಳು ಮಧ್ಯಪ್ರವೇಶಿಸಿ ಪ್ರತಿಭಟನಾ ನಿರತರೊಂದಿಗೆ ಚರ್ಚಿಸಿದರು. ಎರಡು ದಿನದ ಕಾಲಾವಕಾಶ ನೀಡುತ್ತೇವೆ. ನಂತರ ಮತ್ತೆ ಪುನಃ ಈ ವಿಚಾರವಾಗಿ ಚರ್ಚೆ ನಡೆಯಬೇಕೆಂದು ಪ್ರತಿಭಟನಾ ನಿರತರು ಬಿಗಿಪಟ್ಟು ಹಿಡಿದರು. ಅಧಿಕಾರಿಗಳು, ಜನಪ್ರತಿನಿಧಿ ಗಳಿಂದ ಸರಿಯಾದ ಉತ್ತರ ಸಿಗಬೇಕು. ಪೊಳ್ಳು ಭರವಸೆಗಳ ಅವಶ್ಯಕತೆಯಿಲ್ಲ ಎಂದು ಪ್ರತಿಭಟನಾ ನಿರತರು ಆಗ್ರಹಿಸಿದರು.

ಸ್ಥಳಿಯರಾದ ಅಬ್ದುಲ್‌ ರೆಹಮಾನ್‌ ಪತ್ರಕರ್ತರೊಂದಿಗೆ ಮಾತನಾಡಿ ಇಲ್ಲಿನ ಧೂಳಿನ ಪರಿಣಾಮವಾಗಿ ಈಗಾಗಲೇ ಜನ, ಜಾನುವಾರು, ವಾತಾವರಣದ ಮೇಲೆ ಘೋರ ಪರಿಣಾಮವಾಗಿದೆ. ರೈತರು, ವಯೋವೃದ್ಧರು, ವಿದ್ಯಾರ್ಥಿಗಳು ಕೂಡ ಗಂಭೀರ ಸಮಸ್ಯೆ ಎದುರಿಸಬೇಕಾಗುತ್ತಿದೆ. ಇಂಥ ಕಂಪನಿಗಳಿಗೆ ಲಾಭ ಮಾಡಿಕೊಳ್ಳಲು ನೂರಾರು ಎಕರೆ ಜಾಗ ಸಲೀಸಾಗಿ ಮಂಜೂರು ಮಾಡಿ ಕೊಡಲಾಗುತ್ತದೆ. ಆದರೆ ಇಲ್ಲೆ ನೆಲೆ ನಿಂತು ಜೀವನ ಸಾಗಿಸುತ್ತಿರುವ ಪಾರಂಪರಿಕ ಮೀನುಗಾರರಿಗೆ ಇಲ್ಲಿಯವರೆಗೆ ಹಕ್ಕು ಪತ್ರವಾಗಲಿ, ಪಹಣಿ ಪತ್ರವಾಗಲಿ ಮಂಜೂರಾಗಿಲ್ಲ ಎಂದರು. ವಾರದ ಹಿಂದಷ್ಟೆ ಕಡಲಮಕ್ಕಳು ಬೃಹತ ಪ್ರಮಾಣದ ಹೋರಾಟ ಮಾಡಿದಾಗ ಜನಪ್ರತಿನಿಧಿಗಳು ಆಗಮಿಸಿ ಸರ್ಕಾರದಿಂದ ತಡೆ ನೀಡುವ ಭರವಸೆ ನೀಡಿದ್ದರು. ಅದರೆ ಈ ಭರವಸೆ ಹುಸಿಯಾಗಿದ್ದು ಮುಂದೆ ಯಾವ ರೀತಿಯಾಗಿ ಪ್ರತಿಭಟನೆ ಬಿಸಿ ಅನುಭವಿಸುತ್ತಾರೆ ಎನ್ನುವುದು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.