ಕಾನಗೋಡ ಕೆರೆಬೇಟೆ ಸ್ಥಳ ಪರಿಶೀಲನೆ

ಹಾನಿಗೊಳಗಾದವರಿಗೆ ಸಮಾಧಾನ ಹೇಳಿದ ಕಾಗೇರಿ

Team Udayavani, Jun 2, 2022, 12:16 PM IST

8

ಸಿದ್ದಾಪುರ: ಕೆರೆಬೇಟೆ ದಿನದಂದು ನಡೆದ ಅಹಿತಕರ ಘಟನೆ ಸಂದರ್ಭದಲ್ಲಿ ಕಾನಗೋಡಿನ ಜನತೆ ಸಮಾಧಾನದಿಂದ, ಸಂಯಮದಿಂದ ವರ್ತಿಸಿದ್ದೀರಿ. ಬೇಟೆಗಾಗಿ ಪಡೆದ ಹಣವನ್ನು ಮರಳಿಸಿದ್ದೀರಿ. ಆರಕ್ಷಕ ಇಲಾಖೆಯವರೂ ಸಹ ಪರಿಸ್ಥಿತಿ ನಿಯಂತ್ರಿಸುವಲ್ಲಿ ಸಹನೆಯಿಂದ ಕರ್ತವ್ಯ ನಿರ್ವಹಿಸಿದ್ದಾರೆ. ಇಷ್ಟು ದೊಡ್ಡ ಅಹಿತಕರ ಘಟನೆ ಸಂಭವಿಸಿದರೂ ಯಾವುದೇ ಜೀವಹಾನಿಯಾಗಿಲ್ಲ ಎಂಬುದು ಸಮಾಧಾನದ ವಿಚಾರ ಎಂದು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಕಳೆದ ರವಿವಾರ ತಾಲೂಕಿನ ಕಾನಗೋಡಿನಲ್ಲಿ ಕೆರೆಬೇಟೆ ಸಂದರ್ಭದಲ್ಲಿ ಹಾನಿಗೊಳಗಾದ ಜನರನ್ನು ಭೇಟಿಯಾಗಿ ಅವರನ್ನು ಸಂತೈಸಿ ಮಾತನಾಡಿ ಕೆರೆ ಹತ್ತಿರದ ಮನೆಗಳಿಗೆ, ಅಂಗಡಿಗಳಿಗೆ ಹೊರಗಡೆ ಜನರು ಬಂದು ನುಗ್ಗಿದ್ದು, ಭಯದ ವಾತಾವರಣ ಸೃಷ್ಟಿಸಿದ್ದು ಗಮನಿಸಿದರೆ ಯಾವುದೋ ದುರುದ್ದೇಶ ಇರುವ ಸಂಶಯವೂ ಮೂಡುವಂತಿದೆ. ಪೊಲೀಸರ ಮೇಲೆ ಕೈಹಾಕಿದ್ದನ್ನು ಯಾರೂ ಸಹಿಸುವಂತಿಲ್ಲ. ಈ ಘಟನೆಗೆ ಸಂಬಂಧಿಸಿ ಪೊಲೀಸರು ದರೋಡೆ ಮಾಡಿದ ಕೆಲವು ವಸ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರಕರಣ ದಾಖಲಿಸಿ ಕೆಲವರನ್ನು ವಶಕ್ಕೆ ತೆಗೆದುಕೊಂಡು ಕಾನೂನು ಕ್ರಮ ಜರುಗಿಸುತ್ತಿದ್ದಾರೆ. ಊರಿನ ಜನತೆ ಸಮಾಧಾನದಿಂದಿರಿ. ಯಾವುದೇ ಬೇಕು ಬೇಡಗಳಿಗೆ ನಮ್ಮ ಅಧಿಕಾರಿಗಳನ್ನು ಸಂಪರ್ಕಿಸಿ. ಊರಿನ ಅಭಿವೃದ್ಧಿ, ದೇವಾಲಯ ಅಭಿವೃದ್ಧಿಗೆ ಸಹಕರಿಸಿದ್ದೇನೆ. ಮುಂದೆಯೂ ನಿಮ್ಮ ಜೊತೆ ಇರುತ್ತೇನೆ ಎಂದು ಭರವಸೆ ನೀಡಿದರು.

ಕಾನಗೋಡ ಈಶ್ವರ ದೇವಾಲಯ ಸಮಿತಿಯ ಮಾರುತಿ ಫಕೀರ ನಾಯ್ಕ ಮಾತನಾಡಿ, ಈಶ್ವರ ದೇವಾಲಯ ಕಟ್ಟಡ ಅರ್ಧಕ್ಕೆ ನಿಂತಿರುವ ಹಿನ್ನೆಲೆಯಲ್ಲಿ ಗ್ರಾಪಂಗೆ ನಿಗದಿತ ಹಣ ತುಂಬಿ ಕೆರೆಬೇಟೆ ಆಯೋಜಿಸಲಾಗಿತ್ತು. 2 ರಿಂದ 3 ಸಾವಿರ ಜನ ಬರುವ ನಿರೀಕ್ಷೆ ಇತ್ತಾದರೂ ಐದಾರು ಸಾವಿರ ಜನರು ಸೇರಿದ್ದರು. 1 ಗಂಟೆಗೆ ಕೆರೆಬೇಟೆ ನಿಗದಿಯಾಗಿದ್ದರೂ 12:10ಕ್ಕೆ ಸ್ವಯಂ ಸೇವಕರನ್ನು ನೂಕಿ ಕೆಲವರು ಕೆರೆಗೆ ಇಳಿದರು. ಮೀನು ಸಿಗಲಿಲ್ಲವೆಂದು ಗಲಾಟೆ ಮಾಡಿದ್ದಲ್ಲದೇ ಹತ್ತಾರು ಮನೆಗಳ, 4 ಅಂಗಡಿಗಳು, ಒಂದು ಹಾಲು ಡೇರಿಯ ಲೂಟಿ ಮಾಡಿದರು. ಹಾಕಿದ್ದ ಪೆಂಡಾಲ್‌ ಸುಟ್ಟರು. ನೀರಿನ ಟ್ಯಾಂಕ್‌ಗೆ ಹಾನಿ ಮಾಡಿದರು.

ಒಮ್ಮೆಲೇ ಜನರು ಕೆರೆಯ ನೀರಿನೊಳಗೆ ಇಳಿದಿದ್ದರಿಂದ ಸೊಂಟ ಮಟ್ಟಕ್ಕಿದ್ದ ಕೆರೆ ನೀರು ಎತ್ತರವಾಗಿ ಕತ್ತಿನ ತನಕ ಬರುವಂತಾಯಿತು. ಕೆರೆಯ ಒಳಗಿದ್ದ ರಾಡಿ ಎದ್ದು ಮೀನುಗಳು ಸಿಗಲಿಲ್ಲ. ಈಗ ರಾಡಿ ನೀರಿನಿಂದಾಗಿ ಕ್ವಿಂಟಲ್‌ಗ‌ಟ್ಟಲೆ ಮೀನುಗಳು ಸತ್ತು ಕೊಳೆಯುತ್ತಿವೆ ಎಂದು ವಿವರಿಸಿದರು.

ಗ್ರಾಪಂ ಅಧ್ಯಕ್ಷೆ ದೇವರಾಜ ತೆವಳಕಾನ, ಗ್ರಾಪಂ ಸದಸ್ಯರು, ಪಿಡಿಒ ರಾಜಾರಾಮ ಭಟ್ಟ, ಈಶ್ವರ ನಾಯ್ಕ ಮನಮನೆ, ಮಾರುತಿ ನಾಯ್ಕ ಹೊಸೂರ, ಗುರುರಾಜ ಶಾನಭಾಗ, ತಿಮ್ಮಪ್ಪ ಕಂವಚೂರ, ಅಣ್ಣಪ್ಪ ನಾಯ್ಕ, ತೋಟಪ್ಪ, ಪ್ರಸನ್ನ ಹೆಗಡೆ ಇತರರಿದ್ದರು.

ಹಾನಿಗೊಳಗಾದ ಅಂಗಡಿ, ಮನೆಗಳಿಗೆ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಭೇಟಿ ನೀಡಿ ಸಮಾಧಾನ ಹೇಳಿದರು. ತಹಶೀಲ್ದಾರ ಸಂತೋಷ ಭಂಡಾರಿ, ಇಒ ಪ್ರಶಾಂತರಾವ್‌, ಸಿಪಿಐ ಕುಮಾರ ಕೆ. ಇದ್ದರು.

ಟಾಪ್ ನ್ಯೂಸ್

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.