
ಯಲ್ಲಾಪುರ: ಕಂದಕಕ್ಕೆ ಉರುಳಿ ಬಿದ್ದು ನುಜ್ಜುಗುಜ್ಜಾದ ಲಾರಿ: ಇಬ್ಬರು ಸಾವು
Team Udayavani, Sep 17, 2022, 3:57 PM IST

ಯಲ್ಲಾಪುರ: ಗ್ರಾನೈಟ್ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ರಾ.ಹೆದ್ದಾರಿ 63 ಅಪಾಯಕಾರಿ ಯೂಟರ್ನ್ ಬಳಿ ಶನಿವಾರ ಮಧ್ಯಾಹ್ನ( ಸೆ.17 ರಂದು) ನಡೆದಿದೆ.
ರಸ್ತೆಯಿಂದ ನೂರೈವತ್ತು ಅಡಿಯಷ್ಟು ಆಳದ ಕಂದಕದಲ್ಲಿ ಲಾರಿ ಬಿದ್ದಿದ್ದು ಲಾರಿಯಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.
ಲಾರಿಯಲ್ಲಿದ್ದ ಗ್ರಾನೈಟ್ ಮತ್ತು ಲಾರಿ ಇವುಗಳ ಅಡಿಯಲ್ಲಿದ್ದ ಶವವನ್ನು ಮೇಲಕ್ಕೆತ್ತಲಾಗಿದೆ. ಆದರೆ ಅಪಘಾತದ ರಭಸಕ್ಕೆ ಮೃತರ ಗುರುತು ಪರಿಚಯ ಹಚ್ಚಲು ಸಾಧ್ಯವಾಗುತ್ತಿಲ್ಲ.
ಅಪಘಾತದಿಂದ ಲಾರಿ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಲಾರಿಯ ರಜಿಸ್ಟ್ರೇಶನ್ ಸೇರಿದಂತೆ ಯಾವ ದಾಖಲೆಯೂ ಪೊಲೀಸರಿಗೆ ಇದುವರೆಗೆ ಸಿಗಲಿಲ್ಲ. ಲಾರಿ ಆಂದ್ರಪ್ರದೇಶದ್ದು ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ.
ಎರಡು ಶವಗಳು ಸಿಕ್ಕಿದ್ದು, ಘಟನೆಯಲ್ಲಿ ಇನ್ನೂ ಸಾವುಗಳಾಗಿದೆಯೇ ಎನ್ನುವುದನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ

ಡಿಕೆಶಿ, ಯುವತಿ ಸೇರಿ ಸಿಡಿ ಗ್ಯಾಂಗ್ ಬಂಧಿಸಲು ರಮೇಶ ಜಾರಕಿಹೊಳಿ ಒತ್ತಾಯ

ಗಾಂಧಿ ಮಾರ್ಗದಲ್ಲಿ ನಡೆಯುವ ಸಂಕಲ್ಪವನ್ನು ಮಾಡಬೇಕು: ಸಿಎಂ ಬಸವರಾಜ ಬೊಮ್ಮಾಯಿ

ಹವಾಮಾನ ವೈಪರೀತ್ಯದಿಂದ ವಿಮಾನ ಹಾರಾಟ ರದ್ದು: ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು

ಹೈದರಾಬಾದ್: ಖ್ಯಾತ ಕವಿ, ವಿಮರ್ಶಕ, ಕತೆಗಾರ ಕೆ.ವಿ.ತಿರುಮಲೇಶ್ ವಿಧಿವಶ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ವಾಹನಗಳು ಗುಜರಿಗೆ: ಗಡ್ಕರಿ

ಬಿಆರ್ಟಿಗೂ, ಅರಸರಿಗೂ ಅವಿನಾಭವ ಸಂಬಂಧ

ದ್ವಿಚಕ್ರ ವಾಹನ ಕಳ್ಳರ ಬಂಧನ: 12 ಬೈಕ್ ಪೊಲೀಸರ ವಶಕ್ಕೆ

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ