ಮೀನು ಮಾರುಕಟ್ಟೆಯಲ್ಲಿ ಸ್ವಚ್ಛತೆ ಕಾಪಾಡಿ


Team Udayavani, Jun 16, 2020, 3:05 PM IST

ಮೀನು ಮಾರುಕಟ್ಟೆಯಲ್ಲಿ ಸ್ವಚ್ಛತೆ ಕಾಪಾಡಿ

ಭಟ್ಕಳ: ಪಟ್ಟಣದ ಹಳೇ ಬಸ್‌ ನಿಲ್ದಾಣದಲ್ಲಿರುವ ಮೀನು ಮಾರುಕಟ್ಟೆ ಸುಸಜ್ಜಿತ ಹೊಸ ಮೀನು ಮಾರುಕಟ್ಟೆಗೆ ಸ್ಥಳಾಂತರಿಸಲು ಅಭಿಪ್ರಾಯ ಸಂಗ್ರಹಣೆ ಸಭೆ ಶಾಸಕ ಸುನೀಲ್‌ ನಾಯ್ಕ ನೇತೃತ್ವದಲ್ಲಿ ಪುರಸಭಾ ಸಭಾ ಭವನದಲ್ಲಿ ನಡೆಯಿತು.

ಪುರಸಭಾ ಸದಸ್ಯರು ಹಾಗೂ ನಾಗರಿಕರ ಹಲವು ಪ್ರಶ್ನೆಗಳಿಗೆ ಸಮಜಾಯಿಷಿ ನೀಡಿದ ಅವರು, ಇಲ್ಲಿ ಸಭೆ ಕರೆದಿರುವುದು ಅಭಿಪ್ರಾಯ ಸಂಗ್ರಹಕ್ಕಾಗಿಯೇ ವಿನಃ ಬೇರೆ ಯಾವುದೇ ಉದ್ದೇಶವಿಲ್ಲ. ಎಲ್ಲರಿಂದಲೂ ಮಾಹಿತಿ ಸಂಗ್ರಹಿಸಿಯೇ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ. ಯಾರಿಗೂ ತಿಳಿಸದೇ ಮಾಡುವುದಾದರೆ ಸಭೆ ಕರೆಯುವ ಅವಶ್ಯಕತೆ ಏನಿತ್ತು ಎಂದರಲ್ಲದೇ, ಈ ಕುರಿತು ಇನ್ನೂ ಹಲವಾರು ಸಭೆ ಮಾಡಲು ನಾನು ಸಿದ್ಧನಿದ್ದೇನೆ. ಇಲ್ಲಿ ಯಾರನ್ನು ಕತ್ತಲೆಯಲ್ಲಿಡುವ ಪ್ರಶ್ನೆಯೇ ಇಲ್ಲ, ಎಲ್ಲರ ಅಭಿಪ್ರಾಯವನ್ನು ಜಿಲ್ಲಾಡಳಿತಕ್ಕೆ ತಿಳಿಸಿ ಮತ್ತೆ ಜಿಲ್ಲಾಡಳಿತದೊಂದಿಗೆ ಸಭೆ ನಡೆಸುವ ಕುರಿತು ಹೇಳಿದರು.

ಪುರಸಭಾ ಆಡಳಿತಾಧಿಕಾರಿ ಹಾಗೂ ಸಹಾಯಕ ಆಯುಕ್ತ ಭರತ್‌ ಎಸ್‌. ಮಾತನಾಡಿ, ಸರಕಾರ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸುಸಜ್ಜಿತ ಮೀನು ಮಾರುಕಟ್ಟೆಯನ್ನು ಕಟ್ಟಿಸಿದೆ. ಅದು ಸದುಪಯೋಗವಾಬೇಕು ಮತ್ತು ಮೀನು ಮಾರುಕಟ್ಟೆಯಲ್ಲಿ ಸ್ವತ್ಛತೆ ಕಾಪಾಡಬೇಕು. ಈಗಿರುವ ಮಾರುಕಟ್ಟೆ ಸ್ಥಳಾಂತರಿಸಿ ಸ್ವಚ್ಛತೆ ಕಾಪಾಡುವ ಉದ್ದೇಶ ಸರಕಾರದ್ದು ಎಂದರು.

ಸಭೆಯಲ್ಲಿ ಮಾತನಾಡಿದ ಪುರಸಭಾ ಮಾಜಿ ಸದಸ್ಯ ಕೃಷ್ಣಾ ನಾಯ್ಕ, ಆಸರಕೇರಿ ಈಗಿರುವ ಮೀನು ಮಾರುಕಟ್ಟೆಯನ್ನು ಅಲ್ಲಿಯೇ ಮುಂದುವರಿಸಬೇಕು. ಹೊಸ ಮೀನುಮಾರುಕಟ್ಟೆಯು ಸಂತೆ ಮಾರುಕಟ್ಟೆಯ ಪಕ್ಕದಲ್ಲಿಯೇ ಇದ್ದು ವಾರದ ಸಂತೆ ಮತ್ತು ಬೇರೆ ಬೇರೆ ದಿನಗಳಲ್ಲಿ ಅಲ್ಲಿಗೆ ಮೀನುಗಾರ ಮಹಿಳೆಯರು ಹೋಗುವುದಕ್ಕೂ ತೀರಾ ತೊಂದರೆ ಪಡೆಬೇಕಾಗಬಹುದು ಎಂದರು.

ಮಾಜಿ ಸದಸ್ಯ ವೆಂಕಟೇಶ ನಾಯ್ಕ ಮಾತನಾಡಿ, ಮೀನು ಮಾರುಕಟ್ಟೆ ಇದೆ ಎನ್ನುವ ಉದ್ದೇಶದಿಂದಲೇ ಪುರಸಭೆಯ ಬೇರೆ ಬೇರೆ ಅಂಗಡಿಗಳನ್ನು ಹೆಚ್ಚಿನ ಬೆಲೆಗೆ ಹರಾಜು ಕೂಗಿ ಪಡೆದವರಿದ್ದಾರೆ. ಚೌಥನಿ ಮುಖ್ಯ ರಸ್ತೆ, ಕೋರ್ಟ್‌ ಎದುರು, ಸರ್ಕಲ್‌ ಬಳಿಯಲ್ಲಿ ಮೀನು ಮಾರಾಟ ಮಾಡುತ್ತಿರುವುದರಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಈ ಸಮಸ್ಯೆಗಳನ್ನು ಬಗೆಹರಿಸುವುದನ್ನು ಮೊದಲು ಮಾಡಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪುರಸಭಾ ಸದಸ್ಯ ಮೋಹನ ನಾಯ್ಕ ಮಾತನಾಡಿ, ಇಲ್ಲಿಯ ತನಕ ಮೀನು ಮಾರುಕಟ್ಟೆ ಸ್ಥಳಾಂತರದ ವಿಷಯದಲ್ಲಿಯೇ ಸಭೆಗಳು ನಡೆಯುತ್ತಿದೆ. ಈ ಹಿಂದೆ ಅಂಗಡಿಕಾರರಿಗೂ ಅನ್ಯಾಯವಾಗಿದೆ. ಅದರ ಕುರಿತೂ ಕೂಡಾ ಸಭೆಯನ್ನು ನಡೆಸಿ ಅವರಿಗೆ ನ್ಯಾಯ ಕೊಡಿ ಎಂದು ಕೋರಿದರು. ಪುರಸಭಾ ಅಂಗಡಿಕಾರರು ಕೋವಿಡ್‌-19 ಲಾಕ್‌ಡೌನ್‌ ಸಮಯದಲ್ಲಿ ತಮ್ಮ ಅಂಗಡಿಗಳು ಮುಚ್ಚಿದ್ದು, ಅವುಗಳ ಭಾಡಿಗೆ ಮನ್ನಾ ಮಾಡಬೇಕು ಎಂದರು.

ಪುರಸಭಾ ಮೀನುಮಾರುಕಟ್ಟೆ ಟೆಂಡರ್‌ ವಹಿಸಿಕೊಂಡ ಕ್ವಾಜಾ ಅವರು ಕೂಡಾ ತಮ್ಮ ಟೆಂಡರ್‌ ಹಣವನ್ನು ಕಡಿತಗೊಳಿಸಬೇಕು ಎಂದರು. ಸಭೆಯಲ್ಲಿ ಪುರಸಭಾ ಸದಸ್ಯರು, ಅಧಿಕಾರಿಗಳು, ಮೀನುಗಾರ ಮಹಿಳೆಯರು, ನಾಗರಿಕರು ಇದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.