Sirsi ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಸಾವು
Team Udayavani, Jul 18, 2023, 8:47 PM IST
ಶಿರಸಿ: ವ್ಯಕ್ತಿಯೋರ್ವ ಅಡಿಕೆ ಮರಕ್ಕೆ ಮದ್ದು ಹೊಡೆಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಕರಸುಳ್ಳಿ ಗ್ರಾಮದಲ್ಲಿ ನಡೆದಿದೆ.
ಆಲ್ಮನೆಯ ವೆಂಕಟರಮಣ ಗಣಪ ಗೌಡಾ (55) ಎಂಬಾತನೇ ಅಡಿಕೆ ಮರದಿಂದ ಬಿದ್ದು ಮೃತಪಟ್ಟ ವ್ಯಕ್ತಿ.
ಈತ ಮಂಗಳವಾರ ಅಡಿಕೆ ಮರಕ್ಕೆ ಮದ್ದು ಹೊಡೆಯಲು ಮರ ಎರಿ ಸಿಂಪರಣೆ ಮಾಡುತ್ತಿದ್ದು, ಆ ವೇಳೆಯಲ್ಲಿ ಕಾಲು ಜಾರಿ ಕೆಳಕ್ಕೆ ಬಿದ್ದು ಮೃತಪಟ್ಟಿದ್ದಾರೆ.
ಈ ಕುರಿತು ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್ಐ ಸೀತಾರಾಮ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.