ಅಂಕೋಲಾ ಬಸ್ ಸ್ಟ್ಯಾಂಡ್ ಶೌಚಾಲಯದಲ್ಲಿ ಒಂದೂವರೆ ಗಂಟೆ ಮಲಗಿದ ಮಂಗಳೂರಿನ ವ್ಯಕ್ತಿ


Team Udayavani, Mar 3, 2022, 9:45 AM IST

1sleep

ಅಂಕೋಲಾ: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ತಾಲೂಕಿನ ಸಾರಿಗೆ ಸಂಸ್ಥೆಯ ಕೇಂದ್ರ ಬಸ್ ಸ್ಟಾಂಡ್ ಹಿಂಬದಿಯಲ್ಲಿರುವ ಶೌಚಾಲಯದ ಒಳಗಡೆ ಹೋಗಿ ಬಾಗಿಲು ಹಾಕಿಕೊಂಡು ಮಲಗಿದ್ದ ಘಟನೆ ಅಂಕೋಲಾ ಬಸ್ ನಿಲ್ದಣದಲ್ಲಿ‌ ನಡೆದಿದೆ.

ನೂತನವಾಗಿ ನಿರ್ಮಾಣವಾಗಿರುವ ಅಂಕೋಲಾ ಬಸ್ ನಿಲ್ದಾಣದ ಹಿಂಬದಿಯಲ್ಲಿ ಇರುವ ಶೌಚಾಲಯದ ಕೋಣೆಯೊಂದಕ್ಕೆ ಪ್ರವೇಶಿಸಿದ ವ್ಯಕ್ತಿ ಒಳಡೆಯಿಂದ ಚಿಲಕ ಹಾಕಿಕೊಂಡಿದ್ದ.

ಒಳಗೆ ಹೋದ ವ್ಯಕ್ತಿ ಸುಮಾರು ಒಂದು ಗಂಟೆಗೂ ಹೆಚ್ಚಿನ ಕಾಲ ಹೊರಗಡೆ ಬರದೇ ಇದ್ದರಿಂದ ಶೌಚಾಲಯದ ನಿರ್ವಹಣಾ ಸಿಬ್ಬಂದಿ ಕದ ತಟ್ಟಿದರೂ ಒಳಗಡೆಯಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ಹಿಂಬದಿಯಲ್ಲಿ ಇರುವ ಸಣ್ಣ ಕಿಂಡಿಯಲ್ಲಿ ಮೊಬೈಲ್ ತೂರಿಸಿ ವಿಡಿಯೋ ಚಿತ್ರೀಕರಣ ಮಾಡಿದಾಗ ಒಳಗಡೆ ಆ ವ್ಯಕ್ತಿ ಸತ್ತು ಬಿದ್ದ ರೀತಿಯಲ್ಲಿ ಬಿದ್ದುಕೊಂಡಿರುವುದು ಕಂಡು ಬಂದಿದೆ.

ಇದರಿಂದ ಆತಂಕಗೊಂಡ ನಿರ್ವಹಣಾ ಸಿಬ್ಬಂದಿ ವಿಷಯವನ್ನು ಬಸ್ ನಿಲ್ದಾಣದ ನಿಯಂತ್ರಕರ ಗಮನಕ್ಕೆ ತಂದಿದ್ದಾನೆ. ತಕ್ಷಣ ಬಸ್ ನಿಲ್ದಾಣದ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಬಾಗಿಲು ಬಡಿದರೂ ಒಳಗಡೆಯಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಬಾರದ ಕಾರಣ ಅಂಕೋಲಾ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಗಿಲಿನ ಶೀಟ್ ಒಡೆದ ಭಾಗದಿಂದ ಕೈ ತೂರಿಸಿ ಬಾಗಿಲು ತೆರೆದು  ನೋಡಿದಾಗ ಒಳಗೆ ಬಿದ್ದಿರುವ ವ್ಯಕ್ತಿಯನ್ನು ಕಂಡು ಒಂದು ಕ್ಷಣ ಆತ ಮೃತ ಪಟ್ಟಿರಬಹುದು ಎಂದು ಎಲ್ಲರೂ ಭಯಗೊಂಡಿದ್ದಾರೆ.

ಇದನ್ನೂ ಓದಿ:ಶತಮಾನದ ಅತೀ ದೊಡ್ಡ ವಲಸೆ!: ಒಂದೇ ವಾರದಲ್ಲಿ ಉಕ್ರೇನ್ ತೊರೆದ ಒಂದು ಮಿಲಿಯನ್ ಜನರು!

ಆದರೆ ವ್ಯಕ್ತಿ ಉಸಿರಾಡುತ್ತಿರುವುದನ್ನು ಗಮನಿಸಿ ತಟ್ಟಿ ಎಬ್ಬಿಸಿದಾಗ ವ್ಯಕ್ತಿ ಅಸ್ವಸ್ಥ ಆಗಿರುವ ರೀತಿಯಲ್ಲಿ ಎದ್ದು ಕುಳಿತಿರುವುದಾಗಿ ತಿಳಿದು ಬಂದಿದೆ.

ವ್ಯಕ್ತಿಯ ಕುರಿತು ವಿಚಾರಣೆ ನಡೆಸಿದಾಗ ಆತ ಮಂಗಳೂರಿನ ಕಾಪು ಮೂಲದವನಾಗಿದ್ದು ರಾಷ್ಟ್ರೀಯ ಹೆದ್ದಾರಿ ಹುಬ್ಬಳ್ಳಿ ರಸ್ತೆಯಲ್ಲಿ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಈತನ ಕುಡಿತದ ಚಟದಿಂದ ಬೇಸತ್ತು ಹೊಟೇಲ್ ಮಾಲಿಕರು ಕೆಲಸದಿಂದ ತೆಗೆದು ಹಾಕಿದ್ದರು ಎನ್ನುವ ಮಾಹಿತಿ ದೊರಕಿದ್ದು ಬೆಳಿಗ್ಗೆ ಕುಡಿದ ಮತ್ತಿನಲ್ಲಿ ಮತ್ತು ನಿದ್ರೆಯ ಮಂಪರಿನಲ್ಲಿದ್ದ ಕಾರಣ ಶೌಚಾಲಯದಲ್ಲಿ ಮಲಗಿರುವದಾಗಿ ತಿಳಿದು ಬಂದಿದ್ದು, ನಂತರ ಬಸ್ ಮೂಲಕ ಊರಿಗೆ ತೆರಳಿದ್ದಾನೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.