Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

ಗಂಗಾವಳಿ ಕೂಡು ರಸ್ತೆ ಅರೆಬರೆ : ಪ್ರಚಾರ ಗಿಟ್ಟಿಸಿಕೊಳ್ಳಲು ಮುಂದಾದ ಶಾಸಕರು

Team Udayavani, Apr 30, 2024, 5:40 PM IST

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

ಗೋಕರ್ಣ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಜನಪ್ರತಿನಿಧಿಗಳು ನಾವು ಜನರ ಕೆಲಸ ಮಾಡಿದ್ದೇವೆ ಎನ್ನುವ ಕಾರಣಕ್ಕಾಗಿ ಪ್ರಚಾರ ಗಿಟ್ಟಿಸಿಕೊಳ್ಳಲು ಮುಂದಾಗುತ್ತಿದ್ದಾರೆ. ಅದಕ್ಕೆ ಉದಾಹರಣೆಯೆಂದರೆ ಮಂಜಗುಣಿ ಗಂಗಾವಳಿ ನಡುವಿನ ಸೇತುವೆ ಸಂಪರ್ಕ ರಸ್ತೆಯೂ ಒಂದು. ಇಲ್ಲಿ ಕೂಡು ರಸ್ತೆಗೆ ಮಂಜಗುಣಿಯಲ್ಲಿ ಮಣ್ಣು ಹಾಕದಿದ್ದರೂ ವಾಹನ ಸಂಚಾರಕ್ಕೆ ಮುಕ್ತವಾಗಿದೆ ಎಂದು ಶಾಸಕರಾದ ಸತೀಶ ಸೈಲ್, ದಿನಕರ ಶೆಟ್ಟಿ ಹೇಳಿರುವುದು ಈಗ ಜನಾಕ್ರೋಶಕ್ಕೆ ಕಾರಣವಾಗಿದೆ.

ಈ ಸೇತುವೆ ಕಾಮಗಾರಿ ಆರಂಭಗೊಂಡು 7 ವರ್ಷ ಕಳೆದಿದೆ. ಆದರೆ ಕೇವಲ ಸೇತುವೆಯನ್ನು ಪೂರ್ಣಗೊಳಿಸಿ ಜೋಡುರಸ್ತೆಗಳನ್ನು ಮಾಡದೇ ಹಾಗೇ ಬಿಡಲಾಗಿತ್ತು. ಹೀಗಾಗಿ ಸ್ಥಳೀಯರು ಅನೇಕ ಬಾರಿ ಪ್ರತಿಭಟನೆಯನ್ನು ಕೂಡ ಮಾಡಿದ್ದರು. ಮಳೆಗಾಲದ ಹಿನ್ನೆಲೆಯಲ್ಲಿ ಕಳೆದ ವರ್ಷ ತಾತ್ಕಾಲಿಕವಾಗಿ ದ್ವಿಚಕ್ರ ವಾಹನ ಸಂಚರಿಸಲು ಅನುಕೂಲ ಮಾಡಿಕೊಟ್ಟಿದ್ದರು.

ಈಗ ಚುನಾವಣೆ ಸಮೀಪಿಸುತ್ತಿದ್ದಂತೆ ತಕ್ಷಣ ಗಂಗಾವಳಿ ಮತ್ತು ಮಂಜಗುಣಿಯ ಕೂಡ ರಸ್ತೆಯನ್ನು ನಿರ್ಮಿಸಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು. ಇಲ್ಲದಿದ್ದರೆ ಚುನಾವಣೆ ಬಹಿಷ್ಕರಿಸಲಾಗುವುದು ಎಂದು ಬಹುತೇಕರು ಮನವಿ ಕೂಡ ಸಲ್ಲಿಸಿದ್ದರು.

ಅದರಂತೆ ಈಗ ಚುನಾವಣೆ ಬಹಿಷ್ಕಾರದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ರಸ್ತೆಗೆ ಮಣ್ಣನ್ನು ಹಾಕಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಕುಮಟಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಮುಂದಾಗಿದ್ದರು.

ಆದರೆ ಎರಡು ಬದಿಯ ರಸ್ತೆ ಸರಿಪಡಿಸಬೇಕು. ಹಾಗೇ ಇಲ್ಲಿ ಅನಾಹುತ ಉಂಟಾದರೆ ಅದಕ್ಕೆ ಇಲಾಖೆಯವರೇ ಜವಾಬ್ದಾರರು ಎಂದು ಸ್ಥಳಕ್ಕೆ ಆಗಮಿಸಿದ್ದ ಕೆಆರ್‌ಡಿಸಿಎಲ್ ಅವರಿಗೆ ಸ್ಥಳೀಯರು ಎಚ್ಚರಿಕೆ ನೀಡಿದ್ದರು. ಗಂಗಾವಳಿ ಭಾಗದಲ್ಲಿ ಅಂಡರ್‌ಪಾಸ್ ನಿರ್ಮಾಣವಾಗಿದ್ದರಿಂದ ಮಣ್ಣನ್ನು ತುಂಬಲಾಗಿದೆ. ಅಲ್ಲಿ ವಾಹನ ಸಂಚಾರಕ್ಕೆ ಅಷ್ಟು ತೊಂದರೆಯಾಗುವುದಿಲ್ಲ. ಆದರೆ ಮಂಜಗುಣಿಯಲ್ಲಿ ಮಾತ್ರ ಸ್ವಲ್ಪವೂ ಮಣ್ಣು ಹಾಕದೇ ಹಾಗೇ ಬಿಡಲಾಗಿದೆ. ಈ ಹಿಂದೆ ಬೈಕ್ ಓಡಾಡುವ ಜಾಗದಲ್ಲಿಯೇ ಕೆಲವರು ಹುಂಬುಧೈರ್ಯ ಮಾಡಿ ಕಾರನ್ನು ಏರಿಸುತ್ತಿದ್ದಾರೆ. ಸ್ವಲ್ಪವೇ ಹೆಚ್ಚುಕಡಿಮೆಯಾದರೂ ಇಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ.

ಮಂಜಗುಣಿ ಭಾಗದಲ್ಲಿ ಇದುವರೆಗೂ ಅಂಡರ್‌ಪಾಸ್ ಮಾಡಿಲ್ಲ. ಇನ್ನು ಮಣ್ಣು ಹಾಕಿ ಸರಿಪಡಿಸಲು ಮುಂದಾದರೆ ಅಲ್ಲಿ ಇನ್ನೆರಡು ರಸ್ತೆಗಳು ಕೂಡುವುದರಿಂದ ಅಪಾಯ ಖಚಿತ. ಹೀಗಾಗಿ ಸ್ಥಳೀಯರು ಅಂಡರ್‌ಪಾಸ್ ಕಾಮಗಾರಿ ಮಾಡಿ ಅದಕ್ಕೆ ಬೇಕಾಗುವ ಸಹಕಾರವನ್ನು ನಾವು ಮಾಡುತ್ತೇವೆ ಎಂದರೂ ಗುತ್ತಿಗೆ ಕಂಪನಿಯವರು ಒಪ್ಪುತ್ತಿಲ್ಲ. ಹಾಗೇ ಇಲ್ಲಿ ಮಣ್ಣನ್ನು ಕೂಡ ಹಾಕುವ ಧೈರ್ಯ ಮಾಡುತ್ತಿಲ್ಲ. ಇಲ್ಲಿ ಮಣ್ಣು ಹಾಕಿ ವಾಹನ ಸಂಚಾರಕ್ಕೆ ಅವಕಾಶ ಮಾಡಿದರೆ ಪ್ರತಿನಿತ್ಯ ಅಪಘಾತಗಳು ಸಂಭವಿಸುವ ಬಗ್ಗೆ ಕಂಪನಿಯವರಿಗೆ ಅರಿವಿದೆ. ಆದರೆ ಶಾಸಕರಾದ ದಿನಕರ ಶೆಟ್ಟಿ ಹಾಗೂ ಸತೀಶ ಸೈಲ್ ರಸ್ತೆ ಕಾಮಗಾರಿಯನ್ನು ಉತ್ತಮವಾಗಿಯೇ ನಿರ್ಮಾಣ ಮಾಡಿ ಪ್ರಚಾರ ಪಡೆಯುವುದನ್ನು ಬಿಟ್ಟು ಜನರ ಜೀವದ ಜತೆ ಆಟ ಆಡುತ್ತಿರುವುದಕ್ಕೆ ಆಕ್ರೋಶ ಕೇಳಿಬರುತ್ತಿದೆ.

ಕುಮಟಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಅವರು ಕಳೆದ ಬಾರಿಯೂ ಅವರೇ ಶಾಸಕರಾಗಿದ್ದರು. ತಾವು ಶಾಸಕರಾಗಿದ್ದ ವೇಳೆಯಲ್ಲಿಯೇ ಈ ಕಾಮಗಾರಿ ಮುಗಿಸಲು ಪ್ರಯತ್ನಿಸಬಹುದಿತ್ತು. ಆದರೆ ಅಂದು ಈ ಬಗ್ಗೆ ಗಂಭೀರವಾಗಿ ಪರಿಗಣಿಸದ ಶಾಸಕರು ಈಗ ಲೋಕಸಭಾ ಚುನಾವಣೆಗೆ ಮತದಾನ ಬಹಿಷ್ಕಾರ ಎಂದಕೂಡಲೇ ಓಡಿ ಬಂದು ರಸ್ತೆ ಸಮಸ್ಯೆ ಮುಗಿದು ವಾಹನ ಸಂಚಾರಕ್ಕೆ ಸೇತುವೆ ಮುಕ್ತವಾಗಿದೆ ಎಂದು ಹೇಳುವ ಮೂಲಕ ತಮ್ಮ ಬಂಡತನವನ್ನು ಪ್ರದರ್ಶಿಸಿದ್ದಾರೆ. ಅವರಿಗೆ ಅಷ್ಟು ಕಾಳಜಿ ಇದ್ದರೆ ಮಂಜಗುಣಿ ಭಾಗಕ್ಕೆ ಬಂದು ನೋಡಬೇಕಿತ್ತು. ಅಲ್ಲಿನ ಸ್ಥಿತಿಗತಿಗಳನ್ನು ಗಮನಸಿದರೆ ಹೀಗೆ ಮಾತನಾಡುತ್ತಿರಲಿಲ್ಲವೇನೋ.

2018ರಲ್ಲಿ ಅಂದು ಶಾಸಕರಾಗಿದ್ದ ಸತೀಶ ಸೈಲ್ ಅವರು ಸೇತುವೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ್ದರು. ನಂತರ ನಡೆದ ಚುನಾವಣೆಯಲ್ಲಿ ಪರಾಭವಗೊಂಡು ಬಿಜೆಪಿಯ ರೂಪಾಲಿ ನಾಯ್ಕ ಆಯ್ಕೆಯಾಗಿದ್ದರು. ಎರಡು ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿದ್ದು, ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದರೂ ಕೂಡ ಈ ಇಬ್ಬರಿಂದಲೂ ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ.

ಕುಮಟಾ ಕ್ಷೇತ್ರದಿಂದ ಮತ್ತೆ ದಿನಕರ ಶೆಟ್ಟಿ ಆಯ್ಕೆಯಾದರೆ, ಕಾರವಾರ ಅಂಕೋಲಾ ಕ್ಷೇತ್ರದಿಂದ ಸತೀಶ ಸೈಲ್ ಆಯ್ಕೆಯಾದರು. ಆದರೂ ಕೂಡ ಮಂಜಗುಣಿಯಲ್ಲಿ ಬೈಕ್ ತೆರಳುವಷ್ಟು ರಸ್ತೆ ನಿರ್ಮಿಸಿದ್ದರೂ ಅದು ಈಗೀಗ ಸ್ವಲ್ಪ ಅಗಲೀಕರಣವಾಗಿದೆ. ಇಲ್ಲಿ ವಾಹನ ಸಂಚಾರ ಮಾಡಿದರೆ ನಿಜಕ್ಕೂ ಅಪಘಾತಗಳು ನಡೆಯುವುದರಲ್ಲಿ ಅನುಮಾನವಿಲ್ಲ. ಸ್ಥಳ ಪರಿಶೀಲನೆ ಮಾಡದೇ ಶಾಸಕ ಸತೀಶ ಸೈಲ್ ಅವರು ಸೇತುವೆ ಕಾಮಗಾರಿ ಮುಗಿದಿದೆ ಎಂದು ಹೇಳಿಕೆ ನೀಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ.

ಟಾಪ್ ನ್ಯೂಸ್

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-qwew-eqw-wq

Yellapur; ಶಾಲೆಯ ಮೇಲೆ ಬಿದ್ದ ಬೃಹತ್ ಮರ

Ankola: ಅಪ್ರಾಪ್ತ ಬಾಲಕಿಯ ಮೇಲೆ ವಯೋವೃದ್ಧನಿಂದ ಲೈಂಗಿಕ ದೌರ್ಜನ್ಯ; ಪ್ರಕರಣ ದಾಖಲು

Ankola: ಅಪ್ರಾಪ್ತ ಬಾಲಕಿಯ ಮೇಲೆ ವಯೋವೃದ್ಧನಿಂದ ಲೈಂಗಿಕ ದೌರ್ಜನ್ಯ; ಪ್ರಕರಣ ದಾಖಲು

5-sirsi

Sirsi: ಕರ್ನಾಟಕ ಜಾನಪದ ಪರಿಷತ್‌ನ ನೂತನ ಜಿಲ್ಲಾಧ್ಯಕ್ಷರಾಗಿ ಡಾ. ವೆಂಕಟೇಶ ನಾಯ್ಕ ಆಯ್ಕೆ

Uttara Kannada ಗೋಕರ್ಣದಲ್ಲಿ ಪೂಜೆಗೆ ತಡೆ: 11 ಜನರ ವಿರುದ್ಧ ದೂರು ದಾಖಲು

Uttara Kannada ಗೋಕರ್ಣದಲ್ಲಿ ಪೂಜೆಗೆ ತಡೆ: 11 ಜನರ ವಿರುದ್ಧ ದೂರು ದಾಖಲು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.