ಮಂಜುಗುಣಿ ತೀರ್ಥಕೆರೆಗೆ ಭಕ್ತರಿಂದಲೇ ಕಾಯಕಲ್ಪ

•ವೆಂಕಟರಮಣ ಭಕ್ತರ ಕರ ಸೇವೆ •ಇನ್ನೂ ನಡೆಯುತ್ತಿದೆ ಕಾರ್ಯ

Team Udayavani, May 27, 2019, 11:08 AM IST

uk-tdy-2..

ಶಿರಸಿ: ಕರ್ನಾಟಕದ ತಿರುಪತಿ ಎಂದೇ ಕರೆಯಲಾಗುವ ಮಂಜುಗುಣಿ ವೆಂಕಟರಮಣ ದೇವಾಲಯದ ಪಾರ್ಶ್ವದಲ್ಲೇ ಇರುವ ಕೋನಾರಿ ತೀರ್ಥ ಕೆರೆಗೆ ಕಾಯಕಲ್ಪದ ಭಾಗ್ಯ ಸಿಕ್ಕಿದೆ. ವೆಂಕಟರಮಣನ ಭಕ್ತರೇ ಕರ ಸೇವೆಯ ಕಾರ್ಯ ಮಾಡುತ್ತಿದ್ದಾರೆ.

ಬಹುಕಾಲದಿಂದ ಅಭಿವೃದ್ಧಿಗೆ ಹಂಬಲಿಸುತ್ತಿದ್ದ ಕೆರೆಯ ಜೀರ್ಣೋದ್ಧಾರಕ್ಕೆ ಕಂಕಣ ತೊಟ್ಟು ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಅರ್ಧಕ್ಕಿಂತ ಹೆಚ್ಚು ಕಾರ್ಯವಾಗಿದ್ದು, ಕೆಲವೇ ದಿನಗಳಲ್ಲಿ ಪೂರ್ಣವಾಗಲಿದೆ.

ಸುಮಾರು ಒಂದು ಸಾವಿರದ ಎರಡನೂರು ವರ್ಷಗಳಾಚೆ ಮಂಜುಗುಣಿಯ ಕೋನಾರಿ ತೀರ್ಥವನ್ನು ಈ ಶತಮಾನದಲ್ಲೇ ಪ್ರಥಮ ಬಾರಿಗೆ ಹೂಳೆತ್ತುವ ಕಾರ್ಯ ನಡೆಯುತ್ತಿದೆ. ಮಂಜುಗುಣಿ ಭಕ್ತರು ಹಾಗೂ ಸುತ್ತಲಿನ ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ ಪಾಲ್ಗೊಂಡು ಗುದ್ದಲಿ ಬುಟ್ಟಿ ಹಿಡಿದು ಕೆಲಸ ಮಾಡಿದ್ದಾರೆ. ದೇವರ ವರ್ಧಂತಿಯಂದು ಕೋನಾರಿ ತೀರ್ಥ ಕೆರೆಯಿಂದ ನೀರು ತಂದು ಅಕ್ಕಿ ತೊಳೆಯುಲಾಗುತ್ತಿತ್ತು. ಮಂಜುಗುಣಿಯಲ್ಲಿ ಐದು ಕೆರೆಗಳಿದ್ದರೂ ದೀಪೋತ್ಸವ ಆಚರಣೆ ಕೂಡ ಇಲ್ಲೇ ನಡೆಯುತ್ತಿತ್ತು. ಆದರೆ, ಸಾಕಷ್ಟು ಹೂಳು ತುಂಬಿತ್ತು.

ಮೇ ಎರಡನೇ ವಾರದಲ್ಲಿ ಕೆರೆ ಹೂಳೆತ್ತುವಿಕೆಗೆ ಆಡಳಿತ ಮಂಡಳಿ ಸೂಚನೆ ಪ್ರಕಾರ ಭಕ್ತರು ಮುಂದಾಗಿದ್ದಾರೆ. 60 ಅಡಿ ಅಗಲ ಮತ್ತು ಅಷ್ಟೇ ಉದ್ದದ ಈ ಕೆರೆಯ ಹೂಳನ್ನು ಮಂಜುಗುಣಿ, ರಾಗಿಹೊಸಳ್ಳಿ, ದೇವನಳ್ಳಿ, ಸವಲೆ, ಕಲ್ಲಳ್ಳಿ, ಲೆಕ್ಕರಕಿ, ಹೊಳೆಬೈಲ್, ಮೇಲಿನಕೊಪ್ಪಲು, ಕಳೂಗಾರ, ಕಿರಗಾರ ಸೇರಿದಂತೆ ಸುತ್ತಲಿನ ಹದಿನೈದಕ್ಕೂ ಅಧಿಕ ಗ್ರಾಮಗಳ ಜನರು ಪಾಲ್ಗೊಂಡಿದ್ದು ಹೂಳೆತ್ತಿದ್ದಾರೆ. ತುಂಬಿದ್ದ 10 ಅಡಿಯಷ್ಟು ಹೂಳನ್ನು 15 ದಿನಗಳಲ್ಲಿ ತೆಗೆದಿದ್ದಾರೆ. ಕೆರೆಯಲ್ಲಿ ಜಲದ ಒರತೆ ಕಾಣಿಸಿದ್ದು ಭಕ್ತರ ಉತ್ಸಾಹಕ್ಕೆ ಇನ್ನಷ್ಟು ಪುಷ್ಟಿ ನೀಡಿದೆ.

ಈ ಕೆರೆ ಮೊದಲು ಹೇಗಿತ್ತೋ ಹಾಗೆ ಅಭಿವೃದ್ಧಿ ಮಾಡಬೇಕು ಎಂಬುದು ಇಲ್ಲಿನ ಜನರ ಅಭಿಮತ. ಅದಕ್ಕಾಗಿ ಕೆರೆಗೆ ಕಟ್ಟೆ ಕಟ್ಟಲು ಮುಂದಾಗಿದ್ದಾರೆ ಎನ್ನುತ್ತಾರೆ ಸ್ಥಳೀಯ ಪ್ರಮುಖರಾದ ಅನಂತ ಪೈ ಹಾಗೂ ಎಂ.ಎನ್‌. ಹೆಗಡೆ ಖೂರ್ಸೆ ಇತರರು.

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.