ಬೆಳೆ ಸಾಲ ಭರಣಕ್ಕೆ ಮೇ 31 ಕಡೇ ದಿನ: ಹೆಬ್ಟಾರ್
Team Udayavani, May 20, 2020, 5:10 PM IST
ಶಿರಸಿ: ಬೆಳೆ ಸಾಲ ಶೂನ್ಯ ಬಡ್ಡಿಯಲ್ಲಿ ಸಿಗಬೇಕಾದರೆ ಭರಣಕ್ಕೆ ಮೇ 31ಕ್ಕೆ ಕಡೇ ದಿನವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಟಾರ್ ಹೇಳಿದರು.
ತಾಲೂಕಿನ ಹಲಗದ್ದೆ, ಭಾಶಿಯ ಗ್ರಾ.ಪಂ. ನಿರ್ಮಾಣ ಮಾಡಿದ 40 ಲಕ್ಷ ರೂ. ಮೊತ್ತದ ಕಟ್ಟಡ ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು. ಜೂನ್ 30ರೊಳಗೆ ತುಂಬಿದರೆ ರಾಜ್ಯ ಸರಕಾರದ ಶೇ. 6ರ ಬಡ್ಡಿ ಸಹಾಯ ಮಾತ್ರ ಸಿಗಲಿದೆ. ಉಳಿದ ಬಡ್ಡಿಯೂ ಲಭ್ಯವಾಗಿ ರೈತರಿಗೆ ಶೂನ್ಯ ಬಡ್ಡಿ ಸಿಗಬೇಕಾದರೆ ಮೇ 31ರೊಳಗೇ ಭರಣ ಮಾಡಿಕೊಳ್ಳಬೇಕಿದೆ ಎಂದರು.
ಜೂ. 10-12ರೊಳಗೆ ಸಾಲ ಭರಣ ಮಾಡಿದ ಎಲ್ಲ ರೈತರಿಗೂ ಮರಳಿ ಸಾಲ ನೀಡಲಾಗುತ್ತದೆ. ಯಾವುದೇ ಕಾರಣಕ್ಕೂ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದ ಅವರು, ಕೆಡಿಸಿಸಿ ಬ್ಯಾಂಕ್ ವ್ಯವಸ್ಥಾಪಕರಿಗೂ ಈ ಕುರಿತು ಸೂಚನೆ ನೀಡಲಾಗಿದೆ ಎಂದೂ ಹೇಳಿದರು.
ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಿಂದ ಜನರು ಕರ್ನಾಟಕಕ್ಕೆ ಬರಲು ಸದ್ಯಕ್ಕೆ ಅನುಮತಿ ನೀಡಲಾಗುತ್ತಿಲ್ಲ. ಅಲ್ಲಿಂದ ಬಂದವರಿಂದೇ ಕೋವಿಡ್ ಹೆಚ್ಚಾಗಿದೆ. ಆದರೆ, ರಾಜ್ಯದ ಒಳಗಿನ ಪ್ರವಾಸಕ್ಕೆ ಯಾವ ಪಾಸ್ಗಳ ಅಗತ್ಯವಿಲ್ಲ ಎಂದರು. ಜಿಲ್ಲೆಯಲ್ಲೂ ಬೆಳಗ್ಗೆ 7ರಿಂದ ಸಂಜೆ 6ರ ವರೆಗೆ ಮಾತ್ರ ಅಂಗಡಿ ಮುಂಗಟ್ಟು ತೆರೆಯಲು ಅನುಮತಿ ನೀಡಲಾಗಿದೆ. ಬುಧವಾರದಿಂದ ಇದು ಜಿಲ್ಲೆಯಲ್ಲೂ ಜಾರಿಗೆ ಬರಲಿದೆ ಎಂದರು.
ಜಿ.ಪಂ. ಸದಸ್ಯೆ ರೂಪಾ ನಾಯ್ಕ, ತಾ.ಪಂ. ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಉಪಾಧ್ಯಕ್ಷ ಚಂದ್ರು ಎಸಳೆ, ದ್ಯಾಮಣ್ಣ ದೊಡ್ಮನಿ, ನರಸಿಂಹ ಬಕ್ಕಳ ಇತರರು ಇದ್ದರು.
ಶಾಲೆ ಪುನರಾರಂಭಕ್ಕೆ ಇನ್ನೂ ಎರಡು ತಿಂಗಳು ವಿಳಂಬ ಆಗಬಹುದು. ಒಂದು ವರ್ಷದ ಶಿಕ್ಷಣ ಹೋದರೂ ಒಂದು ಮಗುವನ್ನು ಕಳೆದುಕೊಳ್ಳಲು ಸಿದ್ಧರಿಲ್ಲ. ಪರಿಸ್ಥಿತಿ ತಿಳಿಯಾದ ಮೇಲೆ ಶಾಲೆಗಳ ಪುನರಾರಂಭ ನಿರ್ಣಯ ತೆಗೆದುಕೊಳ್ಳುತ್ತೇವೆ. –ಶಿವರಾಮ ಹೆಬ್ಟಾರ್, ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ