‘ನಾನೂ ಮೂಲ ಬಿಜೆಪಿಗನೇ’;ಎಲ್ಲೂ ಏನೂ ಸಮಸ್ಯೆಯಿಲ್ಲ: ಸಚಿವ ಹೆಬ್ಬಾರ್

ಮೂಲ ಬಿಜೆಪಿಗರು, ವಲಸಿಗರ ನಡುವೆ ಗೊಂದಲ: ಸರಿ ಮಾಡಲು ಪ್ರಯತ್ನ ಮಾಡುತ್ತೇವೆ

Team Udayavani, Nov 19, 2022, 3:41 PM IST

1-asdsadsad

ಶಿರಸಿ: ನಾನೂ ಮೂಲ ಬಿಜೆಪಿಗನೇ. ಎಲ್ಲೂ ಏನೂ ಸಮಸ್ಯೆ ಇಲ್ಲ. ಎಲ್ಲರೂ ಒಂದಾಗಿ ಬರಲಿರುವ ಚುನಾವಣೆ  ಎದುರಿಸುತ್ತೇವೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಪ್ರತಿಪಾದಿಸಿದರು.

ಶಿರಸಿ ಬಿಸಲಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು.ಯಲ್ಲಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಮೂಲ ಬಿಜೆಪಿಗರು, ವಲಸಿಗರ ನಡುವೆ ಗೊಂದಲ ಇದೆ.ಹೇಗೆ ನಿವಾರಿಸುತ್ತೀರಿ ಗೊಂದಲ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಹೆಬ್ಬಾರ್, ತಾನು ಮೂಲ ಬಿಜೆಪಿಗನೇ ಆಗಿರುವುದರಿಂದ ಮೂಲ ಬಿಜೆಪಿ ಹಾಗೂ ವಲಸೆ ಬಿಜೆಪಿಗ ಎಂಬ
ಯಾವುದೇ ಸಮಸ್ಯೆ ತನಗಿಲ್ಲ ಎಂದು ಪುನರುಚ್ಚರಿಸಿದರು.

ಹಿಂದೆ ಬಿಜೆಪಿ ಜಿಲ್ಲಾ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ವೈಯಕ್ತಿಕ ಹಿತಾಸಕ್ತಿ ಇರುವ ಕಾರ್ಯಕರ್ತರನ್ನು ಸರಿ ಮಾಡಲು ಆಗುತ್ತದೆ ಎಂದು ಹೇಳಲಾಗದು. ಆದರೆ ಸರಿ ಮಾಡಲು ಪ್ರಯತ್ನ ಮಾಡುತ್ತೇವೆ. ರಾಜಕೀಯ ಕಾರಣಕ್ಕೆ ವಿರೋಧಿಸುವವರನ್ನು ಸರಿ ಮಾಡಲು ಸಾಧ್ಯ ಇಲ್ಲ. ಸಂಘಟನೆ ಆಧಾರದ ಮೇಲೆ ತಪ್ಪಿದ್ದರೆ ವಿರೋಧಿಸುವವರನ್ನು ಪ್ರೀತಿಯಿಂದ ಸ್ವಾಗತಿಸುತ್ತೇವೆ ಎಂದ ಅವರು, ತಪ್ಪಿದ್ದಂತೆ ಪ್ರಾಂಜಲ ಮನಸಿನಿಂದ ತಿದ್ದುಕೊಳ್ಳಲು ಸಿದ್ಧನಿದ್ದೇನೆ. ವಯಕ್ತಿಕ ಆಧಾರದಲ್ಲಿ ವಿರೋಧಿಸುವವರಿಗೆ ದೇವರು ಒಳ್ಳೆದು ಮಾಡಲಿ ಎಂದರು.

ಪಕ್ಷದೊಳಗಿದ್ದವರಿಗೆ ಹಾಗೂ ಹೊರಗಿನವರು ಯಾರೇ ಸಾಹಸ ಮಾಡಲಿ ಅಂತಿಮವಾಗಿ ಮೇಲೆ ಇರುವ ದೇವರು ಹಾಗೂ ನಮ್ಮ ಜನ ನೋಡುವವರಿದ್ದಾರೆ ಎಂದರು.

ಜಿ.ಪಂ. ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಎದುರಿಸಲು ನಾವು ಸಿದ್ದರಿದ್ದೇವೆ. ಚುನಾವಣೆ ಎದುರಿಸುವ ಶಕ್ತಿ ಪಕ್ಷಕ್ಕೆ ಹಾಗು ಸರಕಾರಕ್ಕೆ ಇದೆ. ನಮಗೆ ಯಾವುದೇ ಆತಂಕವಿಲ್ಲ. ಆದರೆ ಗೊತ್ತಿಲ್ಲದೇ ಮಾಡಿದ ಸೀಟು ಹಂಚಿಕೆ. ಮೀಸಲಾತಿಯನ್ನು ಇದನ್ನು ಒಪ್ಪಿಕೊಳ್ಳಲು ಸರಕಾರ ಸಿದ್ದವಿಲ್ಲ ಎಂದ ಹೆಬ್ಬಾರ್, ವಿರೋಧಿ ಪಕ್ಷವಾಗಿ ಆರೋಪಿಸುವದು ಅವರ ಕರ್ತವ್ಯದ ಭಾಗ. ಆಡಳಿತ ಪಕ್ಷ ಎಲ್ಲ ಲೋಪದೋಷಗಳು ಆಗಿದ್ದನ್ನು ಹೇಳಿದರೆ ತಿದ್ದಿಕೊಳ್ಳಬಹುದು. ನಿರಾಧಾರ ಸಹಿಸಲು ಸಾಧ್ಯ ಇಲ್ಲ. ಜಿಲ್ಲಾ ಉಸ್ತುವಾರಿ ಹಂಚಿಕೆ ಪಕ್ಷದ ವರಿಷ್ಠರ ತೀರ್ಮಾನ ಎಂದು ಹೇಳಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.