ಕರ್ನಾಟಕ ವಿವಿ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಡಾ. ಟಿ.ಎಸ್. ಹಳೆಮನೆ
Team Udayavani, Aug 4, 2022, 3:43 PM IST
ಶಿರಸಿ: ಜಿಲ್ಲೆಯ ಪ್ರಸಿದ್ದ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಇಲ್ಲಿನ ಎಂಇಎಸ್ ನ ಎಂ ಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಪ್ರಾಚಾರ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಟಿ.ಎಸ್. ಹಳೆಮನೆ ಅವರನ್ನು ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ನೇಮಿಸಲಾಗಿದೆ.
ಹಳೆಮನೆ ಅವರ ಸೇವಾ ಹಿರಿತನ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡುತ್ತಿರುವ ಕೊಡುಗೆಯನ್ನು ಪರಿಗಣಿಸಿ ಕರ್ನಾಟಕ ವಿಶ್ವವಿದ್ಯಾಲಯದ ಶಿಪಾರಸ್ಸಿನ ಮೇರೆಗೆ ರಾಜ್ಯಪಾಲ ಥಾವರಚಂದ ಗೆಹಲೋಟ್ ಆದೇಶ ಮಾಡಿದ್ದಾರೆ. ಮುಂದಿನ ಎರಡು ವರ್ಷ ಅವರ ಅಧಿಕಾರಾವಧಿ ಇರಲಿದೆ.
ಸುಮಾರು ಮೂರು ದಶಕಗಳಿಗಿಂತ ಹೆಚ್ಚು ಕಾಲ ಶೈಕ್ಷಣಿಕ ರಂಗದಲ್ಲಿ ಸೇವೆ ಸಲ್ಲಿಸುತ್ತಿರುವ ಡಾ. ಹಳೆಮನೆ ಅವರು ಯಲ್ಲಾಪುರ ತಾಲೂಕಿನ ಬಳಗಾರ ಗ್ರಾಮದವರು. ಅಲ್ಲಿಯೇ ಪ್ರಾಥಮಿಕ ಶಿಕ್ಷಣ ಪೂರೈಸಿದವರು.
ಯಲ್ಲಾಪುರದ ವೈ ಟಿ ಎಸ್ ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರೌಢ ಮತ್ತು ಪಿಯುಸಿ ಶಿಕ್ಷಣ ಪಡೆದರು. ಅಂಕೋಲಾದ ಗೋಖಲೆ ಸೆಂಟಿನರಿ ಮಹಾವಿದ್ಯಾಲಯದಲ್ಲಿ ಪದವಿ ಹಾಗೂ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು, ಪಿ ಜಿ ಡಿಪ್ಲೊಮಾ ಇನ್ ಎಪಿಗ್ರಾಫಿ ಮತ್ತು ಡಿಪ್ಲೊಮಾ ಇನ್ ಹ್ಯುಮನ್ ರೈಟ್ಸ್ ಪದವಿಗಳನ್ನು ಪಡೆದರು.ನಂತರದಲ್ಲಿ ಸೇವೆಗೆ ಸೇರಿದ ಇವರು ’ರಾಮಚಂದ್ರಾಪುರ ಮಠ ಇಟ್ಸ್ ಹಿಷ್ಟರಿ ಅಂಡ್ ಎಂಟಿಕ್ಸಿಟಿಸ್’ ಎಂಬ ಮಹಾಪ್ರಬಂಧ ಮಂಡಿಸಿ ಕ ವಿವಿ ಧಾರವಾಡ ದಿಂದ ಡಾಕ್ಟರೇಟ್ ಪದವಿ ಪಡೆದವರು.
ಉತ್ತರ ಕನ್ನಡ ಜಿಲ್ಲಾ ಪರಂಪರಾ ಕೂಟದ ಸಂಚಾಲಕರೂ ಹಾಗೂ ಪ್ರಾಚ್ಯವಸ್ತು ಸಂಗ್ರಹಕರೂ ಆಗಿರುವ ಡಾ. ಹಳೆಮನೆ ರಾಜ್ಯ ಮಟ್ಟದ ಕಾರ್ಯಾಗಾರಗಳನ್ನು ಯಶಸ್ವಿಯಾಗಿ ನಡೆಸಿ, ಸಂಪನ್ಮೂಲ ವ್ಯಕ್ತಿ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ ರಾಷ್ಟ್ರೀಯ ಯುವ ಸೇನಾದಳದ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರ ನೇಮಕದ ಕುರಿತು ಎಂ ಇ ಎಸ್ ಸಂಸ್ಥೆಯ ಅಧ್ಯಕ್ಷ ಜಿ.ಎಂ.ಹೆಗಡೆ ಮುಳಖಂಡ ಮತ್ತು ಪದಾಧಿಕಾರಿಗಳು, ಶಿಕ್ಷಕ ಶಿಕ್ಷಕೇತರ ಸಿಬಂದಿಗಳು ಹರ್ಷ ವ್ಯಕ್ತ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ