Gokarna ರಥೋತ್ಸವಕ್ಕೆ ಸಾಕ್ಷಿಯಾದ ಲಕ್ಷಾಂತರ ಜನರು
ರಥೋತ್ಸವಕ್ಕೆ ಮೆರಗು ನೀಡಿದ ವಿವಿಧ ವಾದ್ಯಗಳು
Team Udayavani, Mar 11, 2024, 6:22 PM IST
ಗೋಕರ್ಣ : ದಕ್ಷಿಣದ ಕಾಶಿ ಎಂದೆ ಖ್ಯಾತಿಯಾಗಿರುವ ಶ್ರೀ ಕ್ಷೇತ್ರ ಗೋಕರ್ಣದಲ್ಲಿ ಮಹಾ ಶಿವರಾತ್ರಿಯ ನಿಮಿತ್ತ ಸೋಮವಾರ ದೊಡ್ಡ ರಥೋತ್ಸವ ನಡೆಯಿತು.
ಈ ರಥೋತ್ಸವದಲ್ಲಿ ನಾಡಿನ ನಾನಾ ಭಾಗಗಳಿಂದ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ವರ್ಷಕ್ಕೊಮ್ಮೆ ನಡೆಯುವ ಈ ರಥೋತ್ಸವವನ್ನು ವೀಕ್ಷಿಸುವುದಕ್ಕಾಗಿ ಲಕ್ಷಾಂತರ ಜನರು ರಸ್ತೆಯುದ್ದಕ್ಕೂ ಜನರ ದಟ್ಟಣೆ ಉಂಟಾಯಿತು.
ದೇವಸ್ಥಾನದ ಆಡಳಿತ ಮಂಡಳಿಯವರು, ಪೊಲೀಸ್ ಇಲಾಖೆ, ಸ್ಥಳೀಯ ಗ್ರಾಮ ಪಂಚಾಯಿತಿಯವರು ರಥೋತ್ಸವ ಸರಾಗವಾಗಿ ನಡೆಯುವಂತೆ ಸುವ್ಯವಸ್ಥೆಯನ್ನು ಕೈಗೊಂಡಿದ್ದರು. ಕೋಟಿತೀರ್ಥ ಹಾಗೂ ಪ್ರಮುಖ ಕಡಲು ತೀರಗಳಲ್ಲಿ ಜಾಗೃತಿಯ ಮಾಹಿತಿ ಫಲಕವನ್ನು ಹಾಕುವುದರ ಜತೆಗೆ, ಧ್ವನಿವರ್ಧಕಗಳನ್ನು ಕೂಡ ಅಳವಡಿಸಿ ಇಲ್ಲಿಯ ಅಪಾಯದ ಬಗ್ಗೆ ಸೂಚನೆಗಳನ್ನು ನೀಡುತ್ತಿದ್ದರು.
ನೆರೆದ ಭಕ್ತರು ತಮ್ಮ ಇಷ್ಟಗಳನ್ನು ಬಯಸಿ, ಅದನ್ನು ಪೂರೈಸುವಂತೆ ದೇವರಲ್ಲಿ ಪ್ರಾರ್ಥಿಸಿ ಬಾಳೆಹಣ್ಣು ಹಾಗೂ ಕಡಲೆಗಳನ್ನು ರಥಕ್ಕೆ ಎಸೆಯುವ ಮೂಲಕ ಧನ್ಯತೆ ಮೆರೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ