ರೈತರಿಗೆ ಗೌರವ ಕೊಡುವ ಕಾರ್ಯವಾಗಲಿ : ಸಚಿವ ಶಿವರಾಮ ಹೆಬ್ಬಾರ
Team Udayavani, Oct 19, 2021, 7:55 PM IST
ಶಿರಸಿ: ರೈತರು ಕೃಷಿಯಿಂದ ವಿಮುಖವಾದರೆ ದೇಶ ಸಫಲತೆ ಕಾಣಲು ಸಾಧ್ಯವೇ ಇಲ್ಲ. ಆದ್ದರಿಂದ ರೈತರಿಗೆ ಗೌರವ ಕೊಡುವ ಕಾರ್ಯವಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು.
ನಗರದ ರಾಘವೇಂದ್ರ ಮಠದ ಸಭಾಭವನದಲ್ಲಿ ಮನುವಿಕಾಸ ಸಂಸ್ಥೆ ಹಾಗೂ ಅಜೀಂ ಪ್ರೇಮಜೀ ಫೌಂಡೇಶನ್ ಸಹಯೋಗದಲ್ಲಿ ಸೋಮವಾರ ನಡೆದ ಕೆರೆ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ರೈತರು ಹಾಗೂ ದೇಶಕಾಯುವ ಸೈನಿಕರಿಗೆ ಸಮಾಜ ಗೌರವ ನೀಡಬೇಕು. ಇವರನ್ನು ನಾವು ಗೌರವಿಸದೇ ಇದ್ದರೆ ನಮಗೆ ಬದುಕಲು ಸಾಧ್ಯವೇ ಇಲ್ಲ. ರೈತ ಸಂಪನ್ನನಾದರೆ ಮಾತ್ರ ನಾಡು ಸುಭಿಕ್ಷವಾಗಿರಲು ಸಾಧ್ಯ. ನಾಡು ಸುಭಿಕ್ಷವಾಗಿರಬೇಕೆಂದರೆ ರೈತರು ಹಾಗೂ ನೀರಿನ ಮೂಲಗಳು ಸಂಪದ್ಭರಿತವಾಗಿರಬೇಕು. ರೈತರ ಹೊಲಗಳಿಗೆ ನೀರುಣಿಸಲು ಕೆರೆಗಳ ಹೂಳೆತ್ತುವುದು ತುಂಬಾ ಮುಖ್ಯವಾಗಿದೆ ಎಂದರು.
ಈಗಾಗಲೇ ಬೇಡ್ತಿ ನೀರಿನ ಯೋಜನೆಯ ಮೂರನೇ ಹಂತದ ಕಾರ್ಯ ಮುಂದುವರೆದಿದೆ. ಸರಕಾರ ಸಾಕಷ್ಟು ನೀರಿನ ಯೋಜನೆಗಳ ಬಗ್ಗೆ ಕಾರ್ಯ ನಿರ್ವಹಿಸುತ್ತಿದ್ದು ಮನುವಿಕಾಸದಂತ ಸಂಸ್ಥೆ ಕೆರೆ ಹೂಳೆತ್ತುವ ಮೂಲಕ ಪೂರಕ ಕಾರ್ಯ ನಿರ್ವಹಿಸುತ್ತಿದೆ. ಸಂಸ್ಥೆಯ ಒಳ್ಳೆಯ ಕಾರ್ಯಕ್ಕೆ ಜಿಲ್ಲಾಡಳಿತ ಸಂಪೂರ್ಣ ಬೆಂಬಲ ನೀಡಲಿದೆ ಎಂದರು.
ಮನುವಿಕಾಸ ಸಂಸ್ಥೆ ನಿರ್ದೇಶಕ ಗಣಪತಿ ಭಟ್ಟ ಪ್ರಾಸ್ತಾವಿಕ ಮಾತನಾಡಿ, ಸಂಸ್ಥೆ ಈಗಾಗಲೆ 149 ದೊಡ್ಡ ಕೆರೆ ಹೂಳೆತ್ತಿದ್ದು, ಮುಂದಿನ ದಿನಗಳಲ್ಲಿ ಸಾವಿರ ಕೆರೆ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ. 35 ಸಾವಿರಕ್ಕೂ ಅಧಿಕ ಮಹಿಳೆಯರಿಗೆ ಉದ್ಯೋಗಾವಕಾಶ, 30 ಸಾವಿರಕ್ಕೂ ಅಧಿಕ ಕೆರೆಗಳ ಪುನಶ್ಚೇತನ ಕಾರ್ಯ ನಡೆದಿದೆ ಎಂದು ವಿವರಿಸಿದರು.
ಸಂಸ್ಥೆ ಆಡಳಿತ ಮಂಡಳಿ ಸದಸ್ಯ ಪ್ರಭಾಕರ ಭಟ್ಟ ಅಧ್ಯಕ್ಷತೆ ವಹಿಸಿದ್ದರು. ಡಿವೈಎಸ್ಪಿ ರವಿ ನಾಯ್ಕ, ತಾಪಂ ಇಒ ಎಫ್.ಜಿ. ಚಿನ್ನಣ್ಣನವರ್, ತಾಲೂಕು ರೈತ ಸಂಘದ ಅಧ್ಯಕ್ಷ ಮರಿಗೌಡ ಪಾಟೀಲ್, ರೋಟರಿ ಕ್ಲಬ್ ಅಧ್ಯಕ್ಷ ಪಾಂಡುರಂಗ ಪೈ, ಪ್ರಮುಖರಾದ ಜಯಶೀಲ ಗೌಡ, ಬಿ.ಕೆ. ಕೆಂಪರಾಜ, ಎಸ್.ಎಂ. ಕಮನಳ್ಳಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ