ನೆರೆ ಪೀಡಿತ ಪ್ರದೇಶಕ್ಕೆ ಸಚಿವರ ಭೇಟಿ


Team Udayavani, Aug 8, 2020, 2:59 PM IST

ನೆರೆ ಪೀಡಿತ ಪ್ರದೇಶಕ್ಕೆ ಸಚಿವರ ಭೇಟಿ

ಹೊನ್ನಾವರ: ರಾಜ್ಯದ ಕಂದಾಯ ಸಚಿವ ಆರ್‌. ಅಶೋಕ ತಾಲೂಕಿನ ನೆರೆ ಪೀಡಿತ ಪ್ರದೇಶಗಳಾದ ಗುಂಡಬಾಳಾ, ಹೊಳೆಸಾಲಿನ, ಚಿಕ್ಕನಕೋಡ ಮತ್ತು ಹಡಿನಬಾಳ ಭಾಗಕ್ಕೆ ಭೇಟಿ ನೀಡಿ ನಿರಾಶ್ರಿತರ ಸಮಸ್ಯೆ ಆಲಿಸಿದರು.

ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ಸಚಿವರು ಮೊದಲು ಭಟ್ಕಳಕ್ಕೆ ಭೇಟಿ ನೀಡಿ ಅಲ್ಲಿಂದ ಮಧ್ಯಾಹ್ನ ಹೊನ್ನಾವರಕ್ಕೆ ಆಗಮಿಸಿ ಚಿಕ್ಕನಕೋಡದಲ್ಲಿರುವ ಕಾಳಜಿ ಕೇಂದ್ರ ಹಾಗೂ ಹಡಿನಬಾಳದ ನದಿ ತೀರದಲ್ಲಿರುವ ಮನೆಗೆ ಭೇಟಿ ನೀಡಿದರು. ಸಚಿವರು ಕಾಳಜಿ ಕೇಂದ್ರದಲ್ಲಿದ್ದ ಸಂತ್ರಸ್ತರ ಸಮಸ್ಯೆ ವಿಚಾರಿಸಿದರು. ಕಳೆದ 30 ವರ್ಷಗಳಿಂದ ಮಳೆಗಾಲದಲ್ಲಿ ಎದುರಾಗುವ ಪ್ರವಾಹದ ಹೊಡೆತ ತಾಳಿಕೊಂಡು ಬಂದಿದ್ದೇವೆ. ನಮಗೆ ತಾತ್ಕಾಲಿಕ ಪರಿಹಾರವನ್ನಾಗಿ ಏನನ್ನೂ ಕೊಡುವುದು ಬೇಡ. ಎತ್ತರದ ಜಾಗದಲ್ಲಿ ಮನೆ ಕಟ್ಟಿಕೊಂಡು ವಸತಿಗೆ ಅವಕಾಶಮಾಡಿಕೊಟ್ಟರೆ ಸಾಕು ಎಂದರು ಸಂತ್ರಸ್ತರು.

ಗ್ರಾಮದಲ್ಲಿ ಮೂರು ಎಕರೆ ಕಂದಾಯ ಭೂಮಿ ಇದೆ. ಅದರಲ್ಲಿಯೇ ಮನೆ ಕಟ್ಟಿಕೊಳ್ಳುವುದಕ್ಕೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿದ್ದೇನೆ ಎಂದು ಸ್ಥಳೀಯ ಶಾಸಕರು ತಿಳಿಸಿದಾಗ, ಜನರ ಬೇಡಿಕೆಗೆ ಸ್ಥಳದಲ್ಲಿಯೇ ಒಪ್ಪಿಗೆ ಸೂಚಿಸಿದರು. ನಂತರ ಮಾತನಾಡಿದ ಸಚಿವರು, ಜಿಲ್ಲೆಯ ನೆರೆ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿದ್ದಾರೆ. ಈ ಭಾಗದ ಬೇಡಿಕೆಯಂತೆ 3 ಎಕರೆ ಜಾಗದ ಬಗ್ಗೆ ಸೂಕ್ತ ದಾಖಲೆ ಒದಗಿಸಿದಲ್ಲಿ ಅವರಿಗೆ ಮನೆ ನಿರ್ಮಾಣ ಮಾಡಲು ವ್ಯವಸ್ಥೆ ಕಲ್ಪಿಸಲಾಗುವುದು. ಜಿಲ್ಲೆಯಲ್ಲಿ ನಿರಾಶ್ರಿತರ ಕ್ರೇಂದ್ರ ನಿರ್ಮಾಣಕ್ಕೂ ಹಣ ಬಿಡುಗಡೆ ಮಾಡಿದ್ದು, ಸೂಕ್ತ ಸ್ಥಳವನ್ನು ಅಧಿಕಾರಿಗಳು ಗುರುತಿಸಬೇಕಿದೆ. ಮನೆಗೆ ಹಾನಿಯಾದಲ್ಲಿ ಕೂಡಲೇ ಪರಿಹಾರ ಒದಗಿಸಲು ಸೂಕ್ತ ಅನುದಾನ ಜಿಲ್ಲಾಡಳಿತದ ಬಳಿ ಇರುವುದರಿಂದ ಪರಿಹಾರಕ್ಕೆ ವಿಳಂಬವಿಲ್ಲ. ಕಳೆದ ಬಾರಿಗಿಂತ ಮೂರು ಪೆಟ್ಟು ಹೆಚ್ಚು ಅನುದಾನ ಕೇಂದ್ರ ನೀಡಲು ಸಿದ್ಧವಿದೆ. ಸರ್ಕಾರದ ಬಳಿ ಹಣವಿಲ್ಲ ಎನ್ನುವುದು ಕೇವಲ ಆಧಾರರಹಿತ ಆರೋಪ ಎಂದರು. ಸಚಿವ ಶಿವರಾಮ ಹೆಬ್ಟಾರ ಮಾತನಾಡಿ, ಈ ಭಾಗದ ಹಲವು ವರ್ಷದ ಬೇಡಿಕೆಯಾದ ಬದಲಿ ವಸತಿ ವ್ಯವಸ್ಥೆ ಕಲ್ಪಿಸಲು ಸಚಿವರು ಒಪ್ಪಿಗೆ ಸೂಚಿಸಿದ್ದಾರೆ. ಇನ್ನುಳಿದ ತಾಲೂಕಿನ ಸಮಸ್ಯೆಯನ್ನು ಕೂಡಾ ಹಂತಹಂತವಾಗಿ ಶಾಶ್ವತ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಭರವಸೆ ನೀಡಿದರು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ವಾಪಸ್ಸಾಗುತ್ತಿರುವ ವಾಹನ ಸವಾರರು

Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.