ಕೈ ಬೆಂಬಲದಿಂದ ಬಿಜೆಪಿಯ ಜಯಾ ಆಯ್ಕೆ
ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಯ್ಕೆಗೆ ರೋಚಕ ತಿರುವು
Team Udayavani, Mar 4, 2021, 6:46 PM IST
ಅಂಕೋಲಾ: ಇಲ್ಲಿಯ ಪುರಸಭೆ ಸ್ಥಾಯಿ ಸಮಿತಿ ಆಯ್ಕೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹೈಡ್ರಾಮಾ ನಡೆದರು ಯಾವುದೇ ಸಫಲವಾಗದೆ ಕೊನೆಗೆ ಕಾಂಗ್ರೆಸ್ನ 5 ಸದಸ್ಯರು ಬಿಜೆಪಿ ಅಭ್ಯರ್ಥಿಗೆ ಬೆಂಬಲಿಸುವ ಮೂಲಕ ಬಿಜೆಪಿಯ ಜಯಾ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿ ರೋಚಕ ತೀರುವು ಕೊಟ್ಟಂತಾಗಿದೆ.
ಪ್ರಸ್ತುತ ಅಂಕೋಲಾ ಪುರಸಭೆ 23 ಸದಸ್ಯರನ್ನು ಹೊಂದಿದೆ. ಬಿಜೆಪಿಯು 10 ಸದಸ್ಯರೊಂದಿಗೆ ಕಾಂಗ್ರೆಸ್ಸಿನ 5 ಹಾಗೂ ಪಕ್ಷೇತರ ಅಭ್ಯರ್ಥಿಯೊಬ್ಬರು ಬೆಂಬಲ ಸೂಚಿಸಿದರು. ಕಾಂಗ್ರೆಸ್ಸಿನ 5 ಸದಸ್ಯರು ಸಭೆಯಿಂದ ನಿರ್ಗಮಿಸಿದ್ದರಿಂದ ಬಿಜೆಪಿಯ 4 ಹಾಗೂ ಕಾಂಗ್ರೆಸ್ಸಿನ ಒಬ್ಬರು ಒಟ್ಟು 5 ಸದಸ್ಯರ ಪ್ರತಿನಿಧಿತ್ವದ ಸ್ಥಾಯಿ ಸಮಿತಿ ರಚನೆ ಮಾಡಲಾಯಿತು. ಪುರಸಭಾಧ್ಯಕ್ಷೆ ಶಾಂತಲಾ ಅರುಣ ನಾಡಕರ್ಣಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪುರಸಭೆ ಉಪಾಧ್ಯಕ್ಷೆ ರೇಖಾ ಗಾಂವಕರ ಮುಖ್ಯಾಧಿಕಾರಿ ಬಿ.ಪ್ರಹ್ಲಾದ ಹಾಗೂ ಪುರಸಭೆಯ ಸದಸ್ಯರು ಉಪಸ್ಥಿತರಿದ್ದರು.
ಸ್ಥಾಯಿ ಸಮಿತಿ ರಚನೆ ಕುರಿತ ಕೆಲವು ದಿನಗಳ ಹಿಂದೆ ತೀವ್ರ ಗೊಂದಲದ ವಾತಾವರಣ ಸೃಷ್ಠಿಯಾಗಿ ಬಿಜೆಪಿ ಕಾಂಗ್ರೆಸ್ ನಡುವೆ ಕೋಲಾಹಲವೆದ್ದಿತ್ತು. ಆರೋಪ ಪ್ರತ್ಯಾರೋಪಗಳಿಂದಾಗಿ ಅಸಿಸ್ಟಂಟ್ ಕಮೀಶನರ್ ಅಜಿತ್ ಎಂ ಹಾಗೂ ತಹಶೀಲ್ದಾರ್ ಉದಯ ಕುಂಬಾರ ಮತ್ತು ಶಾಸಕಿ ರೂಪಾಲಿ ನಾಯ್ಕ ಮಧ್ಯಸ್ಥಿಕೆಯಲ್ಲಿ ಸಭೆ ಕೂಡ ನಡೆದಿತ್ತು. ಬಿಜೆಪಿಗೆ ಬೆಂಬಲಿಸಿದ ಪಕ್ಷೇತರ ಸದಸ್ಯರೊಬ್ಬರು ಸ್ಥಾಯಿ ಸಮಿತಿ ರಚಿಸುವಾಗ ಕೊನೆ ಕ್ಷಣದಲ್ಲಿ ಕಾಂಗ್ರೆಸ್ಸಿನ ಕಡೆ ವಾಲಿದ್ದರ ಪರಿಣಾಮ ಬಲಾಬಲದ ಕಾರಣ ನೀಡಿ ಆಕ್ಷೇಪ ವ್ಯಕ್ತಪಡಿಸಿ ಸಭಾತ್ಯಾಗ ಮಾಡಿ ಅಹೋರಾತ್ರಿ ಪ್ರತಿಭಟನೆಯನ್ನೂ ಮಾಡಿದ್ದರು. ಆದರೆ ಇಂದಿನ ಸಭೆಯಲ್ಲಿ ಕಾಂಗ್ರೆಸ್ಸಿನ 5 ಸದಸ್ಯರು ಹಾಗೂ ಓರ್ವ ಪಕ್ಷೇತರ ಸದಸ್ಯರು ಬೆಂಬಲಿಸುವುದರೊಂದಿಗೆ ಇಡೀ ಪ್ರಕರಣ ಸುಖಾಂತ್ಯ ಕಂಡಿದೆ.
ಶಾಸಕಿ ಅಭಿನಂದನೆ: ಆಯ್ಕೆಯ ಬಳಿಕ ಶಾಸಕಿ ರೂಪಾಲಿ ನಾಯ್ಕ ಆಗಮಿಸಿ ಸ್ಥಾಯಿ ಸಮಿತಿ ನೂತನ ಅಧ್ಯಕ್ಷೆ ಜಯಾ ನಾಯ್ಕರಿಗೆ ಅಭಿನಂದಿಸಿದರು. ಮತ್ತು ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲಾ ಸದಸ್ಯರಿಗು ಅಭಿನಂದಿಸಿದರು. ನಂತರ ಮಾತನಾಡಿ ಮುಂದಿನ ದಿನದಲ್ಲಿ ಎಲ್ಲಾ ಸದಸ್ಯರು ಪಕ್ಷಭೇದ ಮರೆತು ಪುರಸಭೆ ಎಲ್ಲಾ ವಾರ್ಡ್ಗಳ ಅಭಿವೃದ್ಧಿಗೆ ಕೈ ಜೋಡಿಸೋಣ. ಅಂಕೋಲಾ ಪುರಸಭೆ ಈ ರಾಜ್ಯದಲ್ಲಿ ಮಾದರಿಯಾಗಿಸೋಣ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Uttara Kannada BJP; ಅನಂತ್ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ