ಡೆಮೋ ರೈಲು ಓಡಿಸಲು ಸತೀಶ ಸೈಲ್‌ ಆಗ್ರಹ

ತಿಳುಮಾತಿ ಪ್ರವಾಸಿ ತಾಣ ಅಭಿವೃದ್ಧಿ ಪಡಿಸಲು ಸರಕಾರಕ್ಕೆ ಮನವಿ

Team Udayavani, Mar 5, 2021, 9:21 PM IST

satish sail

ಕಾರವಾರ: ಕಾರವಾರ-ಗೋವಾ ಮಧ್ಯೆ ಮೊದಲಿನಂತೆ ಡೆಮೋ ರೈಲು ಓಡಿಸಿ ಎಂದು ಮಾಜಿ ಶಾಸಕ ಸತೀಶ ಸೈಲ್‌ ಕೊಂಕಣ ರೈಲ್ವೆಯನ್ನು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಕಾರವಾರದಿಂದ ಪೆರ್ನಮ್‌ಗೆ ಡೆಮೋ ರೈಲು ಸಂಚಾರ ಪ್ರಾರಂಭಿಸಲು ಒತ್ತಾಯಿಸಿದರು. ಇದರಿಂದ ನೂರಾರು ಯುವಕರು ಕಾರವಾರದಿಂದ ಗೋವಾಕ್ಕೆ ಉದ್ಯೋಗ ಅರಸಿ ಹೋಗುತ್ತಿದ್ದು, ಪೆಟ್ರೋಲ್‌ ದರ ಹೆಚ್ಚಿದೆ. ಬೈಕ್‌ ಮೇಲೆ ಓಡಾಟ ವೆಚ್ಚದಾಯಕವಾಗಿದೆ. ಅನೇಕ ಯುವಕ-ಯುವತಿಯರು ಔಷಧಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ದಿನವೂ ಬಸ್‌ ಹಾಗೂ ಬೈಕ್‌ನಲ್ಲಿ ಸಂಚರಿಸುವುದು ಕಷ್ಟಕರವಾಗಿದೆ. ಕೋವಿಡ್‌ ಕಡಿಮೆಯಾದರೂ ರೈಲು ಸಂಚಾರ ಪ್ರಾರಂಭವಾಗಿಲ್ಲ. ಕಾರವಾರ ಗೋವಾಕ್ಕೆ ಡೆಮೋ ರೈಲು ಆರಂಭವಾಗಿಲ್ಲ. ಕಾರಣ ತಿಳಿಯುತ್ತಿಲ್ಲ ಎಂದರು.

ಕಾರವಾರಕ್ಕೆ ಮಾಜಾಳಿ, ಸದಾಶಿವಗಡ, ಕಡವಾಡ ಸೇರಿಸಿ ಮಹಾನಗರ ಪಾಲಿಕೆ ಮಾಡಬೇಕು. ಇದಕ್ಕೆ ನನ್ನ ಸ್ವಾಗತವಿದೆ. ಮಹಾನಗರ ಪಾಲಿಕೆಯಾದರೆ ಹೆಚ್ಚಿನ ಅನುದಾನ ಸಿಗುತ್ತದೆ. ಮಹಾನಗರ ಪಾಲಿಕೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಪಕ್ಕದ  500 ಮೀಟರ್‌ ಎಡಬಲದಲ್ಲಿ ಸಿಆರ್‌ ಝೇಡ್‌ ನಿಯಮ ಸಡಿಲಿಕೆಯಾಗಿ ಅಭಿವೃದ್ಧಿ ಹಾದಿ ತೆರೆದುಕೊಳ್ಳುತ್ತದೆ. ಮೇಲಾಗಿ ಸೀಬರ್ಡ್‌ ಯೋಜನೆಯೊಳಗೆ 10 ಸಾವಿರ ಮನೆಗಳ ನಿರ್ಮಾಣವಾಗುತ್ತಿವೆ. ಇದರಿಂದ ಕಾರವಾರ ನಗರ ಮತ್ತಷ್ಟು ಬೆಳೆಯಲಿದೆ. ಹಾಗಾಗಿ ಮಹಾನಗರ ಪಾಲಿಕೆಯಾಗಿ ಭವಿಷ್ಯದಲ್ಲಿ ಕಾರವಾರ ಬದಲಾಗಲಿದೆ ಎಂದರು.

ಅನುದಾನ ಸಿಕ್ಕ ಯೋಜನೆ ಜಾರಿ ಮಾಡಿ: ನನ್ನ ಕಾಲದ ಯೋಜನೆ ಅನುಷ್ಠಾನ ಮಾಡಿ. ನಾನು ಅಡ್ಡಿ ಮಾಡಲ್ಲ. ಹೊಸ ಯೋಜನೆಯೂ ತನ್ನಿ ಎಂದರು. ಸದಾಶಿವಗಡ ಸಾವರ ಪೈ ಗೋಮಾಳದಲ್ಲಿ ಕ್ರಿಕೆಟ್‌ ಕ್ರೀಡಾಂಗಣ ಅಭಿವೃದ್ಧಿ ಮಾಡಿ. ಅದರಿಂದ ಯಾರ ಮನೆಯೂ ಭೂಸ್ವಾಧೀನ ಆಗಲ್ಲ. ಕಾಂಗ್ರೆಸ್‌ ಸರ್ಕಾರ ಇದ್ದಾಗ ಕೆಎಸ್‌ಸಿಎ ( ಕರ್ನಾಟಕ ಸ್ಟೇಟ್‌ ಕ್ರಿಕೆಟ್‌  ಅಸೋಸಿಯೇಶನ್‌ ) 13 ಎಕರೆ ಜಾಗ ನೀಡಿದೆ. ಆದರೆ ಶಾಸಕರು ಕ್ರಿಕೆಟ್‌ ಕ್ರೀಡಾಂಗಣ ಅಭಿವೃದ್ಧಿಗೆ ಆಸಕ್ತಿ ವಹಿಸಿಲ್ಲ. ಅಲ್ಲಿನ ಜನರ (ಸಾವರ ಪೈ ಗೋಮಾಳ) ಮನೆಗಳು ವಶವಾಗಲಿವೆ ಎಂಬ ಸುಳ್ಳು ಸುದ್ದಿ ಹೋಗಲಾಡಿಸಲು ಪ್ರಯತ್ನಿಸಿಲ್ಲ ಎಂದು ಮಾಜಿ ಶಾಸಕ ಸತೀಶ್‌ ಸೈಲ್‌ ಹೇಳಿದರು.

ಕ್ರಿಕೆಟ್‌ ಕ್ರೀಡಾಂಗಣ ಬಂದರೆ ಈ ಭಾಗದ ಅಭಿವೃದ್ಧಿಗೆ ನೆರವಾಗಲಿದೆ ಎಂದರು. ತಿಳುಮಾತಿ ಅಭಿವೃದ್ಧಿ: ತಿಳುಮಾತಿ ಪ್ರವಾಸಿ ತಾಣ ಅಭಿವೃದ್ಧಿಗೆ ನಾನು ಶಾಸಕನಾಗಿದ್ದಾಗ ಹಣ ಬಿಡುಗಡೆಯಾಗಿ ಟೆಂಡರ್‌ ಆಗಿತ್ತು. ಆದರೆ ಟೆಂಡರ್‌ ಪಡೆದವರು ಕೆಲಸ ಬಿಟ್ಟರು. ಮರು ಟೆಂಡರ್‌ ಯಾಕೆ ಆಗಿಲ್ಲ ಎಂದು ಪಿಡಬುÉಡಿ ಇಲಾಖೆ ಹೇಳಬೇಕು. ಜಿಲ್ಲಾಧಿಕಾರಿಗಳ ಜೊತೆ ಈ ಸಂಬಂಧ ಚರ್ಚಿಸುವೆ ಎಂದು ಮಾಜಿ ಶಾಸಕರು ಹೇಳಿದರು. ಪ್ರವಾಸಿ ತಾಣ ವಿಶ್ವದ ಅಪರೂಪದ ಸ್ಥಳವಾಗಿ ತಿಳುಮಾತಿ ಹೊರಹೊಮ್ಮಲಿದೆ ಎಂದರು.

ಬರುವ ದಿನಗಳಲ್ಲಿ ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ಸಿಲೆಂಡರ್‌ ದರ ಹೆಚ್ಚಳ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ ಮಾಡಲಿದೆ ಎಂದರು .ಜಿಪಂ ಚುನಾವಣೆಗೆ ತಯಾರಿ ಮಾಡಿದ್ದೇವೆ. ಸ್ಪರ್ಧೆ ಖಚಿತ ಎಂದರು. ಪ್ರಭಾಕರ ಮಾಳೆÕàಕರ್‌, ಸಮೀರ ನಾಯ್ಕ, ಮುಂತಾದವರು ಇದ್ದರು.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.