Dandeli: ರಕ್ಷಣೆಗಾಗಿ ದ್ವಿಚಕ್ರ ವಾಹನದಲ್ಲಿ ಅವಿತಿದ್ದ ಮುಂಗುಸಿ ರಕ್ಷಿಸಿದ ಉರಗ ಪ್ರೇಮಿ
Team Udayavani, Dec 16, 2023, 3:24 PM IST
ದಾಂಡೇಲಿ: ಬಿಡಾಡಿ ನಾಯಿಗಳ ದಾಳಿಗೆ ಒಳಗಾಗಿ ಗಾಯಗೊಂಡು ರಕ್ಷಣೆಗಾಗಿ ರಸ್ತೆ ಬದಿ ನಿಲ್ಲಿಸಿಟ್ಟಿದ್ದ ದ್ವಿಚಕ್ರ ವಾಹನದೊಳಗಡೆ ಅವಿತು ಕೂತಿದ್ದ ಮುಂಗುಸಿಯೊಂದನ್ನು ಉರಗ ಪ್ರೇಮಿ ರಕ್ಷಣೆ ಮಾಡಿದ ಘಟನೆ ಡಿ. 16ರ ಶನಿವಾರ ನಡೆದಿದೆ.
ಬಿಡಾಡಿ ನಾಯಿಗಳ ದಾಳಿಗೊಳಗಾಗಿ ಗಾಯಗೊಂಡು ಓಡಿ ಬಂದ ಮುಂಗುಸಿ ನಗರದ ಜೆ.ಎನ್.ರಸ್ತೆಯ ಶಾ ಬಿಲ್ಡಿಂಗ್ ಮುಂಭಾಗದಲ್ಲಿಟ್ಟಿದ್ದ ದ್ವಿಚಕ್ರ ವಾಹನದೊಳಗಡೆ ಅವಿತು ಕೂತಿತ್ತು.
ಗಾಯಗೊಂಡು ಜೀವ ರಕ್ಷಣೆಗಾಗಿ ದ್ವಿಚಕ್ರ ವಾಹನದೊಳಗಡೆ ಮುಂಗುಸಿ ಅವಿತು ಕೂತಿರುವುದನ್ನು ಗಮನಿಸಿದ ಪತ್ರಿಕಾ ವಿತರಕ ರಿಯಾಜ್ ನವಲಗುಂದ ಮುಂಗುಸಿಯನ್ನು ರಕ್ಷಣೆ ಮಾಡಬೇಕಾದ ನಿಟ್ಟಿನಲ್ಲಿ ಉರಗ ಪ್ರೇಮಿ ರಜಾಕ್ ಶಾ ಅವರಿಗೆ ಕರೆ ಮಾಡಿ ಸ್ಥಳಕ್ಕೆ ಕರೆಸಿಕೊಂಡರು.
ತಕ್ಷಣವೇ ಸ್ಥಳಕ್ಕೆ ಬಂದ ಉರಗ ಪ್ರೇಮಿ ರಜಾಕ್ ಶಾ ಸುರಕ್ಷಿತವಾಗಿ ಮುಂಗುಸಿಯನ್ನು ದ್ವಿಚಕ್ರ ವಾಹನದಿಂದ ಹೊರತೆಗೆದರು. ಗಂಭೀರ ಗಾಯಗೊಂಡಿದ್ದ ಅದನ್ನು ಪಶುವೈದ್ಯ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಿ, ನಂತರ ಅರಣ್ಯ ಇಲಾಖೆಯ ಪಶು ಆಸ್ಪತ್ರೆಗೆ ಹಸ್ತಾಂತರಿಸಿದರು.
ಒಟ್ಟಿನಲ್ಲಿ ರಿಯಾಜ್ ನವಲಗುಂದ ಅವರ ಸಮಯೋಚಿತ ನಿರ್ಧಾರ ಮತ್ತು ರಜಾಕ್ ಶಾ ಅವರ ತಡವರಿಯದ ಸ್ಪಂದನೆಯಿಂದ ಮುಂಗುಸಿಯೊಂದು ಬದುಕುಳಿಯುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ