ಶಿರಸಿ: ಮೊಗೇರ ಸಮುದಾಯಕ್ಕೆ ಪರಿಶಿಷ್ಟ ಜಾತಿ ಸೌಲಭ್ಯ ಮುಂದುವರಸಲು ಆಗ್ರಹ


Team Udayavani, Apr 6, 2022, 3:55 PM IST

ಶಿರಸಿ: ಮೊಗೇರ ಸಮುದಾಯಕ್ಕೆ ಪರಿಶಿಷ್ಟ ಜಾತಿ ಸೌಲಭ್ಯ ಮುಂದುವರಸಲು ಆಗ್ರಹ

ಶಿರಸಿ:  ಜಿಲ್ಲಾ ಮೊಗೇರ ಸಮುದಾಯಕ್ಕೆ ಅಸಂವಿಧಾನಿಕವಾಗಿ ತಡೆ ಹಿಡಿಯಲ್ಪಟ್ಟ ಪರಿಶಿಷ್ಟ ಜಾತಿ ಸೌಲಭ್ಯವನ್ನು ವಿಳಂಬವಿಲ್ಲದೇ ಮುಂದುವರಿಸಬೇಕು ಎಂದು  ಜಿಲ್ಲಾ ಮೊಗೇರ ಸಂಘದ ಶಿರಸಿ ಘಟಕ ಸರಕಾರವನ್ನು ಆಗ್ರಹಿಸಿದೆ.

ಜಿಲ್ಲೆಯ ಮೊಗೇರ ಸಮುದಾಯದ ಪೂರ್ವಿಕರು ಅನೇಕ ವರ್ಷಗಳ ಹಿಂದೆ ಅವಿಭಜಿತ ಮೈಸೂರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಿಂದ ವಲಸೆ ಬಂದವರು. ವಲಸೆ ಬಂದ ಸ್ಥಳದಲ್ಲಿ ಅವರ ಮೂಲ ಉದ್ಯೋಗ ಬೇಟೆ ಆಡುವದು ದುಸ್ತರವಾದಾಗ ಜೀವನೋಪಾಯಕ್ಕೆ ಸ್ಥಳೀಯವಾಗಿ ಕರಾವಳಿ ಪ್ರದೇಶದಲ್ಲಿ ಲಭ್ಯವಿದ್ದ ಮೀನುಗಾರಿಕೆ ಹಾಗೂ ಕರಾವಳಿ ಹೊರತುಪಡಿಸಿದ ಭಾಗದಲ್ಲಿ ಕೃಷಿಯಲ್ಲಿ ಕೂಲಿಯಾಳಾಗಿ ಉದ್ಯೋಗ ನಡೆಸತೊಡಗಿದರು. ಈ ಸಮುದಾಯದ ಅಂದಿನ ಹೀನಸ್ಥಿತಿಯ ಆರ್ಥಿಕ ಮತ್ತು ಸಾಮಾಜಿಕ ಪರಿಸ್ಥಿತಿಯನ್ನು ಅವಲೋಕಿಸಿದ ಭಟ್ಕಳ ಕ್ಷೇತ್ರದ ಅಂದಿನ ಶಾಸಕ ಎಸ್.ಎಂ.ಯಾಹ್ಯಾ ಅವರ ಪ್ರಯತ್ನದಿಂದ ಕೇಂದ್ರ ಸರಕಾರವು ಮೊಗೇರ ಜಾತಿಗೆ ಪ್ರಾದೇಶಿಕ ನಿರ್ಬಂಧನೆಯನ್ನು ತೆಗೆದು ಪರಿಶಿಷ್ಟ ಜಾತಿ ಸೌಲಭ್ಯವನ್ನು ನೀಡಿತು ಎಂದು ಪ್ರಸ್ತಾಪಿಸಿದ್ದಾರೆ.

1978ರಿಂದ ಮೊಗೇರ ಜಾತಿಯು ಪರಿಶಿಷ್ಟ ಜಾತಿ ಸೌಲಭ್ಯವನ್ನು ಪಡೆಯಲು ಪ್ರಾರಂಭಿಸಿತು. ಅಲ್ಲಿಂದ ಸುಮಾರು 30 ವರ್ಷಗಳ ಕಾಲ ನಿರಾತಂಕವಾಗಿ ಪಡೆಯುತ್ತಿದ್ದ ಪರಿಶಿಷ್ಟ ಜಾತಿ ಸೌಲಭ್ಯವನ್ನು  ಜಿಲ್ಲೆಯ ಕೆಲ ಪಟ್ಟಭದ್ರ ಹಿತಾಸಕ್ತಿಗಳ  ನಡೆಯಿಂದ ಜಿಲ್ಲಾಡಳಿತ ಚಿನ್ನಪ್ಪ ರೆಡ್ಡಿ, ಎಚ್.ಕೆ.ಭಟ್ಟ ವರದಿಯಲ್ಲಿನ ಕೆಲ ಅಸಂವಿಧಾನಿಕ ಅಂಶಗಳ ಆಧಾರದಲ್ಲಿ ಸಂದೇಹ ವ್ಯಕ್ತಪಡಿಸಿ 2008ರಿಂದ ಮೊಗೇರರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರದ ನೀಡಿಕೆಯನ್ನು ತಡೆ ಹಿಡಿಯಿತು. ಈ ಕುರಿತು ಕಾನೂನು ಹೋರಾಟ ಕೂಡ ನಡೆದಿದೆ.  ಇವರಿಗೆ ಪರಿಶಿಷ್ಟ ಜಾತಿ ಸೌಲಭ್ಯವನ್ನು ನೀಡುವಂತೆ ಆದೇಶಿಸಿದೆ. ಈ ಮೂಲಕ ಸಮಸ್ಯೆಗೆ ತಾರ್ಕಿಕ ಅಂತ್ಯ ಕಂಡರೂ ಕೂಡ ಕರ್ನಾಟಕ ಸರಕಾರವು 2018 ರಲ್ಲಿ  ಗೊಂದಲಕಾಲಿಯಾದ ಸುತ್ತೋಲೆಯನ್ನು ನೀಡಿದ್ದರೂ ಅದನ್ನು 2019 ರಲ್ಲಿ ವಾಪಸ್ ಪಡೆದಿದೆ. ಆದಾಗ್ಯೂ ಕೂಡಾ ಉತ್ತರ ಕನ್ನಡ ಜಿಲ್ಲಾಡಳಿತವು ಉತ್ತರ ಕನ್ನಡ ಜಿಲ್ಲಾ ಮೊಗೇರ ಸಮುದಾಯಕ್ಕೆ ಪರಿಶಿಷ್ಟ ಜಾತಿ ಸೌಲಭ್ಯವನ್ನು ನೀಡುತ್ತಿಲ್ಲ ಎಂದು ಅಸಮಧಾನಿಸಲಾಯಿತು.

ಮೊಗೇರ ಜಾತಿಗೆ ತಡೆ ಹಿಡಿಯಲ್ಪಟ್ಟ ಪರಿಶಿಷ್ಟ ಜಾತಿ ಸೌಲಭ್ಯವನ್ನು ವಿಳಂಬವಿಲ್ಲದೇ ಮುಂದುವರಿಸಬೇಕು, ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ವಿಫಲಿಸುವ ಉತ್ತರ ಕನ್ನಡ ಜಿಲ್ಲೆಯ ತಂತ್ರಾಂಶದಲ್ಲಿ ಮೊಗೇರ ಜಾತಿಯನ್ನು ಪ್ರವರ್ಗ -1 ರಲ್ಲಿ ಕಡಿಮೆಗೊಳಿಸಬೇಕು, ಉದ್ಯೋಗ ಹಾಗು ಶಿಕ್ಷಣ ಆಕಾಂಕ್ಷಿಗಳ ತಡೆಹಿಡಿಯಲ್ಪಟ್ಟಿರುವ ಸಿಂಧುತ್ವ ಪ್ರಮಾಣ ಪತ್ರವನ್ನು ಬಿಳಂಬವಿಲ್ಲದೇ ನೀಡಬೇಕು, ಜಾತಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಸಮಾಜದವರ ವಿರುದ್ಧ ದಾಖಲಿಸಿದ ಕ್ರಿಮಿನಲ್

ಪ್ರಕರಣವನ್ನು ಹಿಂಪಡೆಯಬೇಕು, ಮೊಗೇರ ಜಾತಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರವನ್ನು ರದ್ದುಪಡಿಸಲು ನೀಡಿದ ಅದೇಶವನ್ನು ಹಿಂಪಡೆಯಬೇಕು  ಎಂದು ಆಗ್ರಹಿತು.

ಈ ವೇಳೆ ಮಾಜಿ ಶಾಸಕ ವಿವೇಕಾನಂದ ವೈದ್ಯ, ಸುಮಾ ಉಗ್ರಾಣಕರ, ರಾಜು ಉಗ್ರಾಣಕರ, ಮಂಜು ಮೊಗೇರ, ಶಶಿಕಲಾ ಜೈವಂತ, ನಾಗರಾಜ‌ ಮುರ್ಡೇಶ್ವರ ಇತರರು ಇದ್ದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.