ಭಟ್ಕಳ: ಅರೆಬೆತ್ತಲೆ ಮೆರವಣಿಗೆ, ಉರುಳು ಸೇವೆ ಮೂಲಕ ತೀವ್ರಗೊಂಡ ಮೊಗೇರ ಸಮಾಜದ ಪ್ರತಿಭಟನೆ
Team Udayavani, Apr 9, 2022, 12:11 PM IST
ಭಟ್ಕಳ: ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವುದನ್ನು ಮುಂದುವರಿಸುವಂತೆ ಆಗ್ರಹಿಸಿ ಇಲ್ಲಿನ ತಹಸೀಲ್ದಾರ್ ಕಚೇರಿಯ ಪಕ್ಕದಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಮೊಗೇರ ಸಮಾಜ 18ನೇ ದಿನವಾದ ಶನಿವಾರದಂದು ಅರೆಬೆತ್ತಲೆ ಮೆರವಣಿಗೆ, ಉರುಳು ಸೇವೆ ಮಾಡುವ ಮೂಲಕ ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದರು.
ಬೆಳಗ್ಗೆ ಇಲ್ಲಿನ ಆನಂದಾಶ್ರಮ ಕಾನ್ವೆಂಟ್ ಮೈದಾನದಲ್ಲಿ ಹೊರಟ ಅರೆಬೆತ್ತಲೆ ಮೆರವಣಿಗೆಯು ಶಂಶುದ್ಧೀನ್ ಸರ್ಕಲ್ ಮೂಲಕ ರಾಷ್ಟ್ರೀಯ ಹೆದ್ದಾರಿಯಾಗಿ ಧರಣಿ ಪ್ರದೇಶವನ್ನು ತಲುಪಿತು. ತಾಲೂಕು ಆಡಳಿತ ಸೌಧ ತಲುಪುತ್ತಲೇ ಹಲವು ಯುವಕರು ಉರುಳು ಸೇವೆ ಆರಂಭಿಸಿದರು.
ಇದನ್ನು ಸಮಾಜದ ಹಲವು ಮುಖಂಡರು ತಡೆಯುವಷ್ಟರಲ್ಲಿಯೇ ಸೀತಾರಾಮ ಮೊಗೇರ ಎನ್ನುವವರು ತಾವು ಮೊದಲೇ ತಮ್ಮೊಂದಿಗೆ ತಂದಿದ್ದ ಸೀಮೆ ಎಣ್ಣೆಯನ್ನು ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಪ್ರಯತ್ನಸಿದರು. ತಕ್ಷಣ ಅಲ್ಲಿದ್ದ ಇತರರು ಅವರನ್ನು ತಡೆದು ತಕ್ಷಣ ಬೆಂಕಿಪೊಟ್ಟಣವನ್ನು ಕಸಿದುಕೊಂಡರು. ಕೆಲಕಾಲ ತೀವ್ರ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು ಬಂದೋಬಸ್ತಿಗಾಗಿ ಬಂದಿದ್ದ ಪೊಲೀಸರೂ ಕೂಡಾ ಧಾವಿಸಿ ಆತನ ರಕ್ಷಣೆಗೆ ಮುಂದಾದರು. ಅಷ್ಟರಲ್ಲಾಗಲೇ ಸೀಮೆ ಎಣ್ಣೆ ಕಣ್ಣು, ಬಾಯಿಗೆ ಹೋಗಿ ಅಸ್ವಸ್ಥಗೊಂಡ ಅವರನ್ನು ತಕ್ಷಣ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.
ನಂತರ ಮೆರವಣಿಗೆಯಲ್ಲಿ ಬಂದ ಯುವಕರು, ಪುರುಷರು, ಮಹಿಳೆಯರು ಹಾಗೂ ಶಾಲಾ ವಿದ್ಯಾರ್ಥಿಗಳು ತಾಲೂಕು ಆಡಳಿತ ಸೌಧಕ್ಕೆ ಒಂದು ಪ್ರದಕ್ಷಿಣೆ ಬಂದು ನಂತರ ತಮ್ಮ ಧರಣಿ ಸ್ಥಳಕ್ಕೆ ತೆರಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮೊಗೇರ ಸಮಾಜದ ಅಧ್ಯಕ್ಷ ಅಣ್ಣಪ್ಪ ಮೊಗೇರ ನಾವು ಕಳೆದ 18 ದಿನಗಳಿಂದ ನೂರಾರು ಸಂಖ್ಯೆಯಲ್ಲಿ ಬಂದು ಪ್ರತಿಭಟನೆಯನ್ನು ನಡೆಸುತ್ತಿದ್ದರೂ ಸಹ ನಮ್ಮ ಬೇಡಿಕೆಗೆ ಸ್ಪಂದಿಸದ ಸರಕಾರದ ನಿಲುವು ಸರಿಯಲ್ಲ. ಪ್ರತಿ ದಿನವೂ ಕೂಡಾ ಪ್ರತಿಭಟನೆಯ ಕಾವು ಜಾಸ್ತಿಯಾಗುತ್ತಿದ್ದು ಸರಕಾರ ಕೂಡಲೇ ಕ್ರಮ ಕೈಗೊಂಡು ನಮ್ಮ ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬೆಳಕೆ ಭಾಸ್ಕರ ಮೊಗೇರ ಅವರು ಸರಕಾರದ ನಿಲುವನ್ನು ತರಾಟೆಗೆ ತೆಗೆದುಕೊಂಡರು. ಅಧಿಕಾರಿಗಳಿಗೆ ಉಚ್ಚ ನ್ಯಾಯಾಲಯ, ಸರ್ವೋಚ್ಚ ನ್ಯಾಯಾಲಯದ ಆದೇಶವೂ ಕೂಡಾ ಗೌಣವಾಗಿದೆ. ಅಧಿಕಾರಿಗಳೇ ಹೇಳಿದ್ದನ್ನು ಸರಕಾರ ಮಾಡುತ್ತದೆ. ನಮ್ಮ ತಾಳ್ಮೆಗೂ ಒಂದು ಮಿತಿ ಇದ್ದು ಯಾವುದೇ ಮುಂದಿನ ಅನಾಹುತಕ್ಕೆ ಸರಕಾರವೇ ಹೊಣೆಯಾಗಬೇಕಾಗುತ್ತದೆ. ಇನ್ನು ಮುಂದಿನ ದಿನಗಳಲ್ಲಿ ನಮ್ಮ ಹೋರಾಟ ತೀವ್ರವಾಗುತ್ತಿದ್ದು ಅದಕ್ಕೆ ಸರಕಾರ ಅವಕಾಶ ಕೊಡಬಾರದು ಎನ್ನುವುದು ನಮ್ಮ ಕೋರಿಕೆಯಾಗಿದೆ. ತಕ್ಷಣ ನಮ್ಮ ಮನವಿಯನ್ನು ಪರಿಗಣಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ಸರಕಾರ ನೀಡಲು ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.
ಇಂದಿನ ಅರೆಬೆತ್ತಲೆ ಮೆರವಣಿಗೆಯಲ್ಲಿ ತಾಲೂಕಿನ ವಿವಿಧ ಭಾಗಗಳಿಂದ ಬಂದಿದ್ದ ನೂರಾರು ಯುವಕರು ಭಾಗವಹಿಸಿದ್ದರೆ, ಮೆರವಣಿಗೆಯಲ್ಲಿ ಬೈಲೂರು, ಕೊಪ್ಪದಮಕ್ಕಿ, ಮಂಕಿ ಭಾಗದ ಪುರುಷರು, ಮಹಿಳೆಯರು ಮತ್ತು ಮಕ್ಕಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?
MUST WATCH
ಹೊಸ ಸೇರ್ಪಡೆ
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ