ಸಾಹಿತ್ಯಕ್ಕೂ ಸಮಾಜಕ್ಕೂ ನಿಕಟ ಸಂಬಂಧ


Team Udayavani, Feb 3, 2019, 10:33 AM IST

3-february-18.jpg

ಮುಂಡಗೋಡ: ಸಾಹಿತ್ಯಕ್ಕೂ ಸಮಾಜಕ್ಕೂ ನಿಕಟವಾದ ಸಂಬಂಧಗಳಿವೆ. ಬಹಳಷ್ಟು ಸಾಹಿತ್ಯ ಪರಕರಗಳಲ್ಲಿ ಸಮಾಜದ ಆಗು ಹೋಗುಗಳನ್ನೇ ವಸ್ತು ವಿಷಯವನ್ನಾಗಿ ಆರಿಸಿ ಬರೆಯಲಾಗುತ್ತದೆ. ಆದ್ದರಿಂದ ಇಂದು ಸಮಾಜಮುಖೀ ಸಾಹಿತ್ಯದ ಅವಶ್ಯಕತೆ ನಮ್ಮಲ್ಲಿ ಎದ್ದು ಕಾಣುತ್ತದೆ ಎಂದು ಸಾಹಿತಿ, ಪತ್ರಕರ್ತ ರಾಜಶೇಖರ ನಾಯ್ಕ ಹೇಳಿದರು.

ಅವರು ಶನಿವಾರ ಕಾಳಗನಕೊಪ್ಪದಲ್ಲಿ ನಡೆದ ಮುಂಡಗೋಡ ತಾಲೂಕು 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಮಾತನಾಡಿದರು.

ನಾವಿಂದು ಇಂಗ್ಲಿಷ್‌ ಮಾಧ್ಯಮ ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡುತ್ತಿದ್ದೇವೆ. ಕಾರಣ ಆ ಮಾಧ್ಯಮವು ಮಕ್ಕಳನ್ನು ವಿದ್ವಾಂಸರನ್ನಾಗಿ ಮಾಡುತ್ತದೆ ಎಂಬ ಭ್ರಮೆ. ಅದು ಸುಳ್ಳು. ಜಗತ್ತಿನಾದ್ಯಂತ ಬಹಳಷ್ಟು ಜನರು ಇಂಗ್ಲಿಷ್‌ ಓದದೇ ಉದ್ದಾರವಾದ ಎಷ್ಟೋ ಉದಾಹರಣೆಗಳಿವೆ. ಕನ್ನಡವನ್ನು ಕಲಿಸಲು ಪಾಲಕರು ಕೂಡ ಸಹಕರಿಸಿದರೆ ಒಳ್ಳೆಯದು. ನಾವೀಗ ಕನ್ನಡ ಭಾಷೆ, ಕನ್ನಡ ನಾಡನ್ನು ರಕ್ಷಿಸಿ ಬೆಳೆಸುವ ಅಥವಾ ಏಕೀಕರಣಗೊಳಿಸುವ ಕಾಯಕಕ್ಕೆ ಅಣಿಯಾಗಬೇಕಾಗಿದೆ. ನಮ್ಮ ನಾಡು, ನುಡಿ, ನೆಲ, ಜಲದ ಬಗ್ಗೆ ಸತ್‌ ಸಂಕಲ್ಪ ಮಾಡಬೇಕು ಎಂದರು.

ಕನ್ನಡಿಗರಾದ ನಾವು ಏಕತೆಯನ್ನು ತೋರಿಸಬೇಕಾಗಿದೆ. ನಮ್ಮಲ್ಲಿಯ ಸಣ್ಣಪುಟ್ಟ ಭೇದಭಾವಗಳನ್ನು ತೊರೆದು ಒಗ್ಗಟ್ಟಿನಿಂದ ಬಾಳುವುದನ್ನು ಕಲಿಯಬೇಕು ಎಂದರು.

ಶಾಸಕ ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಗೌರವಾಧ್ಯಕ್ಷ ಶಿವರಾಮ ಹೆಬ್ಟಾರ್‌ ಉದ್ಘಾಟಿಸಿ, ಕನ್ನಡ ನೆಲ, ಜಲ, ಭಾಷೆಗಳನ್ನು ಗೌರವಿಸಬೇಕು. ಕನ್ನಡವನ್ನು ಮರೆತರೆ ಹೆತ್ತ ತಾಯಿಯನ್ನು ಮರೆತಂತೆ ಎಂದರು.

ಜಿಪಂ ಸದಸ್ಯ ಎಲ್‌.ಟಿ. ಪಾಟೀಲ ಮಾತನಾಡಿ ನಿಜಕ್ಕೂ ಇಲ್ಲಿ ಜಾತ್ರೆಯ ವಾತಾವರಣ ನಿರ್ಮಾಣವಾಗಿದೆ. ಇಂತಹ ಕಾರ್ಯಕ್ರಮಗಳನ್ನು ಪಟ್ಟಣಗಳಲ್ಲಿ ಮಾಡುವುದಕ್ಕಿಂತ ಹಳ್ಳಿಗಳಲ್ಲಿ ಮಾಡುವುದು ಉತ್ತಮ ಎಂದರು.

ಕಸಾಪ ತಾಲೂಕಾಧ್ಯಕ್ಷ ಡಾ| ನಾಗೇಶ ಪಾಲನಕರ ಪ್ರಾಸ್ತಾವಿಕ ಮಾತನಾಡಿದರು. ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಸಹದೇವ ನಡಿಗೇರಿ ಧ್ವಜ ಹಸ್ತಂತರಿಸಿದರು. ಪ್ರಿಯಾ ನಾಯ್ಕ ಸಮ್ಮೆಳನಾಧ್ಯಕ್ಷರ ಪರಿಚಯ ಮಾಡಿದರು. ಸಾಹಿತಿ ಎಸ್‌.ಬಿ. ಹೂಗಾರ ಅವರ ಶುಭ ನುಡಿ ಸಂಗ್ರಹ ಪುಸ್ತಕವನ್ನು ಬಿಇಒ ಡಿ.ಎಂ. ಬಸವರಾಜಪ್ಪ ಬಿಡುಗಡೆ ಮಾಡಿದರು. ಪ.ಪಂ. ಸದಸ್ಯ ಹಾಗೂ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಶಿವರಾಜ ಸುಬ್ಟಾಯವರ ಸ್ವಾಗತಿಸಿದರು. ವಿನಯ ಪಾಲನಕರ, ದಯಾನಂದ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಬಾಲಚಂದ್ರ ಹೆಗಡೆ ವಂದಿಸಿದರು.

ಮೊದಲಿಗೆ ತಹಶೀಲ್ದಾರ್‌ ಅಶೋಕ ಗುರಾಣಿ ರಾಷ್ಟ್ರ ಧ್ವಜಾರೋಹಣ ಮತ್ತು ಕಸಾಪ ಜಿಲ್ಲಾಧ್ಯಕ್ಷ ಅರವಿಂದ ಕರ್ಕಿಕೋಡಿ ಕನ್ನಡ ಧ್ವಜಾರೋಹಣ ನೆರವೇರಿಸಿದರು. ನಂತರ ಡೊಳ್ಳು ಕುಣಿತ, ಮಹಿಳೆಯರ ಕುಂಭಮೇಳದೊಂದಿಗೆ ಎತ್ತಿನಗಾಡಿ ಮತ್ತು ಪಾದಯಾತ್ರೆ ಮೂಲಕ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಿತು. ಕಸಾಪ ಮಾಜಿ ಅಧ್ಯಕ್ಷೆ ರಮಾಬಾಯಿ ಕುದಳೆ ಉದ್ಘಾಟಿಸಿದರು. ಮಹಾದ್ವಾರವನ್ನು ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಜಯಮ್ಮ ಹಿರೇಹಳ್ಳಿ, ಮುಖ್ಯ ದ್ವಾರವನ್ನು ಜಿಪಂ ಸದಸ್ಯ ಎಲ್‌.ಟಿ. ಪಾಟೀಲ ಮತ್ತು ಪುಸ್ತಕ ಮಳಿಗೆಯನ್ನು ತಾಪಂ ಅಧ್ಯಕ್ಷೆ ದಾಕ್ಷಾಯಣಿ ಸುರಗಿಮಠ ಉದ್ಘಾಟಿಸಿದರು. ಟಿಎಪಿಸಿಎಂ ಸೊಸೈಟಿ ಅಧ್ಯಕ್ಷ ಪಿ.ಎಸ್‌. ಸಂಗೂರಮಠ, ತಾಪಂ ಇಒ ಮಂಜುನಾಥ ಸಾಳುಂಕೆ, ಕಾಳಗನಕೊಪ್ಪದ ಧುರಿಣ ನಾಗರಾಜ ಚಿಗಳ್ಳಿ, ಪ್ರಾಥಮಿಕ ಶಾಲಾ ಎಸ್‌ಡಿಎಮ್‌ಸಿ ಅಧ್ಯಕ್ಷ ಪರಶುರಾಮ ಉಪ್ಪಾರ, ಎಚ್.ಎಂ. ನಾಯ್ಕ, ಎಸ್‌.ಕೆ. ರೇವಣಕರ, ಶಾರದಾ ಭಟ್, ವೇಣುಗೋಪಾಲ ಮದ್ಗುಣಿ, ಜಂಪಾ ಲಾಮಾ, ಉಪೇಂದ್ರ ಘೋರ್ಪಡೆ, ಜಯಚಂದ್ರನ, ಬಾಬಣ್ಣ ಕೋಣನಕೇರಿ, ಶ್ರೀಕಾಂತ ಸಾನು, ಮಂಜುನಾಥ ವರ್ಣೇಕರ ಮುಂತಾದವರು ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.