ದೊಡ್ಡೂರು ಬೆಟ್ಟದಲ್ಲಿ ಬಿಳೆ ಮುಳ್ಳಣ್ಣು ಹಬ್ಬ


Team Udayavani, Apr 11, 2021, 7:39 PM IST

hdfghfvv

ಶಿರಸಿ : ವಿಶ್ವ ಆರೋಗ್ಯದಿನದ ಅಂಗವಾಗಿ ಶಿರಸಿಯ ಪ್ರಕೃತಿ ಸಂಸ್ಥೆವತಿಯಿಂದ ವಿನೂತನವಾದ ಬಿಳೆ ಮುಳ್ಳಣ್ಣು ಹಬ್ಬವನ್ನು ತಾಲೂಕಿನ ದೊಡ್ಡೂರಿನ ಬೆಟ್ಟದಲ್ಲಿ ಆಚರಿಸಲಾಯಿತು.

ಪ್ರಕೃತಿ ಸಂಸ್ಥೆಯ ಪಾಂಡುರಂಗ ಹೆಗಡೆ ಮಾತನಾಡಿ, ಪ್ರಕೃತಿ ಮತ್ತು ಮಾನವನ ನಡುವಿನ ಸಂಬಂಧ ಬಲಗೊಂಡಾಗ ಆರೋಗ್ಯ ಮತ್ತು ಸ್ವಾಸ್ಥ್ಯ ಒದಗಿ ಬರುತ್ತದೆ. ಪೂರಕವಾಗಿ ತಲೆಮಾರುಗಳ ನಡುವಿನ ಸಂಬಂಧಗಳು ಬಲಗೊಳ್ಳಬೇಕಾದ ಅಗತ್ಯ ಇಂದಿನದ್ದಾಗಿದೆ. ಈ ಹಿನ್ನೆಲೆಯಲ್ಲಿ ಹಿರಿಯರೊಂದಿಗೆ ಕಿರಿಯರು ಕೂಡಿ ನಿಸರ್ಗ ಸ್ನೇಹ ಬೆಸೆದುಕೊಳ್ಳುವ ಒಂದು ಪ್ರಯತ್ನ ಇದು.

ಪ್ರಕೃತಿಯಲ್ಲಿ ಕಾಲಮಾನಕ್ಕೆ ಅನುಗುಣವಾಗಿ ಆಹಾರ, ನಿಸರ್ಗದಲ್ಲಿ ಬದಲಾವಣೆ ಕಾಣಬಹುದು. ಅಂತಹ ಒಂದು ವೈಶಿಷ್ಟ್ಯವೇ ಬಿಳೆ ಮುಳ್ಳೆಹಣ್ಣು ಎಂದರು. ಗಿಡಮೂಲಿಕಾ ತಜ್ಞ ಜಿ.ಎಸ್‌. ಹೆಗಡೆ ಲಕ್ಕಿಸವಲು, ಅತ್ಯಂತ ಕಡಿಮೆ ವೆಚ್ಚದಲ್ಲಿ ಮನುಷ್ಯನ ನರಗಳ ಚೈತನ್ಯವನ್ನು ಹೆಚ್ಚಿಸುವ ಟಾನಿಕ್‌ ಇದಾಗಿದೆ. ಆ್ಯಂಟಿ ಆಕ್ಸಿಡೆಂಟ್‌ ಇರುವ ಇರುವ ಈ ಮುಳ್ಳಣ್ಣು ದೇಹಕ್ಕೆ ಬೇಸಿಗೆಯಲ್ಲಿ ತಂಪನ್ನು ನೀಡುವಲ್ಲಿ ಸಹಕಾರಿಯಾಗಿದೆ ಎಂದರು.

ಝಿಝೀಪಸ್‌ ರೊಗೊಸಾ ಎಂದು ಕರೆಯಲ್ಪಡುವ ಈ ಹಣ್ಣು ಬೋರೆ ಹಣ್ಣಿನ ಪರಿವಾರಕ್ಕೆ ಸೇರಿದ್ದು. ಮತ್ತೂಂದು ಪ್ರಭೇದವೇ ಕರೆ ಮುಳ್ಳಣ್ಣು ಅಥವಾ ಪರಿಗೆ ಹಣ್ಣು ಎಂದು ಕರೆಯುತ್ತಾರೆ. ಇಡೀ ಗಿಡ ಮೊನಚಾದ ಮುಳ್ಳಿನಿಂದ ಕೊಡಿರುವುದರಿಂದ ಹಣ್ಣು ಕೊಯ್ಯವಾಗ ಸ್ವಲ್ಪ ಎಚ್ಚರ ತಪ್ಪಿದರೆ ಕೈಗೆ ಚುಚ್ಚುವುದು ಖಚಿತ. ಬಹುಶಃ ಈ ಕಾರಣದಿಂದಾಗಿ ಕಾಡಿನಲ್ಲಿರುವ ಮಂಗಗಳು ಇದನ್ನು ತಿನ್ನದೇ ಇರುವುದರಿಂದ ಅದು ಮನುಷ್ಯನಿಗೆ, ಪಕ್ಷಿಗಳಿಗೆ ಸವಿಯಲು ಸಿಗುತ್ತಿದೆ ಎಂದೂ ಅನೇಕರು ಹೇಳಿದರು. ಎರಡು ತಾಸು ಈ ಬೆಟ್ಟದಲ್ಲಿ ಅಲೆದಾಡುತ್ತಾ ವಿವಿಧ ರೀತಿಯ, ಬೇರೆ ಬೇರೆ ರುಚಿಯಿರುವ ಬಾಯಿಯಲ್ಲಿ ಇಟ್ಟ ತತ್‌ ಕ್ಷಣ ಕರಗಿ ಸವಿ ನೀಡುವ ಮುಳ್ಳಣ್ಣು ಹಬ್ಬದಲ್ಲಿ ಭಾಗವಹಿಸಲು ಬಂದ ಮಹಿಳೆಯರು, ಹಿರಿಯ ನಾಗರಿಕರು ಮತ್ತು ಮಕ್ಕಳು ಸವಿದು ಬಾಯಿ ಚಪ್ಪರಿಸಿದರು.

ಸಾಹಿತಿ ಮಾರುತಿ ಅಂಕೋಲೆಕರ, ಈ ಹಬ್ಬ ನನ್ನ ಬಾಲ್ಯದ ದಿನಗಳನ್ನು ನೆನಪು ಮಾಡಿಕೊಟ್ಟಿತು, ಇಷ್ಟು ಪ್ರಮಾಣದಲ್ಲಿ ಮುಳ್ಳಣ್ಣು ಗಿಡಗಳನ್ನು ನಾಡು ನೋಡಿರಲಿಲ್ಲ ಹೇಳಿದರು. ಈ ಗಿಡದ ಬೇರು ಮತ್ತು ತೊಗಟೆಯನ್ನು ಔಷಧಿಯಲ್ಲಿ ಬಳಸುವ ಮತ್ತು ಅದರ ವಿವಿಧ ರೀತಿಯ ಉಪಯೋಗದ ಕುರಿತು ವಿವಿರವಾದ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಗಳು ನೀಡಿದರು.

ಇಂತಹ ಕಾಡು ಹಣ್ಣುಗಳು ಹೆಚ್ಚಿನ ಪೋಷಕಾಂಶಗಳನ್ನು ಹೊಂದಿರುವುದರಿಂದ ಅವುಗಳ ಮಹತ್ವದ ಕುರಿತು ಜಾಗೃತಿ ಮೂಡಿಸುವ ಕುರಿತು ಚರ್ಚೆ ನಡೆಯಿತು. ರಸ್ತೆಯ ಪಕ್ಕದಲ್ಲಿದ್ದರೂ ಸಹ ಮಕ್ಕಳು ಇಲ್ಲಿರುವ ಮುಳ್ಳಣ್ಣನ್ನು ತಿನ್ನದೇ ಬಿಟ್ಟಿರುವುದು ಹೊಸ ತಲೆಮಾರಿನವರಿಗೆ ಈ ಕಾಡು ಹಣ್ಣುಗಳ ಬಗ್ಗೆ ಆಸಕ್ತಿ ಇಲ್ಲದಿರುವುದನ್ನು ತೋರಿಸುತ್ತದೆ. ಪೌಷ್ಠಿಕಾಂಶಗಳಿಂದ ಕೂಡಿರುವ ಈ ಹಣ್ಣುಗಳು ಪೇಟೆಯಿಂದ ಖರೀದಿಸಿದ ಹಣ್ಣಿಗಿಂತ ಹೆಚ್ಚಿನ ಆರೋಗ್ಯವನ್ನು ಒದಗಿಸುತ್ತದೆ. ಪ್ರಕೃತಿ ಸಂಸ್ಥೆ ಏರ್ಪಡಿಸಿದ್ದ ಈ ಕಾರ್ಯಕ್ರಮದಲ್ಲಿ ಪಾಂಡುರಂಗ ಹೆಗಡೆ ಪ್ರಾಸ್ತಾವಿಕ ಮಾತನಾಡಿದರು. ಬೆಂಗಳೂರಿನ ಐಟಿ ಉದ್ಯೋಗಿ ವಿನ್ಯಾಸ ಕುಮಾರ, ತ್ರಯಿ, ಸುಬ್ಬಣ್ಣ ಮಣಭಾಗಿ ಮತ್ತು ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.