Multi specialty Hospital; ಹಣ ಘೋಷಣೆಯಾಗದಿದ್ದಲ್ಲಿ ಸಚಿವ ವೈದ್ಯ ರಾಜೀನಾಮೆ ನೀಡಲಿ

ಸಾಮಾಜಿಕ ಹೋರಾಟಗಾರ, ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಆಗ್ರಹ

Team Udayavani, Feb 15, 2024, 8:41 PM IST

1-sadsad

ಶಿರಸಿ: ರಾಜ್ಯ ಸರ್ಕಾರ ಶುಕ್ರವಾರ ಈ ವರ್ಷದ ಬಜೆಟ್ ಮಂಡಿಸಲಿದ್ದು, ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಈ ಹಿಂದೆ ಘೋಷಣೆಯಾದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಹಣ ಬಿಡುಗಡೆಗೆ ಘೋಷಣೆ ಮಾಡದಿದ್ದಲ್ಲಿ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸಂಪೂರ್ಣ ಜವಾಬ್ದಾರಿ ಹೊತ್ತು ತಕ್ಷಣ ರಾಜೀನಾಮೆ ನೀಡಬೇಕು ಎಂದು ಸಾಮಾಜಿಕ ಹೋರಾಟಗಾರ ಹಾಗೂ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಆಗ್ರಹಿಸಿದ್ದಾರೆ.

ಕಳೆದ ಹಲವು ತಿಂಗಳುಗಳಿಂದ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಹಾಗೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಆಗ್ರಹಿಸಿ ಹಲವಾರು ಹೋರಾಟಗಳನ್ನು ಮಾಡಿದ್ದು, ಜಿಲ್ಲೆಯ ಜನರು ಕೂಡಾ ಸೋಶಿಯಲ್ ಮೀಡಿಯಾ ಸೇರಿದಂತೆ ಅನೇಕ ಮಾಧ್ಯಮಗಳಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಆಗ್ರಹಿಸಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಆದರೂ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಯಾವುದೇ ತರಹದ ಪ್ರಕ್ರಿಯೆ ನಡೆಯದಿರುವುದು ಶೋಚನೀಯ ಸಂಗತಿ. ಈ ಎಲ್ಲಾ ಹೋರಾಟಗಳು ತಮ್ಮ ಗಮನಕ್ಕೆ ಬಂದಿರಲಿಲ್ಲವೇ? ಕಳೆದ ಕೆಲ ದಿನಗಳ ಹಿಂದೆ ಕುಮಟಾದಿಂದ ಭಟ್ಕಳದ ತಮ್ಮ ಕಚೇರಿಯವರೆಗೆ ಪಾದಯಾತ್ರೆಯಲ್ಲಿ ನೂರಾರು ಜನರು ಬಂದು ತಮ್ಮ ಕಛೇರಿಯ ಸಿಬ್ಬಂದಿಗೆ ಮನವಿ ನೀಡಿದ್ದೇವೆ ಇದು ತಮ್ಮ ಗಮನಕ್ಕೆ ಬಂದಿರಲೇಬೆಕು ಎಂದು ಭಾವಿಸಿದ್ದು ಆದರೆ ತಾವುಗಳು ಈ ಬಗ್ಗೆ ಒಂದೇ ಒಂದು ಹೇಳಿಕೆ ನೀಡಿಲ್ಲ. ಇದು ನಿಮಗೆ ನಿರ್ಲಕ್ಷದ ವಿಷಯವೇ ಎಂದು ಪ್ರಶ್ನಿಸಿದ್ದಾರೆ.

ಈ ಹಿಂದೆ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಸ್ವಂತ ಖರ್ಚಿನಲ್ಲಿ ಆಸ್ಪತ್ರೆ ನಿರ್ಮಾಣ ಮಾಡುವುದಾಗಿ ಜನರಿಗೆ ಹೇಳಿದ್ದನ್ನು ನೆನಪಿಸಿದ ಅನಂತಮೂರ್ತಿ ಅವರು, ಕ್ಷೇತ್ರದ ಶಾಸಕರಾಗಿ ಈಗ ಜಿಲ್ಲಾ ಉಸ್ತುವಾರಿ ಸಚಿವರು ಆಗಿದ್ದಾಗಿದೆ. ಸ್ವಂತ ಖರ್ಚಿನಲ್ಲಿ ಹೋಗಲಿ ಸರ್ಕಾರದಿಂದ ಮಂಜೂರಾದ ಆಸ್ಪತ್ರೆಗೆ ಹಣ ಬಿಡುಗಡೆ ಮಾಡಿಸಲು ತಾವು ಯಾವುದೇ ರೀತಿಯಲ್ಲೂ ಪ್ರಯತ್ನ ಮಾಡದಿರುವುದು ಶೋಚನೀಯ ಸಂಗತಿ. ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಸ್ಪತ್ರೆ ನಿರ್ಮಾಣದ ಬಗ್ಗೆ ಒಂದು ಸಭೆ ನಡೆಸದಿರುವುದು ಇದರಿಂದ ತಿಳಿಯುತ್ತದೆ. ಜಿಲ್ಲೆಯ ಜನರ ಕಷ್ಟಗಳು ತಮಗೆ ಅರಿವಿಗೆ ತಿಳಿದಿಲ್ಲವೇ? ಇನ್ನೂ ಎಷ್ಟು ವರ್ಷ ಜಿಲ್ಲೆಯ ಜನರು ಆಸ್ಪತ್ರೆಗಾಗಿ ಪಕ್ಕದ ಜಿಲ್ಲೆ ಅಥವಾ ಪಕ್ಕದ ರಾಜ್ಯಗಳಿಗೆ ಅಲೆಯಬೇಕು. ತಮ್ಮ ಸರ್ಕಾರದಿಂದ ಬಜೆಟ್ ಮಂಡನೆಯಾಗಲಿದ್ದು, ಈ ಬಜೆಟ್ ನಲ್ಲಿ ಜಿಲ್ಲೆಯ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಘೋಷಣೆಯಾಗುತ್ತದೆ ಎಂದು ನಂಬಿದ್ದೇವೆ. ಒಂದು ವೇಳೆ ಘೋಷಣೆಯಾಗದಿದ್ದರೆ ತಾವು ಇದಕ್ಕೆ ಸಂಪೂರ್ಣ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಆಸ್ಪತ್ರೆ ನಿರ್ಮಾಣ ಆಗುವವರೆಗೂ ನಮ್ಮ ಹೋರಾಟ ನಿರಂತರವಾಗಿರುತ್ತದೆ. ಮುಂದಿನ ದಿನಗಳಲ್ಲಿ ತಮ್ಮ ರಾಜೀನಾಮೆಗೆ ಒತ್ತಾಯಿಸುವುದರೊಂದಿಗೆ ತಮ್ಮ ಕಚೇರಿ ಹಾಗೂ ಬೆಂಗಳೂರಿನ ವಿಧಾನಸೌಧ ಎದುರು ಗಾಂಧಿ ಪ್ರತಿಮೆಯ ಬಳಿ ಜಿಲ್ಲೆಯ ನೂರಾರು ಜನರು, ಯುವಕರೊಂದಿಗೆ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡುವುದಾಗಿ ತಮಗೆ ಈ ಮೂಲಕ ಎಚ್ಚರಿಕೆ ನೀಡುತ್ತೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.