ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಕುಮಟಾದಲ್ಲಿ ಸಚಿವ ಡಾ.ಸುಧಾಕರ್ ರಿಂದ ಸ್ಥಳ ಪರಿಶೀಲನೆ
Team Udayavani, Oct 11, 2022, 8:05 PM IST
ಕುಮಟಾ: ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸರಕಾರ ತಾತ್ವಿಕ ಒಪ್ಪಿದ ನೀಡಿದ ಬೆನ್ನಲ್ಲೇ ಆರೋಗ್ಯ ಸಚಿವರಾದ ಡಾ.ಸುಧಾಕರ್ ಆಸ್ಪತ್ರೆ ನಿರ್ಮಾಣಕ್ಕೆ ಸೂಚಿಸಲಾದ ತಾಲೂಕಿನ ಮಿರ್ಜಾನ್, ರೈಲ್ವೆ ನಿಲ್ದಾಣದ ಬಳಿ ಹಾಗೂ ಎತ್ತಿನಬೈಲ್, ಕುಮಟಾದ ಕೊಂಕಣ ಏಜ್ಯುಕೇಶನ್ ಬಳಿ ಸ್ಥಳ ಪರಿಶೀಲನೆ ನಡೆಸಿದರು.
ನಂತರ ಮಾದ್ಯಮದವರೊಂದಿಗೆ ಮಾತನಾಡಿ, ಈಗಾಗಲೇ ಜಿಲ್ಲಾಧಿಕಾರಿಗಳು ಸೇರಿದಂತೆ ಇಲಾಕಾ ಅಧಿಕಾರಿಗಳು ಸೂಚಿಸಿರುವ ಸ್ಥಳಗಳಿಗೆ ಭೇಟಿ ನೀಡಿದ್ದು, ಈ ಪೈಕಿ ಮಿರ್ಜಾನ್ ಎತ್ತಿನಬೈಲ್ ಜಾಗವು ಆಸ್ಪತ್ರೆ ನಿರ್ಮಾಣಕ್ಕೆ ಸೂಕ್ತ ಎಂದು ನಿರ್ಧರಿಸಲಾಗಿದೆ.ಮುಂದಿನ ಹಂತದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಸಂಭಂದಪಟ್ಟಂತೆ ಚಟುವಟಿಕೆಗಳನ್ನು ಆರಂಭಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ, ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಕಾರವಾರ ಶಾಸಕಿ ರೂಪಾಲಿ ನಾಯ್ಕ್ ,ಶಾಸಕರಾದ ದಿನಕರ ಶೆಟ್ಟಿ, ಉಪವಿಭಾಗಾಧಿಕಾರಿ ರಾಘವೇಂದ್ರ ಜಗಲಾಸರ, ತಹಶೀಲ್ದಾರ್ ವಿವೇಕ ಶೇಣ್ವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ನಾಗರತ್ನ ನಾಯಕ, ಪ್ರಮುಖರಾದ ಗಜಾನನ ಪೈ, ಎಂ.ಜಿ. ಭಟ್, ವೆಂಕಟೇಶ ನಾಯಕ ಸೇರಿದಂತೆ ತಾಲೂಕು ಮಟ್ಟದ ಆರೋಗ್ಯ ಇಲಾಖಾ ಅಧಿಕಾರಿಗಳು, ಸಿಬಂದಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್