![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-415x234.jpg)
ಮುಂಡಗೋಡ:ಗ್ರಾಮೀಣ ಪ್ರದೇಶಗಳಿಗೆ ಖಾಸಗಿ ಕೊಳವೆಬಾವಿ ನೀರು ಪೂರೈಕೆ
Team Udayavani, Mar 26, 2024, 6:09 PM IST
![ಮುಂಡಗೋಡ:ಗ್ರಾಮೀಣ ಪ್ರದೇಶಗಳಿಗೆ ಖಾಸಗಿ ಕೊಳವೆಬಾವಿ ನೀರು ಪೂರೈಕೆ](https://www.udayavani.com/wp-content/uploads/2024/03/Honnavar-1-620x260.jpg)
ಉದಯವಾಣಿ ಸಮಾಚಾರ
ಮುಂಡಗೋಡ: ತಾಲೂಕಿನಲ್ಲಿ ಹಂತ ಹಂತವಾಗಿ ಕುಡಿಯುವ ನೀರಿನ ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ಮುಂದಿನ ದಿನದಲ್ಲಿ ಗ್ರಾಮಾಂತರ ಪ್ರದೇಶದ ಕೆಲಭಾಗಗಳಲ್ಲಿ ಗಂಭೀರ ಪರಿಸ್ಥಿತಿ ನಿರ್ಮಾಣಗೊಳ್ಳುವ ಸಾಧ್ಯತೆ ಇದೆ.
ತಾಲೂಕಿನಾದ್ಯಂತ ರೈತರು, ಜನಸಾಮಾನ್ಯರು, ಪ್ರಾಣಿ, ಪಕ್ಷಿಜೀವ ಸಂಕುಲಗಳ ಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರ ಬಿಸಿಲಿನ
ತಾಪಮಾನದಿಂದ ಡ್ಯಾಂ, ಹಳ್ಳಗಳ ನೀರಿನ ಮೂಲಗಳು ಬತ್ತಿ ಬರಿದಾಗಿವೆ. ಇದರಿಂದ ಅಡಕೆ, ಬಾಳೆ, ಸೇರಿದಂತೆ ಇತರೆ ಬೆಳೆಗಳ ಮೇಲೆ ತೀವ್ರ ಪರಿಣಾಮ ಬೀರಿದ್ದು, ಇದೀಗ ಬೆಳೆಗಳ ರಕ್ಷಣೆ ಸವಾಲಾಗಿ ಪರಿಣಮಿಸಿದೆ.
ಮಳೆಯ ಅಭಾವ, ಬೊರ್ವೆಲ್ ಕೊರೆತ, ಕಾಡುಗಳ ನಾಶ, ನೀರಿನ ದುರ್ಬಳಕೆ ಹೀಗೆ ಹತ್ತು ಹಲವಾರು ಕಾರಣಗಳಿಂದ ಅಂತರ್ಜಲ ಕುಸಿದಿದೆ ಎನ್ನಬಹುದಾಗಿದೆ.
ಖಾಸಗಿ ಕೊಳವಿಬಾವಿಗಳಿಂದ ನೀರು ಪೂರೈಕೆ:
ತಾಲೂಕಿನ ಮೈನಳ್ಳಿ, ಕ್ಯಾತ್ನಳ್ಳಿ, ಇಂದೂರ, ಕೊಪ್ಪ, ಅಂದಲಗಿ, ಚವಡಳ್ಳಿ, ಮಲವಳ್ಳಿ, ಹುಲಿಹೊಂಡ, ಗುಂಜಾವತಿ, ಉಗ್ನಿಕೇರಿ, ಚವಡಳ್ಳಿ ಪ್ಲಾಟ್, ಮಲವಳ್ಳಿ ಪ್ಲಾಟ್, ಕೆಂದಲಗೇರಿ, ರಾಮಾಪುರ, ಶಿವಾಜಿನಗರ ಸೇರಿದಂತೆ ತಾಲೂಕಿನ 18 ಹಳ್ಳಿಗಳಲ್ಲಿ ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆ ಆಧಾರದಲ್ಲಿ ಪಡೆದು ಕುಡಿಯುವ ನೀರು ಪೂರೈಸಲಾಗುತ್ತಿದೆ.
ಮೈನಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಹಾಹಾಕಾರ ಎದ್ದಿದ್ದು, ಅಲ್ಲಲ್ಲಿ ಟ್ಯಾಂಕರ್ ಮೂಲಕ ನೀರನ್ನು ಪೂರೈಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಟ್ಯಾಂಕರ್ ನೀರು ಪೂರೈಸುವುದು ಸಹ ಅಷ್ಟು ಸುಲಭವಲ್ಲ ಎನ್ನಲಾಗುತ್ತಿದೆ. ಕೆಲಭಾಗಗಳಲ್ಲಿ ಒಬ್ಬರಿಗೆ ಇಂತಿಷ್ಟು ಕೊಡ ನೀರು ಎಂದು ಪೂರೈಸುವ ಸಂಭವವಿದೆ.
ಪಟ್ಟಣದಲ್ಲಿ ಈಗಾಗಲೇ ಮೂರು ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿತ್ತು. ಮೇ ಕೊನೆವರಿಗೆ ನೀರಿನ ಸಮಸ್ಯೆಯಿಲ್ಲ. ನೀರಿನ ಅಭಾವದಿಂದಾಗಿ ಇದೀಗ ನಿಯಮಿತವಾಗಿ ನೀರು ಪೂರೈಸುವ ಲಕ್ಷಣಗಳು ಕಂಡು ಬರುತ್ತಿದೆ.
ಮುಂದಿನ ದಿನಗಳಲ್ಲಿ 40 ಗ್ರಾಮ: ತಾಲೂಕಿನ 16 ಗ್ರಾಪಂದವರು ಈಗಾಗಲೆ ಕುಡಿಯುವ ನೀರಿನ ಸಮಸ್ಯೆ ಮುಂದಿನ ಏಪ್ರೀಲ್ ತಿಂಗಳು ಯಾವ ಯಾವ ಗ್ರಾಮಗಳಲ್ಲಿ ಎದುರಾಗಲಿದೆ ಎಂಬ ಮಾಹಿತಿಯನ್ನು ಸಂಗ್ರಹಿಸಿ ಇಟ್ಟಿದ್ದಾರೆ. ಏಪ್ರೀಲ್ನಲ್ಲಿ ಹೊಸದಾಗಿ 40 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದ್ದು, ಈ ಗ್ರಾಮಗಳಲ್ಲಿಯೂ ಖಾಸಗಿ ಬೋರ್ವೆಲ್ ಗಳನ್ನು ಗುರುತಿಸಿ ಇಡಲಾಗಿದೆ ಎಂಬ ಮಾಹಿತಿ ಗ್ರಾಪಂಗಳಿಂದ ತಿಳಿದು ಬಂದಿದೆ.
ಸದ್ಯ ತಾಲೂಕಿನಲ್ಲಿ ಪ್ರಮುಖ ಜಲಾಶಯ ಹಾಗೂ ದೊಡ್ಡ ಕೆರೆಗಳನ್ನು ಹೊರತು ಪಡಿಸಿದರೆ. ಶೇ.95 ರಷ್ಟು ಕೆರೆ, ಕಟ್ಟೆಗಳು ಬರಿದಾಗಿ ನಿಂತಿವೆ. ಇದರಿಂದ ದನ-ಕರುಗಳು ಹಾಗೂ ಅರಣ್ಯದಲ್ಲಿನ ಕಾಡು ಪ್ರಾಣಿಗಳು ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ.
ಟಾಪ್ ನ್ಯೂಸ್
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![4-shirur](https://www.udayavani.com/wp-content/uploads/2024/07/4-shirur-150x90.jpg)
Shiroor Hill Slide:ಈಶ್ವರ ಮಲ್ಪೆ ತಂಡ, ಟಗ್ ಬೋಟ್ ಸಹಾಯದಿಂದ ಕಾರ್ಯಾಚರಣೆ:ಜಿಲ್ಲಾಧಿಕಾರಿ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shirur landslide; Green signal for National highway traffic in three or four days?](https://www.udayavani.com/wp-content/uploads/2024/07/1-27-150x83.jpg)
Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?
![Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ](https://www.udayavani.com/wp-content/uploads/2024/07/shiruu-150x83.jpg)
Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ
![1-ccc-aa](https://www.udayavani.com/wp-content/uploads/2024/07/1-ccc-aa-150x94.jpg)
Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್ ಬೇಸರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.