ಮುಂಡಗೋಡ: ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಹುದ್ದೆ ಮತ್ತು ಸಿಬ್ಬಂದಿ ಕೊರತೆ

ಆದಷ್ಟು ಬೇಗ ಕಾಯಂ ವೈದ್ಯರನ್ನ ನೇಮಕ ಮಾಡಬೇಕೆಂದು ರೋಗಿಗಳು ಒತ್ತಾಯಿಸಿದ್ದಾರೆ.

Team Udayavani, Jan 10, 2023, 4:30 PM IST

ಮುಂಡಗೋಡ: ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಹುದ್ದೆ ಮತ್ತು ಸಿಬ್ಬಂದಿ ಕೊರತೆ

ಮುಂಡಗೋಡ: ಸಕಲ ಸೌಕರ್ಯಗಳಿಂದ ಕೂಡಿದ ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿಂದಾಗಿ ಸಕಾಲದಲ್ಲಿ ಸೇವೆ ಇಲ್ಲದೆ ಬಡ ರೋಗಿಗಳು ಪರದಾಡುವ ಸ್ಥಿತಿ ಬಂದೊದಗಿದೆ.

ದಶಕದ ಹಿಂದೆ ಸೌಲಭ್ಯಗಳ ಕೊರತೆ, ಸೂಕ್ತ ಕಟ್ಟಡವಿಲ್ಲದೇ ಬಳಲುತ್ತಿದ್ದ ತಾಲೂಕು ಸರ್ಕಾರಿ ಆಸ್ಪತ್ರೆ ಇದೀಗ ಎಲ್ಲ ಸೌಲಭ್ಯಗಳ ಜತೆಗೆ 100 ಬೆಡ್‌ ಆಸ್ಪತ್ರೆಯಾಗಿ ಅಭಿವೃದ್ಧಿ ಹೊಂದಿದೆ. ಹಲವು ವೈದ್ಯರ ಸೇವೆ ಲಭ್ಯವಾಗಿದ್ದರೂ, ಈ ಭಾಗಕ್ಕೆ ತೀರಾ ಅಗತ್ಯವಿರುವ ಮೂರು ವೈದ್ಯರ ಹುದ್ದೆ ಮತ್ತು ಸಿಬ್ಬಂದಿ ಕೊರತೆ ಇದೆ.

ಸರ್ಕಾರಿ ಆಸ್ಪತ್ರೆಗೆ ಇದೀಗ 4-5 ವರ್ಷದಲ್ಲಿ ಸಾಕಷ್ಟು ಸೌಲಭ್ಯಗಳು ಬಂದಿದೆ. 100 ಬೆಡ್‌ ಆಸ್ಪತ್ರೆಯಾಗಿ ಪರಿವರ್ತನೆಯಾದ ನಂತರ ಜಿಲ್ಲೆಯಲ್ಲಿಯೇ ಮಾದರಿ ಆಸ್ಪತ್ರೆಯಾಗುತ್ತಿದೆ. ಪ್ರತಿನಿತ್ಯ ನೂರಾರು ರೋಗಿಗಳು ಬಂದು ಚಿಕಿತ್ಸೆ ಪಡೆಯುತ್ತಿದ್ದಾರೆ. ವಿವಿಧ ರೀತಿ ಶಸ್ತ್ರಚಿಕಿತ್ಸೆ. ಲ್ಯಾಬ್‌, ಇತರ ತುರ್ತು ಸೇವೆಗಳು ಸಿಗುವಂತಾಗಿದೆ.

ಸದ್ಯ 100 ಬೆಡ್‌ಗೆ ಅಗತ್ಯವಿರುವಷ್ಟು ಸಿಬ್ಬಂದಿ ಬರಬೇಕಿದೆ. ಅತಿ ಮುಖ್ಯವಾಗಿ ಗ್ರಾಮೀಣ ಭಾಗದ ಬಡಕೂಲಿಕಾರರು, ಆರ್ಥಿಕ ಸಂಕಷ್ಟದಲ್ಲಿದವರು ಹೃದಯ ರೋಗ, ಡಯಬಿಟಿಸ್‌ನಂಥ ಸಮಸ್ಯೆಯಿಂದ ಸಾಕಷ್ಟು ಜನರು ಬರುತ್ತಿದ್ದಾರೆ. ಮುಖ್ಯವಾಗಿ ಬೇಕಾದ ಫಿಜಿಶಿಯನ್‌ ಇಲ್ಲದೇ ಸಮಸ್ಯೆಯಾಗಿದೆ. ಇನ್ನೂ ಚಿಕ್ಕಮಕ್ಕಳು, ಕಣ್ಣು, ಮತ್ತು ಕಿವಿ ಮೂಗು ಗಂಟಲು ಇತರ ಸಮಸ್ಯೆಯಿಂದ ಸಾಕಷ್ಟು ಜನರು ಬರುತ್ತಿದ್ದು ಅವರಿಗೂ ತಜ್ಞರಿಲ್ಲದೇ ಸಮಸ್ಯೆಯಾಗಿದೆ. ಇನ್ನೂ
ಆಪರೇಶನ ಮಾಡಲು ಬೇಕಾದ ಸರ್ಜನ್‌ ಇಲ್ಲದೇ ಸಮಸ್ಯೆಯಾಗಿದೆ. ಸದ್ಯ ಎನ್‌ಎಚ್‌ಎಂ ಆಧಾರದಲ್ಲಿ ವೈದ್ಯರೊಬ್ಬರು ಕಾರ್ಯನಿರ್ವಹಿಸುತ್ತಿದ್ದರಿಂದ ಅರವಳಿಕೆ ಚಿಕಿತ್ಸೆ ಸಮಸ್ಯೆ ಕಡಿಮೆಯಾಗಿದೆ. ಈ ಆಸ್ಪತ್ರೆಯಲ್ಲಿ ಒಟ್ಟು 11 ವೈದ್ಯರ ಹುದ್ದೆಯಲ್ಲಿ 3 ವೈದ್ಯರು ಹಾಗೂ ಎನ್‌ಎಚ್‌ಎಂ ಆಧಾರದಲ್ಲಿ 2 ವೈದ್ಯರು ಸೇರಿ ಐದು ವೈದ್ಯರ ಇತರ ಸೇವೆ ಲಭ್ಯವಾಗಿದೆ.

ಇದಲ್ಲದೇ ಸಿಬ್ಬಂದಿ ಕೊರತೆಯೂ ಇದೆ. ಕಾರ್ಮಿಕ ಸಚಿವರು ಹಾಗೂ ಆರೋಗ್ಯ ಸಚಿವರು ಆದಷ್ಟು ಬೇಗ ಕಾಯಂ ವೈದ್ಯರನ್ನ ನೇಮಕ ಮಾಡಬೇಕೆಂದು ರೋಗಿಗಳು ಒತ್ತಾಯಿಸಿದ್ದಾರೆ.

ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಶ್ರಮದಿಂದ ಇತ್ತೀಚಿನ ಆಧುನಿಕ ತಂತ್ರಜ್ಞಾನದ ಸುಧಾರಣೆಯಿಂದ ತಾಲೂಕು ಆಸ್ಪತ್ರೆ ಖಾಸಗಿ ಆಸ್ಪತ್ರೆಗಳಿಂತ ಒಂದು ಹೆಜ್ಜೆ ಮುಂದೆ ಇದೆ. ಬಡ, ಸಾಮಾನ್ಯ ಮತ್ತು ಎಲ್ಲ ವರ್ಗದ ರೋಗಿಗಳು ವೈದ್ಯರನ್ನು ನಂಬಿ ಇಲ್ಲಿ ಚಿಕಿತ್ಸೆಗೆ ಬರುತ್ತಾರೆ. ಆದರೆ ಸಂಜೆಯಾದ ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ಕೆಲವರು ವಾಪಸ್‌ ಹೋದರೆ ಇನ್ನು ಕೆಲವರು ವೈದ್ಯರು ಬರುವವರೆಗೆ ಕಾಯುತ್ತ ಕುಳಿತುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಆದಷ್ಟು ಬೇಗ ವೈದ್ಯರನ್ನು ನೇಮಿಸಿಕೊಳ್ಳಬೇಕು.
ನಾಗರಾಜ ಗುಬ್ಬಕ್ಕನವರ, ರೈತ ಮುಖಂಡ

ವೈದ್ಯರ ಕೊರತೆ ಇದೆ. ತಾಲೂಕಾಸ್ಪತ್ರೆಗೆ ನಿತ್ಯ ನೂರಾರು ರೋಗಿಗಳು ಬರುತ್ತಿದ್ದು, ಎಲ್ಲ ಸೌಲಭ್ಯಗಳು ಇವೆ. ಇದ್ದ ವೈದ್ಯರೆ ಉತ್ತಮ ಸೇವೆ ನೀಡುತ್ತಿದ್ದಾರೆ. ಫಿಜಿಶಿಯನ್‌, ಮಕ್ಕಳ ತಜ್ಞರ ಅಗತ್ಯತೆ ಇದ್ದು, ಹಿರಿಯ ಅಧಿಕಾರಿಗಳ ಗಮನಕ್ಕೂ ತಂದಿದ್ದೇವೆ. ಅವಶ್ಯವಿರುವ ಎಂಬಿಬಿಎಸ್‌ ವೈದ್ಯರು ಬಂದರೆ ಇನ್ನು ಹೆಚ್ಚಿನ ಅನುಕೂಲವಾಗಲಿದೆ.
ಡಾ| ಎಸ್‌ ಶಿವಕುಮಾರ,
ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ

*ಮುನೇಶ ತಳವಾರ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.