Murdeshwar; ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗನನ್ನು ರಕ್ಷಿಸಿದ ಲೈಫ್ ಗಾರ್ಡಗಳು
ಮೋಜು ಮಸ್ತಿ.... ಒಂದು ವಾರದಲ್ಲಿ ಮುರ್ಡೇಶ್ವರ ಕಡಲಲ್ಲಿ ಆರು ಜನರ ರಕ್ಷಣೆ
Team Udayavani, Oct 25, 2023, 9:41 PM IST
ಭಟ್ಕಳ: ಮುರುಡೇಶ್ವರ ಸಮುದ್ರದಲ್ಲಿ ಆಟವಾಡುತ್ತಿದ್ದ ಪ್ರವಾಸಿಗನೋರ್ವ ಅಬ್ಬರದ ಅಲೆಯಲ್ಲಿ ಕೊಚ್ಚಿಕೊಂಡು ಹೋಗುತ್ತಿರುವಾಗ ಸ್ಥಳದಲ್ಲಿಯೇ ಇದ್ದ ಲೈಫ್ ಗಾರ್ಡಗಳು ತತ್ ಕ್ಷಣ ಧಾವಿಸಿ ಆತನನ್ನು ರಕ್ಷಣೆ ಮಾಡಿದ ಘಟನೆ ಬುಧವಾರ ಸಂಭವಿಸಿದೆ.
ಕಡಲಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಪ್ರವಾಸಿಗನನ್ನು ಹಾಸನ ಜಿಲ್ಲೆ ಹನುಮಂತಪುರದ ನಿವಾಸಿ ಮನೋಜ (24) ಎಂದು ಗುರುತಿಸಲಾಗಿದೆ. ಹಾಸನದಿಂದ 7 ಜನ ಯುವಕರು ಪ್ರವಾಸಕ್ಕೆ ಬಂದಿದ್ದು ಬುಧವಾರವಷ್ಟೇ ಮುರ್ಡೇಶ್ವರ ತಲುಪಿದ್ದರು. ಇವರೆಲ್ಲರೂ ನೀರಿನಲ್ಲಿ ಆಟವಾಡುತ್ತಾ ಇರುವಾಗ ಮನೋಜ ಅಲೆಯ ಹೊಡೆತಕ್ಕೆ ಸಿಲುಕಿ ಇನ್ನೇನು ಮುಳುಗುತ್ತಿದ್ದಾನೆ ಎನ್ನುವಾಗ ಲೈಫ್ ಗಾರ್ಡ ಆತನನ್ನು ರಕ್ಷಣೆ ಮಾಡಿದ್ದಾರೆ.
ಸಾಕಷ್ಟು ನೀರು ಕುಡಿದು ತೀವ್ರ ಅಸ್ವಸ್ಥಗೊಂಡಿದ್ದು ಸ್ಥಳೀಯ ಆರ್.ಎನ್.ಎಸ್. ಆಸ್ಪತ್ರೆಯಲ್ಲಿನ ಐ.ಸಿ.ಯು. ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಲೈಪಗಾರ್ಡ್ ಸಿಬಂದಿ ಚಂದ್ರಶೇಖರ ದೇವಾಡಿಗ, ಜಯರಾಮ ಹರಿಕಾಂತ ಹಾಗೂ ಹನುಮಂತ ಇವರುಗಳೇ ಆತನನ್ನು ರಕ್ಷಣೆ ಮಾಡಿದವರಾದವರಾಗಿದ್ದಾರೆ. ಕಳೆದ ಒಂದು ವಾರದಲ್ಲಿ ಮುರ್ಡೇಶ್ವರ ಕಡಲಲ್ಲಿ ಆರು ಜನರ ರಕ್ಷಣೆ ಮಾಡಿದಂತಾಗಿದ್ದು ಇಬ್ಬರು ನೀರಿನಲ್ಲಿ ಮುಳುಗಿ ಮೃತ ಪಟ್ಟಿದ್ದಾರೆ. ಸಾಲು ಸಾಲು ರಜೆಯಲ್ಲಿ ಮೋಜು ಮಸ್ತಿ ಮಾಡುವುದೇ ಈ ರೀತಿಯ ಅನಾಹುತಕ್ಕೆ ಕಾರಣವಾಗಿದ್ದು ಸ್ಥಳೀಯರ, ಲೈಫ್ ಗಾರ್ಡಗಳ ಮಾತಿಗೆ ಇಲ್ಲಿ ಬೆಲೆಯೇ ಇಲ್ಲವಾಗಿದೆ ಎನ್ನುವುದು ವಾಸ್ತವ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
MUST WATCH
ಹೊಸ ಸೇರ್ಪಡೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು