ನರೇಗಾದಿಂದ ಉದ್ಯೋಗ ಸೃಷ್ಟಿ: ಅಸದಿ


Team Udayavani, Dec 11, 2021, 3:38 PM IST

ನರೇಗಾದಿಂದ ಉದ್ಯೋಗ ಸೃಷ್ಟಿ: ಅಸದಿ

ಕಾರವಾರ: ಮಹಿಳಾ ಸಬಲೀಕರಣ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸ್ವ-ಉದ್ಯೋಗ ಸೃಷ್ಟಿಸಿಕೊಳ್ಳಲು ಸಾಕಷ್ಟು ಅವಕಾಶಗಳಿದ್ದು, ಸ್ವ-ಸಹಾಯ ಸಂಘಗಳ ಮಹಿಳೆಯರು ಪಾಲ್ಗೊಂಡುಯೋಜನೆಯ ಲಾಭದೊಂದಿಗೆ ಜನರಿಗೆ ಅರಿವುಮೂಡಿಸಬೇಕಿದೆ ಎಂದು ಎನ್‌ಆರ್‌ಎಲ್‌ಎಂ ಜಿಲ್ಲಾ ಯೋಜನಾ ನಿರ್ದೇಶಕ ಕರೀಂ ಅಸದಿ ಅಭಿಪ್ರಾಯಪಟ್ಟರು.

ನಗರದ ಜಿಪಂ ಸಭಾಂಗಣದಲ್ಲಿ ನಡೆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ಜಿಪಂ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಸ್ವ-ಸಹಾಯ ಸಂಘಗಳ ಮಹಿಳೆಯರ ಪಾಲ್ಗೊಳ್ಳುವಿಕೆ ಹಾಗೂ ಎನ್‌ಆರ್‌ಎಲ್‌ಎಂ ಒಗ್ಗೂಡಿಸುವಿಕೆ ಕುರಿತು ನಡೆದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.

ಸ್ವ-ಸಹಾಯ ಸಂಘಗಳ ಮಹಿಳೆಯರು ನರೇಗಾದಡಿ ಲಭ್ಯವಿರುವ ಸಸಿ ಬೆಳೆಸುವುದು (ನರ್ಸರಿ), ವರ್ಕ್‌ ಶೆಡ್‌, ಕುರಿ, ಕೋಳಿ, ದನ, ಹಂದಿಶೆಡ್‌, ಬಚ್ಚಲ ಗುಂಡಿ ನಿರ್ಮಾಣ, ಎರೆಹುಳು ಗೊಬ್ಬರತಯಾರಿಕೆ, ಪೌಷ್ಠಿಕ ಕೈತೋಟ, ವಿವಿಧ ಹೂವು, ಹಣ್ಣುಗಳ ತೋಟ ಸೇರಿದಂತೆ ಹಲವು ಕಾಮಗಾರಿಗಳಲಾಭ ಪಡೆಯಲು ಅವಕಾಶವಿದೆ. ಜೊತೆಗೆ ಸ್ವಯಂಉದ್ಯೋಗ ಸೃಷ್ಟಿಕೊಳ್ಳಬಹುದಾಗಿದೆ. ಇದರಿಂದಗ್ರಾಮೀಣ ಪ್ರದೇಶದಲ್ಲಿ ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಿದಂತಾಗುತ್ತದೆ. ಹೀಗಾಗಿ ಸ್ವ-ಸಹಾಯಸಂಘಗಳ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿಭಾಗವಹಿಸಿ ಲಾಭದ ಜೊತೆಗೆ ಗ್ರಾಮೀಣ ಜನರುನರೇಗಾ ಯೋಜನೆಯ ಫಲಾನುಭವಿ ಆಗುವಂತೆಅರಿವು ಮೂಡಿಸಬೇಕಿದೆ. ಇದಕ್ಕೆಲ್ಲ ಪೂರಕವಾಗಿಸಿಬ್ಬಂದಿಗೆ ನರೇಗಾ ಕುರಿತು ಮಾಹಿತಿ ತಿಳಿಸುವ ಉದ್ದೇಶದಿಂದ ಈ ಕಾರ್ಯಗಾರ ಆಯೋಜಿಸಿದ್ದು,ಭಾಗವಹಿಸಿದ ಸಿಬ್ಬಂದಿ ಸೂಕ್ತ ಮಾಹಿತಿ ಪಡೆದು ತಮ್ಮ ತಾಲೂಕು ವ್ಯಾಪ್ತಿಯಲ್ಲಿ ಕಾರ್ಯ ಪ್ರವೃತ್ತರಾಗಬೇಕುಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಪಂ ಮುಖ್ಯ ಯೋಜನಾಧಿಕಾರಿ ವಿನೋದ್‌ ಅಣೇಕರ ಮಾತನಾಡಿ, ಗ್ರಾಮಾಂತರಪ್ರದೇಶದಲ್ಲಿ ಸ್ವ-ಸಹಾಯ ಮಹಿಳಾ ಸಂಘಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿವೆ.ಆದ್ದರಿಂದ ಈ ಕಾರ್ಯಗಾರದಲ್ಲಿ ನರೇಗಾದಡಿಅಗತ್ಯವಿರುವ ಕಾಮಗಾರಿಗಳು ಹಾಗೂ ಅವುಗಳನ್ನುಅನುಷ್ಠಾನಗೊಳಿಸುವುದು ಹೇಗೆ ಎಂಬ ಮಾಹಿತಿಕೊಡಲಾಗುತ್ತದೆ. ಕಾರ್ಯಾಗಾರದಲ್ಲಿ ಭಾಗವಹಿಸಿರುವಎನ್‌ಆರ್‌ಎಲ್‌ಎಂ ಸಿಬ್ಬಂದಿ ಸರಿಯಾಗಿತಿಳಿದುಕೊಂಡು ತಮಗೆ ನೀಡಿರುವ ಜವಾಬ್ದಾರಿಯನ್ನುಸರಿಯಾಗಿ ನಿಭಾಯಿಸಿ ಗ್ರಾಮೀಣ ಪ್ರದೇಶದ ಜನರಿಗೆ ಯೋಜನೆಯ ಸದುಪಯೋಗ ಪಡೆಯುವಂತೆಪ್ರಚಾರ ಕೈಗೊಳ್ಳಬೇಕು ಎಂದರು.

ಅಂಕೋಲಾ ತಾಪಂ ಸಹಾಯಕ ನಿರ್ದೇಶಕ ಸುನಿಲ್‌ ಎಂ, ಡಿಐಇಸಿ ಸಚಿನ್‌ ಬಂಟ್‌, ಕಾರವಾರ ತಾಲೂಕು ತಾಂತ್ರಿಕ ಸಂಯೋಜಕ ಅನಿಲ ಗಾಯತ್ರಿ, ಹೊನ್ನಾವರ ತಾಲೂಕಿನ ತೋಟಗಾರಿಕೆ ವಿಭಾಗದ ತಾಂತ್ರಿಕ ಸಹಾಯಕಿ ಕಾವೇರಿ ಬಿ.ಆರ್‌., ಜಿಲ್ಲೆಯ ಎಲ್ಲಾ ತಾಲೂಕಿನ ಎನ್‌ಆರ್‌ಎಲ್‌ಎಂ ಸಿಬ್ಬಂದಿಗೆ ನರೇಗಾ ಯೋಜನೆ ಹಾಗೂ ಕಾಮಗಾರಿಗಳ ಅನುಷ್ಠಾನ ಕುರಿತು ಪಿಪಿಟಿ ಮೂಲಕ ವಿವರವಾಗಿ ತಿಳಿಸಿಕೊಟ್ಟರು.

ಎಸ್‌ಬಿಎಂ ಜಿಲ್ಲಾ ಸಂಯೋಜಕ ಸೂರ್ಯನಾರಾಯಣ ಭಟ್ಟ ನಿರೂಪಿಸಿದರು.ಜಿಪಂ ಸಹಾಯಕ ಯೋಜನಾಧಿಕಾರಿ(ಡಿಆರ್‌ಡಿಎ)ಸುರೇಶ ನಾಯ್ಕ, ಎಡಿಪಿಸಿ ನಾಗರಾಜ್‌ ನಾಯ್ಕ,ಡಿಐಎಂಎಸ್‌ ಶಿವಾಜಿ ಬೊಬ್ಲಿ, ಎನ್‌ಆರ್‌ಎಲ್‌ ಎಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ನಾಗರಾಜ್‌ಕಲ್ಮನೆ. ಜಿಲ್ಲಾ ವ್ಯವಸ್ಥಾಪಕ ಶ್ರಿಕಾಂತ ಮೇಲಿನಮನಿ, ಪುಂಡಲಿಕ ಶಿರ್ಶಿಕರ, ತಾಲೂಕು ಐಇಸಿ ಸಂಯೋಜಕ ಫಕ್ಕೀರಪ್ಪ ತುಮ್ಮಣ್ಣನವರ ಸೇರಿದಂತೆ ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.