ನರೇಗಾ: ಕೆಲಸಕ್ಕಿಂತ ಸಿಬ್ಬಂದಿ ಹೆಚ್ಚು!


Team Udayavani, Dec 13, 2021, 12:43 PM IST

ನರೇಗಾ: ಕೆಲಸಕ್ಕಿಂತ ಸಿಬ್ಬಂದಿ ಹೆಚ್ಚು!

ಭಟ್ಕಳ: ಸರಕಾರ ಜನತೆಗೆ ಅನುಕೂಲವಾಗುವಂತೆ ಹತ್ತು ಹಲವಾರು ಯೋಜನೆಗಳನ್ನು ರೂಪಿಸುತ್ತದೆ. ಆದರೂ ಅವುಗಳೆಲ್ಲವೂ ಜನರ ತನಕ ತಲುಪುವುದು ಕೂಡಾಇಲ್ಲ. ಅನೇಕ ಯೋಜನೆಗಳು ಜನರಿಗೆ ತಲುಪಿದರೂ ಸಹ ಪ್ರಯೋಜನ ಪಡೆಯುವವರು ಮಾತ್ರ ಕೇವಲ ಕೆಲವೇ ಜನರು.

ಸರಕಾರದ ಉದ್ಯೋಗ ಖಾತ್ರಿ ಯೋಜನೆ. ಭಟ್ಕಳ ತಾಲೂಕಿನಲ್ಲಿ ಉದ್ಯೋಗ ಖಾತ್ರಿ ಯೋಜನೆಪ್ರಯೋಜನ ಪಡೆದುಕೊಳ್ಳುತ್ತಿರುವವರು ತೀರಾಕಡಿಮೆ ಜನರು. ಇದರಿಂದಾಗಿ ತಾಲೂಕಿನಲ್ಲಿ ಕೂಲಿಕಾರ್ಮಿಕರಿಗೆ ವೆಚ್ಚ ಮಾಡುವುದಕ್ಕಿಂತ ನಿಯೋಜಿತಸಿಬ್ಬಂದಿ ವೆಚ್ಚವೇ ಹೆಚ್ಚಾಗಿದ್ದು ಅನಾವಶ್ಯಕ ಆಡಳಿತಾತ್ಮಕ ವೆಚ್ಚ ಹೆಚ್ಚಾದಂತಾಗಿದೆ.

ತಾಲೂಕಿನಲ್ಲಿರುವ 16 ಗ್ರಾಪಂಗಳಲ್ಲಿ ನರೇಗಾ ಯೋಜನೆಯಡಿ ಆಗುತ್ತಿರುವ ಕಾಮಗಾರಿಗಳನ್ನು ಹೋಲಿಸಿದರೆ, ಇರುವ ಸಿಬ್ಬಂದಿಗಳೇ ಹೆಚ್ಚಾಗಿದ್ದಾರೆ. ಇದರಿಂದ ಆಡಳಿತಾತ್ಮಕ ವೆಚ್ಚವೇ ಅಧಿಕವಾಗಿ ಸರಕಾರಕ್ಕೆ ಹೊರೆಯಾಗಿದೆ. ನರೇಗಾ ಯೋಜನೆಯಡಿಕೂಲಿ ಕೆಲಸಗಾರರ ಮಾನವ ದಿನಗಳನ್ನು ಅವಲಂಬಿಸಿ ಸಿಬ್ಬಂದಿಗಳನ್ನು ಬಳಸಿಕೊಳ್ಳಬೇಕು. ಆದರೆ ತಾಲೂಕಿನಲ್ಲಿಮಾತ್ರ ಕೂಲಿ ಕೆಲಸಗಾರರ ಮಾನವ ದಿನಗಳಿಗಿಂತ ಅಧಿಕಸಿಬ್ಬಂದಿ ಇರುವುದೇ ಇಲ್ಲಿ ಸರಕಾರಕ್ಕೆ ಹೊರೆಯಾಗಲು ಕಾರಣವಾಗಿದೆ.

ತಾಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಂತ್ರಿಕ ಸಿಬ್ಬಂದಿಗಳೆಂದರೆ, ಓರ್ವ ಸಹಾಯಕ ನಿರ್ದೇಶಕರಿದ್ದು ಅವರ ಹುದ್ದೆ ಖಾಲಿ ಇದೆ.3 ಇಂಜಿನಿಯರ್‌ಗಳು, 6 ಜನರು ತಾಂತ್ರಿಕ ಟೆಕ್ನಿಷಿಯನ್‌ ಗಳು ಇವರಲ್ಲಿ ಈಗಾಗಲೇ ಓರ್ವರು ರಾಮನಗರಕ್ಕೆವರ್ಗಾವಣೆಗೊಂಡಿದ್ದಾರೆ, ಓರ್ವ ಕಂಪ್ಯೂಟರ್‌ ತಾಲೂಕು ಸಂಯೋಜಕರು, ಓರ್ವ ಡಾಟಾ ಎಂಟ್ರಿಆಪರೇಟರ್‌ ಇದ್ದು ಇದವರೆಲ್ಲರ ಸಂಬಳವೇ ಸುಮಾರು 5 ಲಕ್ಷದಷ್ಟಾಗುತ್ತಿದ್ದು ಅಷ್ಟೊಂದು ಮಾನವದಿನಗಳ ಕೆಲಸವೇ ಆಗುತ್ತಿಲ್ಲವಾಗಿದೆ. ಈಗಾಗಲೇ ಗ್ರಾಪಂಗಳಲ್ಲಿರುವ ಕಂಪ್ಯೂಟರ್‌ ಆಪರೇಟರ್‌ಗಳನ್ನಸಂಬಳ (ಕಾಮಗಾರಿಯ ಶೇ.6 ಮೀರಬಾರದೆನ್ನುವನಿಯಮದಡಿ) ಕೊಡಲಾಗುತ್ತಿಲ್ಲ ಎನ್ನುವ ಕಾರಣಕ್ಕೆ ತೆಗೆದು ಹಾಕಲಾಗಿದೆ ಎನ್ನಲಾಗಿದೆ.

ತಾಲೂಕಿನಲ್ಲಿ ನರೇಗಾ ಯೋಜನೆ ಸಿಬ್ಬಂದಿಗಳೇ ಸರಕಾರಕ್ಕೆ ಹೊರೆಯಾಗುತ್ತಿದ್ದಾರೆ. ತಾಲೂಕಿನಲ್ಲಿನರೇಗಾ ಯೋಜನೆಯಡಿ ನಡೆಯುವ ಕಾಮಗಾರಿಗೆಅನುಗುಣವಾಗಿ ಸಂಬಳ ಕೊಡಬೇಕಾಗುತ್ತದೆ. ಜಿಲ್ಲೆಯ ಉಳಿದ ತಾಲೂಕಿಗೆ ಹೋಲಿಸಿದರೆ,ಭಟ್ಕಳ ತಾಲೂಕಿನಲ್ಲಿ ನಡೆಯುವ ಕಾಮಗಾರಿಗಳೇ ಅತ್ಯಲ್ಪವಾಗಿರುವಾಗ ತಾಂತ್ರಿಕ ಸಿಬ್ಬಂದಿಗೆ ಒಟ್ಟೂತಿಂಗಳ ಸಂಬಳ ಮಾತ್ರ ಮೂಗಿಗಿಂತ ಮೂಗುತಿ ಭಾರ ಎನ್ನುವಂತಾಗಿದೆ. ಈಗಾಗಲೇ ಜಿಲ್ಲೆಯ ಬೇರೆ ಬೇರೆತಾಲೂಕುಗಳಲ್ಲಿ ನರೇಗಾ ಯೋಜನೆಯಡಿ ಉತ್ತಮಕೆಲಸವಾಗುತ್ತಿದ್ದರೂ ಕೆಲವು ತಾಲೂಕುಗಳಲ್ಲಿ ಸಿಬ್ಬಂದಿ ಕೊರತೆ ಇದೆ.

ಯಲ್ಲಾಪುರ, ಮುಂಡಗೋಡ, ಹಳಿಯಾಳ ಹಾಗೂ ಹೊನ್ನಾವರ, ಶಿರಸಿಗಳಲ್ಲಿ ಸಿಬ್ಬಂದಿ ಕೊರತೆಇದ್ದು ಉತ್ತಮ ಕೆಲಸವಾಗುತ್ತಿದೆ. ಇಲ್ಲಿಗೆ ಸಿಬ್ಬಂದಿಅವಶ್ಯಕತೆ ಇದ್ದರೂ ಸಹ ಕಾಮಗಾರಿಯೇ ನಡೆಯದಭಟ್ಕಳದಲ್ಲಿ ಮಾತ್ರ ಇಷ್ಟೊಂದು ಸಿಬ್ಬಂದಿ ಅವಶ್ಯಕತೆಇದೆಯೇ ಎನ್ನುವುದು ಪ್ರಶ್ನೆಯಾಗಿದೆ. ಅಧಿಕಾರಿಗಳುಇದಕ್ಕೆ ಉತ್ತರ ನೀಡಬೇಕಾಗಿದೆ. ನರೇಗಾ ಕೆಲಸವೇಇಲ್ಲದ ಭಟ್ಕಳದಲ್ಲಿ ಸಿಬ್ಬಂದಿಗಳನ್ನು ಇಡುವುದಕ್ಕಿಂತಅಗತ್ಯವಿದ್ದಲ್ಲಿ ನಿಯೋಜನೆ ಮಾಡಿದಲ್ಲಿ ಸರಕಾರಕ್ಕೂಲಾಭ, ತಾಲೂಕಿನ ಸಿಬ್ಬಂದಿಗೂ ಅನುಕೂಲವಾಗಲಿದೆ. ಇನ್ನಾದರೂ ಹಿರಿಯ ಅಧಿಕಾರಿಗಳೂ ಗಮನ ಹರಿಸುವರೇ ಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.