ಕಾರವಾರ ನೌಕಾನೆಲೆಗೆ ಅಡ್ಮಿರಲ್ ಭೇಟಿ
Team Udayavani, Oct 22, 2020, 11:44 PM IST
ಅಡ್ಮಿರಲ್ ಕರಮ್ ಬೀರ್ ಸಿಂಗ್
ಕಾರವಾರ: ಕಾರವಾರ ನೌಕಾನೆಲೆಗೆ ಗುರುವಾರ ಭೇಟಿ ನೀಡಿದ ನೌಕಾದಳ ಮುಖ್ಯಸ್ಥ ಅಡ್ಮಿರಲ್ ಕರಮ್ ಬೀರ್ ಸಿಂಗ್ ಅವರನ್ನು ಕರ್ನಾಟಕದ ನೌಕಾದಳದ ಕಮಾಂಡರ್ ಹಾಗೂ ಇತರ ಅಧಿಕಾರಿಗಳು ಸ್ವಾಗತಿಸಿದರು.
ಐಎನ್ಎಸ್ ಕದಂಬ ನೌಕಾನೆಲೆಯ ವಿಶೇಷಗಳು ಹಾಗೂ ಶಿಪ್ ಲಿಫ್ಟ್ ಯಾರ್ಡ್ಗಳಿಗೆ ಭೇಟಿ ನೀಡಿ ಮಾಹಿತಿ ಪಡೆದ ಅವರು ಎರಡನೇ ಹಂತದ ಕಾಮಗಾರಿಗಳು ಹಾಗೂ ಭವಿಷ್ಯದಲ್ಲಿ ನೌಕಾದಳದ ಕಾರ್ಯ ಚಟುವಟಿಕೆಯನ್ನು ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿದರು.
ಶಿಪ್ ಲಿಫ್ಟ್ ಯಾರ್ಡ್ನ ಮಹತ್ವ ತಿಳಿದು, ಅದನ್ನು ವೀಕ್ಷಿಸಿದ ಅಡ್ಮಿರಲ್ ಕರಮ್ ಬೀರ್ ಸಿಂಗ್, ಕೋವಿಡ್ ಸಮಯದಲ್ಲಿ ನೌಕಾದಳದ ಶಿಪ್ಗ್ಳು ಹಾಗೂ ಸಬ್ಮರೀನ್ಗಳು ತಾಂತ್ರಿಕ ನೆರವು, ರಿಪೇರಿಯಾದ ಬಗ್ಗೆ ಮಾಹಿತಿ ಪಡೆದರು. ಸೇಲರ್ ಗಳ ಜತೆ ಮಾತನಾಡಿ ಅವರಿಗೆ ಸ್ಫೂರ್ತಿ ತುಂಬುವ ಮಾತುಗಳನ್ನಾಡಿದರು.
ಅನಂತರ ಐಎನ್ಎಸ್ ಪತಂಜಲಿ ಬಗ್ಗೆ ಮಾಹಿತಿ ಪಡೆದರು. ಉತ್ತರ ಕನ್ನಡದಲ್ಲಿ ಕೋವಿಡ್ ಪೀಡಿತ ಸಾರ್ವಜನಿಕರಿಗೆ ಮೊಟ್ಟ ಮೊದಲ ಬಾರಿಗೆ ದೇಶದ ರಕ್ಷಣಾ ಪಡೆಯ ಆಸ್ಪತ್ರೆಯಲ್ಲಿ ನೀಡಿದ ಚಿಕಿತ್ಸೆ, ಕೋವಿಡ್ ಪೀಡಿತರು ಗುಣಮುಖರಾದ ಬಗ್ಗೆ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ