ಬೇಕಿದೆ ಸಾಂಸ್ಕೃತಿಕ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ
ಸಾಂಸ್ಕೃತಿಕ ತೇರನ್ನು ಎಳೆಯಲು ನಮ್ಮೆಲ್ಲರ ಸಹಕಾರ ಸದಾ ನೀಡೋಣ ಎಂದು ಹೇಳಿದರು.
Team Udayavani, Nov 8, 2021, 8:01 PM IST
ಯಲ್ಲಾಪುರ: ಸಾಂಸ್ಕೃತಿಕ ಕಾರ್ಯಕ್ರಮಗಳು ಕೇವಲ ಮನರಂಜನೆಗೆ ಮಾತ್ರವಲ್ಲ, ನಮ್ಮ ಸಂಸ್ಕೃತಿ-ಸಂಪ್ರದಾಯ ಪರಿಚಯಿಸುವ ಕಾರ್ಯಕ್ರಮವೂ ಆಗಿದೆ ಎಂದು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಗಾಂಧೀ ಕುಟೀರದಲ್ಲಿ ಸಂಕಲ್ಪ ಉತ್ಸವದ ಎರಡನೆ ದಿನದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಾವು ಸಾಂಸ್ಕೃತಿಕವಾಗಿ ಎದ್ದು ನಿಲ್ಲಬೇಕಿದೆ. ಜೊತೆಗೆ ಸಾಂಸ್ಕೃತಿಕ ಪ್ರವಾಸೋದ್ಯಮಕ್ಕೆ ಒತ್ತು ಕೊಡೋಣ. ಇಂತಹ ಉತ್ಸವದ ಮೂಲಕ ಸಾಂಸ್ಕೃತಿಕ ತೇರನ್ನು ಎಳೆಯಲು ನಮ್ಮೆಲ್ಲರ ಸಹಕಾರ ಸದಾ ನೀಡೋಣ ಎಂದು ಹೇಳಿದರು.
ಶಾಸಕಿ ರೂಪಾಲಿ ನಾಯ್ಕ… ಕಾರವಾರ ಮಾತನಾಡಿ, ಕೊರೊನಾ ನೋವಿನಲ್ಲಿ ನಮ್ಮ ಎಷ್ಟೋ ಸಂಗತಿಗಳನ್ನು ಮರೆಯುತ್ತಿದ್ದೇವೆ. ಮತ್ತೆ ನಾವು ಚಿಗುರೊಡೆದುಕೊಂಡು ಮುನ್ನಡೆಯಬೇಕು ಎಂದು ಹೇಳಿದರು. ಸಭಾಪತಿ ಬಸವರಾಜ ಹೊರಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿ ಸಂಕಲ್ಪದ ನಿರಂತರ ಸಾಂಸ್ಕೃತಿಕ ಚಟುವಟಿಕೆಯನ್ನು ಶ್ಲಾಘಿಸಿದರು.
ವಾ.ಕ.ರಾ.ರ. ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್. ಪಾಟೀಲ್, ಪ.ಪಂ ಅಧ್ಯಕ್ಷೆ ಸುನಂದಾ ದಾಸ್, ಸಂಕಲ್ಪದ ರೂವಾರಿ ಪ್ರಮೋದ ಹೆಗಡೆ ಇದ್ದರು. ಸಂಕಲ್ಪದ ಸಂಚಾಲಕ ಪ್ರಸಾದ ಹೆಗಡೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಸ್ವರ್ಣಲತಾ ಪಟಗಾರ ಮತ್ತು ಚಂದ್ರಹಾಸ ನಾಯಕ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’