ಸರಿಯಾಗಿ ಬಸ್ ಬಿಡಲು ಆಗ್ರಹ
Team Udayavani, Jun 29, 2019, 2:59 PM IST
ಶಿರಸಿ: ಶಿರಸಿ-ಹುಸರಿ ಮಾರ್ಗವಾಗಿ ಗೋಣರು, ಕಂಡ್ರಾಜಿಗೆ ಬಸ್ ಬಿಡುವಂತೆ ಆಗ್ರಹಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು.
ಶಿರಸಿ: ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಶಿರಸಿ ಹುಸರಿ ಮಾರ್ಗವಾಗಿ ಗೋಣರು, ಕಂಡ್ರಾಜಿಗೆ ಬಸ್ ಬಿಡುವಂತೆ ಆಗ್ರಹಿಸಿ ವಾಕರಸಾ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿಗೆ ಈ ಭಾಗದ ಪ್ರಯಾಣಿಕರು ಮನವಿ ಸಲ್ಲಿಸಿದರು.
ಈ ಮಾರ್ಗದಲ್ಲಿ ಬಚಗಾಂವ, ಬಸಳೇಕೊಪ್ಪ, ಕಾಳೆಹೊಂಡ, ಬಿಕ್ಕನಳ್ಳಿ, ಹುಸರಿ, ನುರಕಲಕೊಪ್ಪ, ಬ್ಯಾಗದ್ದೆ, ಬದ್ರಾಪುರ, ಕಾನಕೊಪ್ಪ, ಮಾಡನಕೇರಿ, ಗೌಡಕೊಪ್ಪ, ಗೋಣೂರು, ಕಾಯಗುಡ್ಡಿ, ಕಂಡ್ರಾಜಿ ಭಾಗದ ಗ್ರಾಮಸ್ಥರು ಪ್ರಯಾಣಿಸುತ್ತಿದ್ದು, ಅವರಿಗೆ ಸಮರ್ಪಕ ಬಸ್ ಸಂಚಾರದಿಂದ ಅನೇಕ ಅನುಕೂಲ ಆಗಲಿವೆ ಎಂದರು.
ಶಿರಸಿ-ಹುಸರಿ ಮಾರ್ಗದಲ್ಲಿ ಪ್ರತಿದಿನ ವಿವಿಧ ಸಮಯದಲ್ಲಿ 3 ಬಸ್ಗಳು ಸಂಚರಿಸುತ್ತಿದ್ದರೂ, ಶಾಲಾ-ಕಾಲೇಜು ವಿದ್ಯಾರ್ಥಿಗಳ ಸಮಯಕ್ಕೆ ಅನುಕೂಲವಾಗುವಂತೆ ಇಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರತಿದಿನ ಬೆಳಗ್ಗೆ 7ಕ್ಕೆ ಶಿರಸಿಯಿಂದ ಹುಸರಿ-ಗೊಣೂರು ಮಾರ್ಗವಾಗಿ ಹೆಚ್ಚುವರಿ ಬಸ್ ಓಡಿಸುವಂತೆ ಒತ್ತಾಯಿಸಿದರು. ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಸಿಬ್ಬಂದಿ ಪ್ರವೀಣ ಶೇಟ್, ಡಿಟಿಒ ಸುರೇಶ ನಾಯ್ಕ, ಹುಸರಿ-ಗೊಣೂರು ಮಾರ್ಗದ ಸಾರ್ವಜನಿಕರಾದ ರವಿ ಹೆಗಡೆ, ರವಿ ಗುನಗಾ, ದಾಮೋದರ ಗೌಡ, ಈಶ್ವರ ಗೌಡ, ಮಹೇಶ ನಾಯ್ಕ, ಶ್ರೀಕಾಂತ ಗಂಗೇಮತ, ಸುಭಾಸ ಗುನಗಾ, ಶ್ರೀಪತಿ ಭಟ್ಟ, ವಿವೇಕಾನಂದ ಶಿರಾಲಿ, ಸತೀಶ ಹೆಗಡೆ, ಉಮಾ ಹೆಗಡೆ ಹಾಗೂ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ