ಅಕಾಡೆಮಿ ಅಧ್ಯಕ್ಷರ ನೇಮಕಾತಿಗೆ ಮೀನಮೇಷ


Team Udayavani, Oct 13, 2019, 2:18 PM IST

Udayavani Kannada Newspaper

ಶಿರಸಿ: ಕಲೆ, ಸಂಸ್ಕೃತಿಗಳ ಏಳ್ಗೆಗಾಗಿ ಸ್ಥಾಪಿತವಾದ ಅಕಾಡೆಮಿಗಳ ಅಧ್ಯಕ್ಷರ ನೇಮಕಾತಿಗೆ ಇನ್ನೂ ರಾಜ್ಯ ಸರಕಾರ ಮೀನಮೇಷ ಎಣಿಸುತ್ತಿದೆ. ಹೊಸ ಸರಕಾರ ರಚನೆಗೊಡರೂ ಮೂಗಿಗೆ ತುಪ್ಪ ಸವರುವ ಕಾರ್ಯ ಮಾಡುತ್ತಿದೆ.

ಈ ಮೊದಲು ಸಮ್ಮಿಶ್ರ ಸರಕಾರದಲ್ಲಿ ರಚನೆಗೊಂಡ ಅಕಾಡೆಮಿಗಳನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪರ ಸೂಚನೆ ಮೇರೆಗೆ ಅಕಾಡೆಮಿಗಳನ್ನು ವಿಸರ್ಜಿಸಿದ್ದರು. ಈಗಾಗಲೇ ನಿಗಮ ಮಂಡಳಿಗಳಿಗೆ ಪುನರ್‌ ನೇಮಕಗೊಳಿಸಿದ್ದರೂ ಇತ್ತ ಅಕಾಡೆಮಿ ಗಳನ್ನು ಮಾತ್ರ ನಿರ್ಲಕ್ಷ ಮಾಡಿದ್ದಕ್ಕೆ ಸಾಹಿತ್ಯ, ಸಾಂಸ್ಕೃತಿಕ ವಲಯದಲ್ಲಿ ಬೇಸರ ವ್ಯಕ್ತವಾಗಿದೆ.

ಅಲ್ಪಾಯಸ್ಸು: ಸಿದ್ದರಾಮಯ್ಯ ಅಧಿಕಾರದ ಕೊನೇ ಕ್ಷಣದಲ್ಲಿ ಯಕ್ಷಗಾನ ಸೇರಿದಂತೆ ಹಲವು ಅಕಾಡೆಮಿಗಳ ಅಧ್ಯಕ್ಷರನ್ನು, ಸದಸ್ಯರನ್ನು ನೇಮಕಗೊಳಿಸಿದ್ದರು. ಆದರೆ, ಎರಡು ತಿಂಗಳಲ್ಲಿ ಚುನಾವಣೆ ನಡೆದು ಮೈತ್ರಿ ಸರಕಾರದಲ್ಲೂ ಸಂಸತ್‌ ಚುನಾವಣೆ ಹೇಳಿ ಸೇವೆ ಸಲ್ಲಿಸಲು ಸಿಕ್ಕ ಅವಧಿ ಕೇವಲ ಒಂದರಿಂದ ಒಂದೂವರೆ ವರ್ಷ ಮಾತ್ರ. ನೂತನ ಸರಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಅಕಾಡೆಮಿಗಳ ನೇಮಕಾತಿ ರದ್ದುಗೊಳಿಸಿತ್ತು. ರದ್ದತಿ ಆದೇಶ ಹೊರಡಿಸಿ ಮೂರು ತಿಂಗಳು ಗತಿಸಿವೆ. ಯಕ್ಷಗಾನ ಅಕಾಡೆಮಿ, ಕೊಂಕಣಿ, ಬಯಲಾಟ, ನಾಟಕ, ಕೊಡವ ಸೇರಿದಂತೆ ಹಲವು ಅಕಾಡೆಮಿಗಳ ಅಧ್ಯಕ್ಷರು ಅಲ್ಪ ಅವಧಿಯಲ್ಲಿ ಸೇವೆ ಸಲ್ಲಿಸಿದ್ದರೂ ಅವರನ್ನೂ ಸರಕಾರ ಕಿತ್ತು ಹಾಕಿತ್ತು.

ಸಾಂಸ್ಕೃತಿಕ ನೀತಿ ಇದ್ದರೂ: ಕಳೆದೆರಡು ವರ್ಷಗಳ ಹಿಂದಷ್ಟೇ ರಚನೆ ಮಾಡಲಾಗಿದ್ದ ಯಕ್ಷಗಾನ ಅಕಾಡೆಮಿ ಸಹಿತ ಒಟ್ಟೂ 15 ಅಕಾಡಮಿಗಳಿಗೆ ಇನ್ನೂ ಅಧ್ಯಕ್ಷರ ನೇಮಕಾತಿ ಆಗಿಲ್ಲ. ವಿವಿಧ ಅಕಾಡೆಮಿಗಳ ಅಧ್ಯಕ್ಷರ, ಸದಸ್ಯರ ಅಧಿಕಾರ ರದ್ದುಗೊಳಿಸಿ ಅಧೀನ ಕಾರ್ಯದರ್ಶಿ ಪಿ.ಎಸ್‌. ಮಾಲತಿ ಕಳೆದ ಜು.31ರಂದು ಆದೇಶ ಮಾಡಿದ್ದರು. ಈ ಮಧ್ಯೆ ನಾಟಕ ಅಧ್ಯಕ್ಷ ಜಿ. ಲೋಕೇಶ ಸರಕಾರ ಬದಲಾದ ಕೂಡಲೇಅಕಾಡೆಮಿಗಳ ಅವಧಿ ಮೊಟಕುಗೊಳಿಸಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸಾಂಸ್ಕೃತಿಕ ನೀತಿ ಪ್ರಸ್ತಾವ ಸರಕಾರದ ಮುಂದೆ ಇದ್ದರೂ ಪ್ರಾಜ್ಞರಿರುವ ಅಕಾಡೆಮಿಗಳಿಗೆ ಈ ರಾಜಕೀಯ ಬಣ್ಣ ಸರಿಯಲ್ಲ ಎಂಬುದು ಹಕ್ಕೊತ್ತಾಯವಾಗಿದೆ.

ಇಲ್ಲೂ ಪ್ರಾತಿನಿಧ್ಯವಿಲ್ಲ: ಕಲೆ ಸಂಸ್ಕೃತಿಗಳ ಬೆಳವಣಿಗೆಗೆ ಅಕಾಡೆಮಿಗಳ ಕೊಡುಗೆ ಅನುಪಮ. ಕನ್ನಡದ ಬೆಳವಣಿಗೆಗೆ ಅಪ್ಪಟ ಕನ್ನಡದ ಕಲೆ ಯಕ್ಷಗಾನದ್ದೂ ಪಾಲು ಸಾಕಷ್ಟಿದೆ. ಆದರೆ, ರಾಜ್ಯೋತ್ಸವದಂದು ನೀಡುವ ಪ್ರಶಸ್ತಿಗೆ ಸಚಿವ ಸಿ.ಟಿ. ರವಿ ಅಧ್ಯಕ್ಷತೆಯಲ್ಲಿ ದೊಡ್ಡರಂಗೇ ಗೌಡ, ಮಲ್ಲೇಪುರಂ ವೆಂಕಟೇಶ, ಡಾ| ವಿಜಯಲಕ್ಷ್ಮೀ ಬಾಳೇಕುಂದ್ರಿ ಸೇರಿದಂತೆ ಹದಿನೇಳು ಜನರ ಪ್ರಾಜ್ಞರ ಸಮಿತಿ ನೇಮಕ ಮಾಡಲಾಗಿದೆ. ಈ ಪಟ್ಟಿಯಲ್ಲಿ ಇಡೀ ಕರ್ನಾಟಕದ ಪ್ರಾತಿನಿಧ್ಯ ಕಲೆ ಯಕ್ಷಗಾನ, ತಾಳಮದ್ದಲೆ, ಬಯಲಾಟ, ಮೂಡಲಪಾಯದ ಪ್ರಾತಿನಿಧ್ಯ ಇಲ್ಲ! ಈ ಬಾರಿ ಅಪ್ಪಟ ಕನ್ನಡದ ಕಲೆಯ ಸಾಧಕರಿಗೆ ಪುರಸ್ಕಾರ ಕೈತಪ್ಪುವುದೇ ಎಂಬ ಆತಂಕ ಕೂಡ ಮನೆ ಮಾಡಿದೆ.

ವಿಳಂಬ ಯಾಕೆ?: ರಾಜ್ಯೋತ್ಸವ ಮೊದಲಾದರೂ ಅಕಾಡೆಮಿಗಳಿಗೆ ಪುನರಜನ್ಮ ನೀಡಲಾಗುತ್ತದೆ ಎಂಬ ನಿರೀಕ್ಷೆಯೂ ಬಹುತೇಕ ಹುಸಿಯಾದಂತೆ ಆಗಿದೆ. ಮುಂದೆ ಉಪ ಚುನಾವಣೆ ಘೋಷಣೆ ಆಗುವುದರಿಂದ ಅಷ್ಟರೊಳಗೆ ಆಗದೇ ಇದ್ದರೆ ಮತ್ತೂ ಎರಡು ತಿಂಗಳು ಮುಂದೂಡಲಿದೆ!

 

-ರಾಘವೇಂದ್ರ ಬೆಟ್ಟಕೊಪ್ಪ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.