ಸಿಆರ್ಸಿ ಕಟ್ಟಡಕ್ಕೆ ಹೊಸ ರೂಪ
Team Udayavani, Jan 24, 2021, 3:41 PM IST
ಕುಮಟಾ: ತಾಲೂಕಿನ ಹೊಲನಗದ್ದೆಯಲ್ಲಿರುವ ಸಿಆರ್ಸಿ ಕಟ್ಟಡಕ್ಕೆ ಹೊಸರೂಪ ನೀಡಲಾಗಿದ್ದು, ಬಣ್ಣ ಕಳೆದುಕೊಂಡು ಮಸುಕಾದ ಕಟ್ಟಡವೀಗ ಸುಣ್ಣ ಬಣ್ಣಗಳಿಂದ ಅಲಂಕೃತಗೊಂಡಿದೆ.
ಕಟ್ಟಡದ ಹೊರ ಆವರಣದ ಗೋಡೆಗಳು ಗ್ರಾಮೀಣ ಸೊಗಡಿನ ವರ್ಲಿ ಚಿತ್ರಗಳಿಂದ ಸುಂದರವಾಗಿ ಕಂಗೊಳಿಸುತ್ತಿದೆ. ಒಳ ಗೋಡೆಗಳು ದೇಶದ ಮಹಾಪುರುಷರ ಚಿತ್ರ ಹಾಗೂ ಕನ್ನಡ ನಾಡಿನ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಚಿತ್ರಗಳನ್ನು ಹೊಂದಿದ್ದು, ಇದರ ಜೊತೆಗೆ ಕ್ಲಸ್ಟರ್ನ ಅವಶ್ಯಕ ಮಾಹಿತಿಗಳನ್ನೂ ಒಳಗೊಂಡಿದ್ದು, ಕಟ್ಟಡದ ಸುರಕ್ಷತೆ ದೃಷ್ಟಿಯಿಂದ ಸ್ಲ್ಯಾಪ್ ಮೇಲೆ ಹಂಚಿನ ಹೊದಿಕೆ ಅಳವಡಿಸಲಾಗಿದೆ.
ಇದನ್ನೂ ಓದಿ:ಸೋಡಿಗದ್ದೆ ಮಹಾಸತಿ ಜಾತ್ರೋತ್ಸವ ಆರಂಭ
ಒಟ್ಟಿನಲ್ಲಿ ಅಧಿಕಾರಿಗಳಲ್ಲಿ ಇಚ್ಛಾಶಕ್ತಿ ಇದ್ದರೆ ತಮ್ಮ ಕಾರ್ಯಾಲಯವನ್ನು ಹೇಗೆ ಆಕರ್ಷಣೀಯ ಕೇಂದ್ರವನ್ನಾಗಿ ಪರಿವರ್ತಿಸಬಲ್ಲರು ಎಂಬುದಕ್ಕೆ ಹೊಲನಗದ್ದೆ ಸಿಆರ್ಸಿ ಕಟ್ಟಡ ಉತ್ತಮ ಉದಾಹರಣೆಯಾಗಿದೆ. ಇಲ್ಲಿ ಕಳೆದ ಮೂರು ವರ್ಷಗಳಿಂದ ಸಿಆರ್ ಪಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರದೀಪ ನಾಯಕರು ತಮ್ಮ ಸಕಾರಾತ್ಮಕ ನಿರ್ಧಾರದಿಂದ ಈ ಬದಲಾವಣೆಗೆ ಕಾರಣರಾಗಿದ್ದಾರೆ. ಅವರ ಈ ಕಾರ್ಯಕ್ಕೆ ಶೈಕ್ಷಣಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ