ಹಳಿಯಾಳದಲ್ಲಿ ಗೋ ವಧಾಲಯವಿಲ್ಲ ; ಸುನೀಲ್‌ ಹೆಗಡೆಗೆ ತಿರುಗೇಟು 


Team Udayavani, May 25, 2018, 12:13 PM IST

4-aa.jpg

ಹಳಿಯಾಳ: ಹಳಿಯಾಳದಲ್ಲಿ ಯಾವುದೇ ಗೋ ವಧಾಲಯ ಇಲ್ಲ, ಇಲ್ಲಿಯ ಚಿಕನ್‌ ಅಂಗಡಿದಾರರಿಗೆ ನಾವು ತೊಂದರೆ ಕೊಡಲ್ಲ. ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಮಾಜಿ ಶಾಸಕ ಸುನೀಲ್‌ ಹೆಗಡೆ ತಾಕತ್ತಿದ್ದರೆ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಿ ಹಾಗೂ ಪುರಸಭೆಗೆ ಬಂದು ಚರ್ಚೆ ಮಾಡಲಿ ಎಂದು ಪುರಸಭೆ ಹಿರಿಯ ಸದಸ್ಯ ಸುರೇಶ್‌ ತಳವಾರ ಸವಾಲು ಹಾಕಿದ್ದಾರೆ.

ಸುದ್ದಿಗೊಷ್ಠಿಯಲ್ಲಿ ಮಾತನಾಡಿ ಸುನೀಲ್‌ ಹೆಗಡೆ ಇತ್ತೀಚೆಗೆ ನೀಡಿದ ಹೇಳಿಕೆಗೆ ಪ್ರತ್ಯುತ್ತರ ನೀಡಿದ ಅವರು, ಪುರಸಭೆಯಲ್ಲಿ ಸದಸ್ಯರು ದಲಾಲಗಿರಿ ಮಾಡುತ್ತಿದ್ದಾರೆಂದು ನೀಡಿದ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿ, ಇದು ಸದಸ್ಯರಿಗೆ ಅವಮಾನ ಮಾಡಿದಂತಾಗಿದೆ ಎಂಂದು ಆರೋಪಿಸಿದರು.

2002ರಲ್ಲಿ ಪಪಂ ಅಧ್ಯಕ್ಷರಾಗಿದ್ದ ಸುನೀಲ್‌ ಹೆಗಡೆ ಎರಡೂವರೆ ವರ್ಷ ಅಧಿಕಾರ ಮಾಡಿ
ಬಳಿಕ ಪೂರ್ಣ ಅವ ಧಿ ಸದಸ್ಯರಾಗಿ ಇರದೆ ಅರ್ಧಕ್ಕೆ ರಾಜೀನಾಮೆ ನೀಡಿದ್ದರಿಂದ ಪುರಸಭೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲವೆಂದರು.

ಚುನಾವಣೆಯಲ್ಲಿ ಸೋತಿರುವ ಹಾಗೂ ಹಳಿಯಾಳ ಪಟ್ಟಣದಲ್ಲಿ ಕಡಿಮೆ ಮತ ಗಳಿಸಿರುವ ಅವರಿಗೆ ಈ ಹಿಂದೆ ಜೆಡಿಎಸ್‌ ಪಕ್ಷದಲ್ಲಿದ್ದಾಗ ಇರದ ಹಿಂದುತ್ವ ಅಜೆಂಡಾ ಬಿಜೆಪಿಗೆ ಬಂದ ಮೇಲೆ ಬಂದಿದೆಯಾ? ಪೊಳ್ಳು ಹಿಂದುತ್ವದ ಡೊಂಬರಾಟ ಹಳಿಯಾಳದಲ್ಲಿ ನಡೆಯಲ್ಲ. ಮುಂದಿನ ಪುರಸಭೆ ಸೇರಿದಂತೆ ಎಲ್ಲ ಚುನಾವಣೆಗಳನ್ನು ಕಾಂಗ್ರೆಸ್‌ ಪಕ್ಷವೇ ಗೆಲ್ಲಲಿದೆ ಎಂದು ನುಡಿದರು.

ಪುರಸಭೆ ಅಧ್ಯಕ್ಷ ಶಂಕರ ಬೆಳಗಾಂವಕರ ಮಾತನಾಡಿ ಗೋ, ದನದ ಮಾಂಸದ ಮಾರುಕಟ್ಟೆ ಸರ್ಕಾರಿ ಜಾಗೆಯಲ್ಲಿ ಇಲ್ಲ. ಖಾಸಗಿ ಜಾಗೆಯಲ್ಲಿ ಇರಬಹುದು. ಅದು ನಮ್ಮ ಗಮನಕ್ಕೆ ಇಲ್ಲ. ಇನ್ನು ಚಿಕನ್‌ ಅಂಗಡಿಗಳು ಹಲವಾರು ಬಿಜೆಪಿ ಮುಖಂಡರ ಒಡೆತನದ ಜಾಗೆಯಲ್ಲಿಯೇ ನಡೆಯುತ್ತಿದ್ದು ಬಡವರ ಹೊಟ್ಟೆ ಮೇಲೆ ಹೊಡೆಯುವ ಕಾರ್ಯ ನಾವು ಮಾಡಲ್ಲ. ಚಿಕನ್‌ ಅಂಗಡಿಕಾರರಿಗೆ ಪ್ರತ್ಯೇಕ ಮಾರುಕಟ್ಟೆಗೆ ಕ್ರಿಯಾಯೋಜನೆ ಮಾಡಿದ್ದು ಸದ್ಯದಲ್ಲೇ ಆ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.

ಅಲ್ಪಸಂಖ್ಯಾತ ಸಮುದಾಯದ ಮುಖಂಡ ಹಾಗೂ ಪುರಸಭೆ ಸದಸ್ಯ ಫಯಾಜ ಶೇಖ ಹಾಗೂ ಇನಾಯಿತುಲ್ಲಾ ಬೇಪಾರಿ ಮಾತನಾಡಿ ಪಟ್ಟಣದಲ್ಲಿ ಸರ್ಕಾರಿ ಸ್ಥಳದಲ್ಲಿ ಎಲ್ಲೂ ಗೋಮಾಂಸ ಮಾರುಕಟ್ಟೆ ಇಲ್ಲ. ಮೇದಾರಗಲ್ಲಿಯ ಹಿಂದಿನ ಕಸಾಯಿಗಲ್ಲಿಯ ರಸ್ತೆಯ ಮಧ್ಯೆ ಇರುವ ದನದ ಮಾಂಸ ಮಾರುಕಟ್ಟೆಯ ಕಟ್ಟಡ ಶತಮಾನಗಳಿಂದ ಇದ್ದು ಅದನ್ನು ತೆರವುಗೊಳಿಸುವ ಪ್ರಶ್ನೆàಯೇ ಇಲ್ಲ ಎಂದರು. ಪುರಸಭೆ ಮಾಜಿ ಉಪಾಧ್ಯಕ್ಷ ಉಮೇಶ ಬೊಳಶೆಟ್ಟಿ, ನಾಮನಿರ್ದೇಶಿತ ಸದಸ್ಯ ಅನಿಲ ಫರ್ನಾಂಡಿಸ್‌ ಇದ್ದರು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.