ಹಿಂಗಾರಿನಲ್ಲಿ ಈರುಳ್ಳಿ-ಶೇಂಗಾ ಬೆಳೆಯಲು ಹಿಂದೇಟು


Team Udayavani, Dec 9, 2019, 4:05 PM IST

uk-tdy-1

ಕುಮಟಾ: ಅಕಾಲಿಕ ಮಳೆ ಹಾಗೂ ಮೋಡ ಮುಸುಕಿದ ವಾತಾವರಣದಿಂದ ಈರುಳ್ಳಿ ಹಾಗೂ ಶೇಂಗಾ ಬೆಳೆಗಾರರು ಬೆಳೆ ಬೆಳೆಯಲು ಕೊಂಚ ಹಿಂದೇಟು ಹಾಕುತ್ತಿದ್ದಾರೆ.

ತಾಲೂಕಿನ ಅಳ್ವೆಕೋಡಿ, ಹಂದಿಗೋಣ ಮತ್ತು ವನ್ನಳ್ಳಿ ಭಾಗದ ರೈತರು ಪ್ರತಿವರ್ಷ ಭತ್ತದ ಬೆಳೆ ಕಟಾವು ಮಾಡಿದ ನಂತರ ಎಕರೆಗಟ್ಟಲೆ ಪ್ರದೇಶದಲ್ಲಿ ಈರುಳ್ಳಿ ಮತ್ತು ಶೇಂಗಾ ಬೆಳೆ ಬೆಳೆಯಲು ಅಣಿಯಾಗುತ್ತಿದ್ದರು. ಆದರೆ ಈ ವರ್ಷ ನವೆಂಬರ್‌ ತಿಂಗಳವರೆಗೆ ಸುರಿದ ಮಳೆ ಮತ್ತು ಈಗಲೂ ಅಕಾಲಿಕವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೇಸಿಗೆಯಲ್ಲಿ ಬೆಳೆಯಬೇಕಾದ ಈರುಳ್ಳಿ ಹಾಗೂ ಶೇಂಗಾ ಬೆಳೆಯ ಬಿತ್ತನೆಗೆರೈತರು ಮುಂದಾಗುತ್ತಿಲ್ಲ. ಸಾಲ ಮಾಡಿ ಬೆಳೆದ ಬೆಳೆಗಳು ಮಳೆಯಿಂದ ನಾಶ ಹೊಂದಬಹುದೇ ಎಂಬ ಭಯ ರೈತರನ್ನು ಕಾಡುತ್ತಿದೆ. ಅಳ್ವೆಕೋಡಿಯ ಚೆಂಡು ಈರುಳ್ಳಿ ರಾಜ್ಯದಲ್ಲಿಯೇ ಹೆಸರುವಾಸಿಯಾಗಿದೆ.

ಇಲ್ಲಿನ ಈರುಳ್ಳಿ ಕೊಂಡೊಯ್ಯಲು ಬೇರೆ ಬೇರೆ ಜಿಲ್ಲೆ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸುತ್ತಾರೆ. ಆದರೆ ಈ ಬಾರಿ ಬೆಳೆ ಬೆಳೆಯಲು ರೈತರು ನಿರಾಸಕ್ತಿ ತೋರುತ್ತಿರುವ ಕಾರಣದಿಂದ ಬೆಳೆಯಲ್ಲಿ ಕುಂಠಿತವಾಗಿ, ಬೆಲೆಯೂ ದುಬಾರಿಯಾಗುವ ಸಾಧ್ಯತೆಯಿದೆ. ದಿನದಿಂದ ದಿನಕ್ಕೆ ಈರುಳ್ಳಿ ದರವೂ ಅಧಿಕಗೊಳ್ಳುತ್ತಿದ್ದು, ಇದರಿಂದ ಕುಮಟಾದ ಈರುಳ್ಳಿ ಬೆಳೆಗಾರರಿಗೂ ಆರ್ಥಿಕವಾಗಿ ಅನುಕೂಲವಾಗುತ್ತಿತ್ತು. ಆದರೆ ಹವಾಮಾನವೈಪರಿತ್ಯದಿಂದ ಈರುಳ್ಳಿ ಬೆಳೆಯಲು ರೈತ ಆಸಕ್ತಿ ತೋರುತ್ತಿಲ್ಲ. ಅಕಾಲಿಕವಾಗಿ ಮಳೆ ಸುರಿದರೆ ಬೆಳೆದ ಬೆಳೆಗಳೆಲ್ಲ ನಾಶವಾಗುತ್ತದೆ ಎಂಬ ಆತಂಕ ರೈತಾಪಿ ವರ್ಗದಲ್ಲಿ ಮನೆಮಾಡಿದೆ.

ಭತ್ತದ ಕೊಯ್ಲಿನ ಸಮಯದಲ್ಲಿ ಮಳೆಯಿಂದ ಸಾಕಷ್ಟು ಬೆಳೆಗಳು ನಾಶವಾಗಿದ್ದವು. ಅದೇ ರೀತಿ ಈರುಳ್ಳಿ ಮತ್ತು ಶೇಂಗಾ ಬೆಳೆ ಬೆಳೆದ ಸಂದರ್ಭದಲ್ಲಿಯೂ ಮತ್ತೆ ಮಳೆಯಾದರೆ ಬೆಳೆಗಳೆಲ್ಲ ನೀರುಪಾಲಾಗುತ್ತಿದೆ ಎಂಬ ಭಯ ಕಾಡುತ್ತಿದೆ. ಈ ಕಾರಣದಿಂದ ಶೇಂಗಾ ಮತ್ತು ಈರುಳ್ಳಿ ಬಿತ್ತನೆಗೆ ವಿಳಂಬ ಮಾಡಲಾಗುತ್ತಿದೆ ಎನ್ನುತ್ತಾರೆ ಅಳ್ವೆಕೋಡಿಯ ಕೃಷಿಕರು.

 

-ಕೆ. ದಿನೇಶ ಗಾಂವ್ಕರ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.